ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲು ಬಾಂಗ್ಲಾ ತಲುಪಿದ ಭಾರತ ತಂಡ

ನವದೆಹಲಿ : ತವರಿನಲ್ಲಿ ನಡೆಯುವ ಮುಂಬರುವ ಏಕದಿನ ಕ್ರಿಕೆಟ್ ವಿಶ್ವಕಪ್ ಗೆ ಈಗಾಗಲೇ ತಯಾರಿ ಆರಂಭಿಸಿರುವ ಟೀಂ ಇಂಡಿಯಾ ಬಾಂಗ್ಲಾದೇಶದ ವಿರುದ್ಧ ನಡೆಯಲಿರುವ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲು ರೋಹಿತ್ ಶರ್ಮಾ ನಾಯಕತ್ವದ ತಂಡ ಢಾಕಾಗೆ ಪಯಣ ಬೆಳೆಸಿದೆ.

ಡಿಸೆಂಬರ್ 4 ರಿಂದ ಆರಂಭವಾಗಲಿರುವ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಭಾಗವಹಿಸಲು ಬಿಸಿಸಿಐ ಈಗಾಗಲೇ ಹದಿನೈದು ಸದಸ್ಯರ ಪಟ್ಟಿಯನ್ನು ಪ್ರಕಟಿಸಿದ್ದು ನ್ಯೂಜಿಲೆಂಡ್ ವಿರುದ್ದ ವಿಶ್ರಾಂತಿ ಪಡೆದಿದ್ದ ನಾಯಕ ರೋಹಿತ್ ಶರ್ಮಾ ಸೇರಿದಂತೆ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ಉಪ ನಾಯಕ ಕೆ. ಎಲ್. ರಾಹುಲ್ ಬಾಂಗ್ಲಾ ವಿರುದ್ಧದ ಸರಣಿಯಲ್ಲಿ ಭಾಗವಹಿಸಲು ತಂಡಕ್ಕೆ ವಾಪಸ್ ಆಗಿದ್ದಾರೆ.

ತಂಡದಲ್ಲಿ ಆರಂಭಿಕ ಆಟಗಾರ ಶಿಖರ್ ಧವನ್, ಶ್ರೇಯಸ್ ಅಯ್ಯರ್, ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್, ರಜತ್ ಪಾಟೀದರ್, ಆಲ್ ರೌಂಡರ್ ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಸಿರಾಜ್, ಕುಲದೀಪ್ ಸೇನ್, ಶಾದುಲ್ ಟಾಕೂರ್, ದೀಪಕ್ ಚಹರ್, ಇಶಾನ್ ಕಿಶನ್, ವಾಶಿಂಗ್ಟನ್ ಸುಂದರ್, ಶಾಬಾಜ್ ಅಹಮದ್, ರಾಹುಲ್ ತ್ರಿಪಾಠಿ ತಂಡದಲ್ಲಿದ್ದಾರೆ.

ತವರಿನಲ್ಲಿ ಸದಾ ಅಚ್ಚರಿ ಫಲಿತಾಂಶ ನೀಡುವ ಬಾಂಗ್ಲಾದೇಶವನ್ನು ಹಗುರವಾಗಿ ಪರಿಗಣಿಸುವಂತಿಲ್ಲ, ಏಕದಿನ ಆಲ್ ರೌಂಡರ್ ನಂ 1 ಸ್ಥಾನದ ಆಟಗಾರ, ಸ್ಟಾರ್ ಆಲ್ ರೌಂಡರ್ ಶಕೀಬ್ ಆಲ್ ಹಸನ್ ತಂಡಕ್ಕೆ ವಾಪಸ್ ಮರಳಿದ್ದು ಬ್ಯಾಟ್ಸ್‌ಮನ್ಗಳಾದ ಲಿಟ್ಟಲ್ ದಾಸ್ ಹಾಗೂ ಮುಸ್ತಿಪರ್ ರಹೀಮ್, ಬೌಲರ್‌ಗಳಾದ ಮುಸ್ತಫಿಯರ್ ರೆಹಮಾನ್ ಹಾಗೂ ಟಸ್ಕಿನ್ ಅಹಮದ್ ಉತ್ತಮ ಫಾರ್ಮ್ ನಲ್ಲಿದ್ದು ಭಾರತಕ್ಕೆ ಸವಾಲಾಗಬಹುದು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

20 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

22 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

23 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

1 day ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

1 day ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

2 days ago