ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲು ಬಾಂಗ್ಲಾ ತಲುಪಿದ ಭಾರತ ತಂಡ

ನವದೆಹಲಿ : ತವರಿನಲ್ಲಿ ನಡೆಯುವ ಮುಂಬರುವ ಏಕದಿನ ಕ್ರಿಕೆಟ್ ವಿಶ್ವಕಪ್ ಗೆ ಈಗಾಗಲೇ ತಯಾರಿ ಆರಂಭಿಸಿರುವ ಟೀಂ ಇಂಡಿಯಾ ಬಾಂಗ್ಲಾದೇಶದ ವಿರುದ್ಧ ನಡೆಯಲಿರುವ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲು ರೋಹಿತ್ ಶರ್ಮಾ ನಾಯಕತ್ವದ ತಂಡ ಢಾಕಾಗೆ ಪಯಣ ಬೆಳೆಸಿದೆ.

ಡಿಸೆಂಬರ್ 4 ರಿಂದ ಆರಂಭವಾಗಲಿರುವ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಭಾಗವಹಿಸಲು ಬಿಸಿಸಿಐ ಈಗಾಗಲೇ ಹದಿನೈದು ಸದಸ್ಯರ ಪಟ್ಟಿಯನ್ನು ಪ್ರಕಟಿಸಿದ್ದು ನ್ಯೂಜಿಲೆಂಡ್ ವಿರುದ್ದ ವಿಶ್ರಾಂತಿ ಪಡೆದಿದ್ದ ನಾಯಕ ರೋಹಿತ್ ಶರ್ಮಾ ಸೇರಿದಂತೆ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ಉಪ ನಾಯಕ ಕೆ. ಎಲ್. ರಾಹುಲ್ ಬಾಂಗ್ಲಾ ವಿರುದ್ಧದ ಸರಣಿಯಲ್ಲಿ ಭಾಗವಹಿಸಲು ತಂಡಕ್ಕೆ ವಾಪಸ್ ಆಗಿದ್ದಾರೆ.

ತಂಡದಲ್ಲಿ ಆರಂಭಿಕ ಆಟಗಾರ ಶಿಖರ್ ಧವನ್, ಶ್ರೇಯಸ್ ಅಯ್ಯರ್, ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್, ರಜತ್ ಪಾಟೀದರ್, ಆಲ್ ರೌಂಡರ್ ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಸಿರಾಜ್, ಕುಲದೀಪ್ ಸೇನ್, ಶಾದುಲ್ ಟಾಕೂರ್, ದೀಪಕ್ ಚಹರ್, ಇಶಾನ್ ಕಿಶನ್, ವಾಶಿಂಗ್ಟನ್ ಸುಂದರ್, ಶಾಬಾಜ್ ಅಹಮದ್, ರಾಹುಲ್ ತ್ರಿಪಾಠಿ ತಂಡದಲ್ಲಿದ್ದಾರೆ.

ತವರಿನಲ್ಲಿ ಸದಾ ಅಚ್ಚರಿ ಫಲಿತಾಂಶ ನೀಡುವ ಬಾಂಗ್ಲಾದೇಶವನ್ನು ಹಗುರವಾಗಿ ಪರಿಗಣಿಸುವಂತಿಲ್ಲ, ಏಕದಿನ ಆಲ್ ರೌಂಡರ್ ನಂ 1 ಸ್ಥಾನದ ಆಟಗಾರ, ಸ್ಟಾರ್ ಆಲ್ ರೌಂಡರ್ ಶಕೀಬ್ ಆಲ್ ಹಸನ್ ತಂಡಕ್ಕೆ ವಾಪಸ್ ಮರಳಿದ್ದು ಬ್ಯಾಟ್ಸ್‌ಮನ್ಗಳಾದ ಲಿಟ್ಟಲ್ ದಾಸ್ ಹಾಗೂ ಮುಸ್ತಿಪರ್ ರಹೀಮ್, ಬೌಲರ್‌ಗಳಾದ ಮುಸ್ತಫಿಯರ್ ರೆಹಮಾನ್ ಹಾಗೂ ಟಸ್ಕಿನ್ ಅಹಮದ್ ಉತ್ತಮ ಫಾರ್ಮ್ ನಲ್ಲಿದ್ದು ಭಾರತಕ್ಕೆ ಸವಾಲಾಗಬಹುದು.

Ramesh Babu

Journalist

Recent Posts

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 hour ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

4 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

4 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

16 hours ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

16 hours ago

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಿಂದ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…

16 hours ago