ನವದೆಹಲಿ : ತವರಿನಲ್ಲಿ ನಡೆಯುವ ಮುಂಬರುವ ಏಕದಿನ ಕ್ರಿಕೆಟ್ ವಿಶ್ವಕಪ್ ಗೆ ಈಗಾಗಲೇ ತಯಾರಿ ಆರಂಭಿಸಿರುವ ಟೀಂ ಇಂಡಿಯಾ ಬಾಂಗ್ಲಾದೇಶದ ವಿರುದ್ಧ ನಡೆಯಲಿರುವ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲು ರೋಹಿತ್ ಶರ್ಮಾ ನಾಯಕತ್ವದ ತಂಡ ಢಾಕಾಗೆ ಪಯಣ ಬೆಳೆಸಿದೆ.
ಡಿಸೆಂಬರ್ 4 ರಿಂದ ಆರಂಭವಾಗಲಿರುವ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಭಾಗವಹಿಸಲು ಬಿಸಿಸಿಐ ಈಗಾಗಲೇ ಹದಿನೈದು ಸದಸ್ಯರ ಪಟ್ಟಿಯನ್ನು ಪ್ರಕಟಿಸಿದ್ದು ನ್ಯೂಜಿಲೆಂಡ್ ವಿರುದ್ದ ವಿಶ್ರಾಂತಿ ಪಡೆದಿದ್ದ ನಾಯಕ ರೋಹಿತ್ ಶರ್ಮಾ ಸೇರಿದಂತೆ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ಉಪ ನಾಯಕ ಕೆ. ಎಲ್. ರಾಹುಲ್ ಬಾಂಗ್ಲಾ ವಿರುದ್ಧದ ಸರಣಿಯಲ್ಲಿ ಭಾಗವಹಿಸಲು ತಂಡಕ್ಕೆ ವಾಪಸ್ ಆಗಿದ್ದಾರೆ.
ತಂಡದಲ್ಲಿ ಆರಂಭಿಕ ಆಟಗಾರ ಶಿಖರ್ ಧವನ್, ಶ್ರೇಯಸ್ ಅಯ್ಯರ್, ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಬ್ ಪಂತ್, ರಜತ್ ಪಾಟೀದರ್, ಆಲ್ ರೌಂಡರ್ ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಸಿರಾಜ್, ಕುಲದೀಪ್ ಸೇನ್, ಶಾದುಲ್ ಟಾಕೂರ್, ದೀಪಕ್ ಚಹರ್, ಇಶಾನ್ ಕಿಶನ್, ವಾಶಿಂಗ್ಟನ್ ಸುಂದರ್, ಶಾಬಾಜ್ ಅಹಮದ್, ರಾಹುಲ್ ತ್ರಿಪಾಠಿ ತಂಡದಲ್ಲಿದ್ದಾರೆ.
ತವರಿನಲ್ಲಿ ಸದಾ ಅಚ್ಚರಿ ಫಲಿತಾಂಶ ನೀಡುವ ಬಾಂಗ್ಲಾದೇಶವನ್ನು ಹಗುರವಾಗಿ ಪರಿಗಣಿಸುವಂತಿಲ್ಲ, ಏಕದಿನ ಆಲ್ ರೌಂಡರ್ ನಂ 1 ಸ್ಥಾನದ ಆಟಗಾರ, ಸ್ಟಾರ್ ಆಲ್ ರೌಂಡರ್ ಶಕೀಬ್ ಆಲ್ ಹಸನ್ ತಂಡಕ್ಕೆ ವಾಪಸ್ ಮರಳಿದ್ದು ಬ್ಯಾಟ್ಸ್ಮನ್ಗಳಾದ ಲಿಟ್ಟಲ್ ದಾಸ್ ಹಾಗೂ ಮುಸ್ತಿಪರ್ ರಹೀಮ್, ಬೌಲರ್ಗಳಾದ ಮುಸ್ತಫಿಯರ್ ರೆಹಮಾನ್ ಹಾಗೂ ಟಸ್ಕಿನ್ ಅಹಮದ್ ಉತ್ತಮ ಫಾರ್ಮ್ ನಲ್ಲಿದ್ದು ಭಾರತಕ್ಕೆ ಸವಾಲಾಗಬಹುದು.
ಕೋಲಾರ: ಶಾಸಕ ಕೊತ್ತೂರು ಮಂಜುನಾಥ್ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ…
ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ. ವರ್ಷದಿಂದ ವರ್ಷಕ್ಕೆ ಏರುತ್ತಿರುವ…
ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…