
ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ಅವರು ನೇಮಕಗೊಂಡಿದ್ದಾರೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಎ.ಬಿ ಬಸವರಾಜು ಫೆ.26ರಂದು ವರ್ಗಾವಣೆಗೊಂಡಿದ್ದರು.. ಆದರೆ, ಅಂದು ಯಾವುದೇ ಪೋಸ್ಟಿಂಗ್ ನೀಡಿರಲಿಲ್ಲ. ವರ್ಗಾವಣೆಗೊಂಡು ಹಲವು ದಿನಗಳ ನಂತರ ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ಅವರನ್ನು ಸರ್ಕಾರ ನೇಮಕ ಮಾಡಿದೆ…

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಲು ಸೇವಾ ಅವಧಿ ಇನ್ನೂ ಇದ್ದಾಗಲೇ ಸರ್ಕಾರ ವರ್ಗಾವಣೆ ಮಾಡಿದ್ದರಿಂದ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಯಾಗಿತ್ತು…