ಏಡ್ಸ್ ರೋಗವು ಸ್ಪರ್ಶ, ಗಾಳಿ, ನೀರಿನಿಂದ ಬರುವುದಿಲ್ಲ- ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಕೃಷ್ಣ ಲಕ್ಕಾರೆಡ್ಡಿ

ಏಡ್ಸ್ ಸಾಂಕ್ರಾಮಿಕವನ್ನು ಕೊನೆಗೊಳಿಸಲು ನಾಯಕತ್ವ, ಅಂತಾರಾಷ್ಟ್ರೀಯ ಸಹಕಾರ ಮತ್ತು ಮಾನವ ಹಕ್ಕುಗಳ ಆಧಾರಿತ ವಿಧಾನಗಳನ್ನು ಉತ್ತೇಜಿಸುವುದು ಎಂದು ಪ್ರಭಾರ ಜಿಲ್ಲಾ ಆರೋಗ್ಯ ಅಧಿಕಾರಿಗಳಾದ ಡಾ. ಕೃಷ್ಣ ಲಕ್ಕಾರೆಡ್ಡಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶ್ರೀ ದೇವರಾಜ್ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಸಹಯೋಗದಲ್ಲಿ ವಿಶ್ವ ಏಡ್ಸ್ ದಿನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,
2025ರ ವಿಶ್ವ ಏಡ್ಸ್ ದಿನಾಚರಣೆಯ ಮುಖ್ಯ ಘೋಷ ವಾಕ್ಯವೆಂದರೆ ಅಡೆತಡೆಗಳನ್ನು ನಿವಾರಿಸುವುದು ಏಡ್ಸ್ ಪ್ರತಿಕ್ರಿಯೆಯನ್ನು ಪರಿವರ್ತಿಸುವುದು ಎಂದರು.

ಎ.ಆರ್‌.ಟಿ ಅಧಿಕಾರಿಗಳಾದ ಡಾ. ನಿರಂಜನ್ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ಏಡ್ಸ್ ಆರಂಭಿಕ ಹಂತದಲ್ಲಿ ಜ್ವರ, ಗಂಟಲು ನೋವು ಸ್ನಾಯು ನೋವು, ಊದಿಕೊಂಡ ದುಗ್ದ್ ರಸ, ಗ್ರಂಥಿಗಳು ಕಂಡು ಬರಬಹುದು, ಏಡ್ಸ್ ಪ್ರಾರಂಭದ ಹಂತದಲ್ಲಿ ತೂಕ ನಷ್ಟ ದೀರ್ಘಕಾಲದ ಅತಿಸಾರ, ತೀವ್ರ ಆಯಾಸ, ರಾತ್ರಿ ಬೆವರುವಿಕೆ ಮತ್ತು ಸಣ್ಣ ಸೋಂಕುಗಳು ಕೂಡ ಗಂಭೀರ ಆಗಬಹುದು ಎಂದರು.

ಡ್ಯಾಪ್ಕೋ ಮತ್ತು ಕ್ಷಯ ವಿಭಾಗದ ಡಾ. ನಾಗೇಶ್ ಎಸ್ ಮಾತನಾಡಿ, ಏಡ್ಸ್ ಕುರಿತಾಗಿ ಮೂಡನಂಬಿಕೆಗಳಿಂದ ದೂರ ಇರಬೇಕು, ಏಡ್ಸ್ ರೋಗವು ಕೀಟಗಳಿಂದ, ಸ್ಪರ್ಶದಿಂದ, ಗಾಳಿ, ನೀರು ಸಾಮಾಜಿಕ ಸಂಪರ್ಕದ ಮೂಲಕ ಹರಡುವುದಿಲ್ಲ, ಏಡ್ಸ್ ರೋಗವು ರಕ್ತ, ವೀರ್ಯ, ಯೋನಿ ಸ್ರಾವ ಮತ್ತು ತಾಯಿಯ ಹಾಲಿನ ಮೂಲಕ ಹರಡುತ್ತದೆ, ನಿಖರವಾದ ಮಾಹಿತಿಯನ್ನು ಪಡೆಯುವುದು ಮತ್ತು ಹರಡುವಿಕೆಯನ್ನು ತಡೆಯುವುದು ಏಡ್ಸ್ ದಿನದ ಮುಖ್ಯ ಉದ್ದೇಶ ಎಂದರು.

ಪ್ರಾಂಶುಪಾಲರಾದ ಡಾ. ಗೌರಪ್ಪ ಎಂ. ಎಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ವಹಿಸಿದ್ದರು.

ಏಡ್ಸ್ ನಿಯಂತ್ರಣ ಕಾರ್ಯಕ್ರಮಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಡಾ. ಚೈತನ್ಯ ಇಂದ್ರಾಣಿ, ಡಾ. ಎಂ. ಚಿಕ್ಕಣ್ಣ, ಶ್ರೀಮತಿ ಜಮುನಾ ಎಲ್. ಕೆ, ಶ್ರೀಮತಿ ಸ್ವಪ್ನ ಎ, ಶ್ರೀ ಹರೀಶ್, ರವೀಶ್, ಬಾಬು ಎಸ್ ರವರನ್ನು
ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ. ಶಾರದಾ ನಾಗನಾಥ್, ಉಪ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ರಮೇಶ್, ಕಾಲೇಜಿನ ಉಪ ಪ್ರಾಂಶುಪಾಲರಾದ ಕೆ. ದಕ್ಷಿಣ ಮೂರ್ತಿ, ಎನ್.ಎಸ್.ಎಸ್ ಅಧಿಕಾರಿಗಳಾದ ಡಾ. ಎಂ ಚಿಕ್ಕಣ್ಣ, ವಿಭಾಗದ ಮುಖ್ಯಸ್ಥರುಗಳಾದ ಸಿ.ಪಿ ಪ್ರಕಾಶ್, ಚೈತ್ರ, ಆರ್.ಆರ್.ಸಿ ಮತ್ತು ವೈ.ಆರ್.ಸಿ ಸಂಚಾಲಕರಾದ ಕೀರ್ತನ ಪ್ರಾಧ್ಯಾಪಕರಾದ ದಿವ್ಯ, ಲಕ್ಷ್ಮೀಶ, ಆದೇಶ್, ವರುಣ್, ಸಿಬ್ಬಂದಿಗಳಾದ ರಮೇಶ್, ರವಿ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

1 hour ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

13 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

14 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

14 hours ago

ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸಿ ಗೋವಿಂದಪ್ಪ ಅವಿರೋಧ ಆಯ್ಕೆ

ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…

14 hours ago

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಜಿಲ್ಲೆಯ 99,828 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ- ಸಚಿವ ಕೆ.ಎಚ್ ಮುನಿಯಪ್ಪ

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…

21 hours ago