ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲು ಬಾಂಗ್ಲಾ ತಲುಪಿದ ಭಾರತ ತಂಡ

ನವದೆಹಲಿ : ತವರಿನಲ್ಲಿ ನಡೆಯುವ ಮುಂಬರುವ ಏಕದಿನ ಕ್ರಿಕೆಟ್ ವಿಶ್ವಕಪ್ ಗೆ ಈಗಾಗಲೇ ತಯಾರಿ ಆರಂಭಿಸಿರುವ ಟೀಂ ಇಂಡಿಯಾ ಬಾಂಗ್ಲಾದೇಶದ ವಿರುದ್ಧ ನಡೆಯಲಿರುವ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲು ರೋಹಿತ್ ಶರ್ಮಾ ನಾಯಕತ್ವದ ತಂಡ ಢಾಕಾಗೆ ಪಯಣ ಬೆಳೆಸಿದೆ.

ಡಿಸೆಂಬರ್ 4 ರಿಂದ ಆರಂಭವಾಗಲಿರುವ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಭಾಗವಹಿಸಲು ಬಿಸಿಸಿಐ ಈಗಾಗಲೇ ಹದಿನೈದು ಸದಸ್ಯರ ಪಟ್ಟಿಯನ್ನು ಪ್ರಕಟಿಸಿದ್ದು ನ್ಯೂಜಿಲೆಂಡ್ ವಿರುದ್ದ ವಿಶ್ರಾಂತಿ ಪಡೆದಿದ್ದ ನಾಯಕ ರೋಹಿತ್ ಶರ್ಮಾ ಸೇರಿದಂತೆ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ಉಪ ನಾಯಕ ಕೆ. ಎಲ್. ರಾಹುಲ್ ಬಾಂಗ್ಲಾ ವಿರುದ್ಧದ ಸರಣಿಯಲ್ಲಿ ಭಾಗವಹಿಸಲು ತಂಡಕ್ಕೆ ವಾಪಸ್ ಆಗಿದ್ದಾರೆ.

ತಂಡದಲ್ಲಿ ಆರಂಭಿಕ ಆಟಗಾರ ಶಿಖರ್ ಧವನ್, ಶ್ರೇಯಸ್ ಅಯ್ಯರ್, ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್, ರಜತ್ ಪಾಟೀದರ್, ಆಲ್ ರೌಂಡರ್ ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಸಿರಾಜ್, ಕುಲದೀಪ್ ಸೇನ್, ಶಾದುಲ್ ಟಾಕೂರ್, ದೀಪಕ್ ಚಹರ್, ಇಶಾನ್ ಕಿಶನ್, ವಾಶಿಂಗ್ಟನ್ ಸುಂದರ್, ಶಾಬಾಜ್ ಅಹಮದ್, ರಾಹುಲ್ ತ್ರಿಪಾಠಿ ತಂಡದಲ್ಲಿದ್ದಾರೆ.

ತವರಿನಲ್ಲಿ ಸದಾ ಅಚ್ಚರಿ ಫಲಿತಾಂಶ ನೀಡುವ ಬಾಂಗ್ಲಾದೇಶವನ್ನು ಹಗುರವಾಗಿ ಪರಿಗಣಿಸುವಂತಿಲ್ಲ, ಏಕದಿನ ಆಲ್ ರೌಂಡರ್ ನಂ 1 ಸ್ಥಾನದ ಆಟಗಾರ, ಸ್ಟಾರ್ ಆಲ್ ರೌಂಡರ್ ಶಕೀಬ್ ಆಲ್ ಹಸನ್ ತಂಡಕ್ಕೆ ವಾಪಸ್ ಮರಳಿದ್ದು ಬ್ಯಾಟ್ಸ್‌ಮನ್ಗಳಾದ ಲಿಟ್ಟಲ್ ದಾಸ್ ಹಾಗೂ ಮುಸ್ತಿಪರ್ ರಹೀಮ್, ಬೌಲರ್‌ಗಳಾದ ಮುಸ್ತಫಿಯರ್ ರೆಹಮಾನ್ ಹಾಗೂ ಟಸ್ಕಿನ್ ಅಹಮದ್ ಉತ್ತಮ ಫಾರ್ಮ್ ನಲ್ಲಿದ್ದು ಭಾರತಕ್ಕೆ ಸವಾಲಾಗಬಹುದು.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

3 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

9 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

12 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

16 hours ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago