ನವದೆಹಲಿ : ತವರಿನಲ್ಲಿ ನಡೆಯುವ ಮುಂಬರುವ ಏಕದಿನ ಕ್ರಿಕೆಟ್ ವಿಶ್ವಕಪ್ ಗೆ ಈಗಾಗಲೇ ತಯಾರಿ ಆರಂಭಿಸಿರುವ ಟೀಂ ಇಂಡಿಯಾ ಬಾಂಗ್ಲಾದೇಶದ ವಿರುದ್ಧ ನಡೆಯಲಿರುವ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲು ರೋಹಿತ್ ಶರ್ಮಾ ನಾಯಕತ್ವದ ತಂಡ ಢಾಕಾಗೆ ಪಯಣ ಬೆಳೆಸಿದೆ.
ಡಿಸೆಂಬರ್ 4 ರಿಂದ ಆರಂಭವಾಗಲಿರುವ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಭಾಗವಹಿಸಲು ಬಿಸಿಸಿಐ ಈಗಾಗಲೇ ಹದಿನೈದು ಸದಸ್ಯರ ಪಟ್ಟಿಯನ್ನು ಪ್ರಕಟಿಸಿದ್ದು ನ್ಯೂಜಿಲೆಂಡ್ ವಿರುದ್ದ ವಿಶ್ರಾಂತಿ ಪಡೆದಿದ್ದ ನಾಯಕ ರೋಹಿತ್ ಶರ್ಮಾ ಸೇರಿದಂತೆ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ಉಪ ನಾಯಕ ಕೆ. ಎಲ್. ರಾಹುಲ್ ಬಾಂಗ್ಲಾ ವಿರುದ್ಧದ ಸರಣಿಯಲ್ಲಿ ಭಾಗವಹಿಸಲು ತಂಡಕ್ಕೆ ವಾಪಸ್ ಆಗಿದ್ದಾರೆ.
ತಂಡದಲ್ಲಿ ಆರಂಭಿಕ ಆಟಗಾರ ಶಿಖರ್ ಧವನ್, ಶ್ರೇಯಸ್ ಅಯ್ಯರ್, ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಬ್ ಪಂತ್, ರಜತ್ ಪಾಟೀದರ್, ಆಲ್ ರೌಂಡರ್ ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಸಿರಾಜ್, ಕುಲದೀಪ್ ಸೇನ್, ಶಾದುಲ್ ಟಾಕೂರ್, ದೀಪಕ್ ಚಹರ್, ಇಶಾನ್ ಕಿಶನ್, ವಾಶಿಂಗ್ಟನ್ ಸುಂದರ್, ಶಾಬಾಜ್ ಅಹಮದ್, ರಾಹುಲ್ ತ್ರಿಪಾಠಿ ತಂಡದಲ್ಲಿದ್ದಾರೆ.
ತವರಿನಲ್ಲಿ ಸದಾ ಅಚ್ಚರಿ ಫಲಿತಾಂಶ ನೀಡುವ ಬಾಂಗ್ಲಾದೇಶವನ್ನು ಹಗುರವಾಗಿ ಪರಿಗಣಿಸುವಂತಿಲ್ಲ, ಏಕದಿನ ಆಲ್ ರೌಂಡರ್ ನಂ 1 ಸ್ಥಾನದ ಆಟಗಾರ, ಸ್ಟಾರ್ ಆಲ್ ರೌಂಡರ್ ಶಕೀಬ್ ಆಲ್ ಹಸನ್ ತಂಡಕ್ಕೆ ವಾಪಸ್ ಮರಳಿದ್ದು ಬ್ಯಾಟ್ಸ್ಮನ್ಗಳಾದ ಲಿಟ್ಟಲ್ ದಾಸ್ ಹಾಗೂ ಮುಸ್ತಿಪರ್ ರಹೀಮ್, ಬೌಲರ್ಗಳಾದ ಮುಸ್ತಫಿಯರ್ ರೆಹಮಾನ್ ಹಾಗೂ ಟಸ್ಕಿನ್ ಅಹಮದ್ ಉತ್ತಮ ಫಾರ್ಮ್ ನಲ್ಲಿದ್ದು ಭಾರತಕ್ಕೆ ಸವಾಲಾಗಬಹುದು.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…