ನವದೆಹಲಿ : ತವರಿನಲ್ಲಿ ನಡೆಯುವ ಮುಂಬರುವ ಏಕದಿನ ಕ್ರಿಕೆಟ್ ವಿಶ್ವಕಪ್ ಗೆ ಈಗಾಗಲೇ ತಯಾರಿ ಆರಂಭಿಸಿರುವ ಟೀಂ ಇಂಡಿಯಾ ಬಾಂಗ್ಲಾದೇಶದ ವಿರುದ್ಧ ನಡೆಯಲಿರುವ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲು ರೋಹಿತ್ ಶರ್ಮಾ ನಾಯಕತ್ವದ ತಂಡ ಢಾಕಾಗೆ ಪಯಣ ಬೆಳೆಸಿದೆ.
ಡಿಸೆಂಬರ್ 4 ರಿಂದ ಆರಂಭವಾಗಲಿರುವ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಭಾಗವಹಿಸಲು ಬಿಸಿಸಿಐ ಈಗಾಗಲೇ ಹದಿನೈದು ಸದಸ್ಯರ ಪಟ್ಟಿಯನ್ನು ಪ್ರಕಟಿಸಿದ್ದು ನ್ಯೂಜಿಲೆಂಡ್ ವಿರುದ್ದ ವಿಶ್ರಾಂತಿ ಪಡೆದಿದ್ದ ನಾಯಕ ರೋಹಿತ್ ಶರ್ಮಾ ಸೇರಿದಂತೆ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ಉಪ ನಾಯಕ ಕೆ. ಎಲ್. ರಾಹುಲ್ ಬಾಂಗ್ಲಾ ವಿರುದ್ಧದ ಸರಣಿಯಲ್ಲಿ ಭಾಗವಹಿಸಲು ತಂಡಕ್ಕೆ ವಾಪಸ್ ಆಗಿದ್ದಾರೆ.
ತಂಡದಲ್ಲಿ ಆರಂಭಿಕ ಆಟಗಾರ ಶಿಖರ್ ಧವನ್, ಶ್ರೇಯಸ್ ಅಯ್ಯರ್, ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಬ್ ಪಂತ್, ರಜತ್ ಪಾಟೀದರ್, ಆಲ್ ರೌಂಡರ್ ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಸಿರಾಜ್, ಕುಲದೀಪ್ ಸೇನ್, ಶಾದುಲ್ ಟಾಕೂರ್, ದೀಪಕ್ ಚಹರ್, ಇಶಾನ್ ಕಿಶನ್, ವಾಶಿಂಗ್ಟನ್ ಸುಂದರ್, ಶಾಬಾಜ್ ಅಹಮದ್, ರಾಹುಲ್ ತ್ರಿಪಾಠಿ ತಂಡದಲ್ಲಿದ್ದಾರೆ.
ತವರಿನಲ್ಲಿ ಸದಾ ಅಚ್ಚರಿ ಫಲಿತಾಂಶ ನೀಡುವ ಬಾಂಗ್ಲಾದೇಶವನ್ನು ಹಗುರವಾಗಿ ಪರಿಗಣಿಸುವಂತಿಲ್ಲ, ಏಕದಿನ ಆಲ್ ರೌಂಡರ್ ನಂ 1 ಸ್ಥಾನದ ಆಟಗಾರ, ಸ್ಟಾರ್ ಆಲ್ ರೌಂಡರ್ ಶಕೀಬ್ ಆಲ್ ಹಸನ್ ತಂಡಕ್ಕೆ ವಾಪಸ್ ಮರಳಿದ್ದು ಬ್ಯಾಟ್ಸ್ಮನ್ಗಳಾದ ಲಿಟ್ಟಲ್ ದಾಸ್ ಹಾಗೂ ಮುಸ್ತಿಪರ್ ರಹೀಮ್, ಬೌಲರ್ಗಳಾದ ಮುಸ್ತಫಿಯರ್ ರೆಹಮಾನ್ ಹಾಗೂ ಟಸ್ಕಿನ್ ಅಹಮದ್ ಉತ್ತಮ ಫಾರ್ಮ್ ನಲ್ಲಿದ್ದು ಭಾರತಕ್ಕೆ ಸವಾಲಾಗಬಹುದು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…