ಏಡ್ಸ್ ರೋಗವು ಸ್ಪರ್ಶ, ಗಾಳಿ, ನೀರಿನಿಂದ ಬರುವುದಿಲ್ಲ- ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಕೃಷ್ಣ ಲಕ್ಕಾರೆಡ್ಡಿ

ಏಡ್ಸ್ ಸಾಂಕ್ರಾಮಿಕವನ್ನು ಕೊನೆಗೊಳಿಸಲು ನಾಯಕತ್ವ, ಅಂತಾರಾಷ್ಟ್ರೀಯ ಸಹಕಾರ ಮತ್ತು ಮಾನವ ಹಕ್ಕುಗಳ ಆಧಾರಿತ ವಿಧಾನಗಳನ್ನು ಉತ್ತೇಜಿಸುವುದು ಎಂದು ಪ್ರಭಾರ ಜಿಲ್ಲಾ ಆರೋಗ್ಯ ಅಧಿಕಾರಿಗಳಾದ ಡಾ. ಕೃಷ್ಣ ಲಕ್ಕಾರೆಡ್ಡಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶ್ರೀ ದೇವರಾಜ್ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಸಹಯೋಗದಲ್ಲಿ ವಿಶ್ವ ಏಡ್ಸ್ ದಿನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,
2025ರ ವಿಶ್ವ ಏಡ್ಸ್ ದಿನಾಚರಣೆಯ ಮುಖ್ಯ ಘೋಷ ವಾಕ್ಯವೆಂದರೆ ಅಡೆತಡೆಗಳನ್ನು ನಿವಾರಿಸುವುದು ಏಡ್ಸ್ ಪ್ರತಿಕ್ರಿಯೆಯನ್ನು ಪರಿವರ್ತಿಸುವುದು ಎಂದರು.

ಎ.ಆರ್‌.ಟಿ ಅಧಿಕಾರಿಗಳಾದ ಡಾ. ನಿರಂಜನ್ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ಏಡ್ಸ್ ಆರಂಭಿಕ ಹಂತದಲ್ಲಿ ಜ್ವರ, ಗಂಟಲು ನೋವು ಸ್ನಾಯು ನೋವು, ಊದಿಕೊಂಡ ದುಗ್ದ್ ರಸ, ಗ್ರಂಥಿಗಳು ಕಂಡು ಬರಬಹುದು, ಏಡ್ಸ್ ಪ್ರಾರಂಭದ ಹಂತದಲ್ಲಿ ತೂಕ ನಷ್ಟ ದೀರ್ಘಕಾಲದ ಅತಿಸಾರ, ತೀವ್ರ ಆಯಾಸ, ರಾತ್ರಿ ಬೆವರುವಿಕೆ ಮತ್ತು ಸಣ್ಣ ಸೋಂಕುಗಳು ಕೂಡ ಗಂಭೀರ ಆಗಬಹುದು ಎಂದರು.

ಡ್ಯಾಪ್ಕೋ ಮತ್ತು ಕ್ಷಯ ವಿಭಾಗದ ಡಾ. ನಾಗೇಶ್ ಎಸ್ ಮಾತನಾಡಿ, ಏಡ್ಸ್ ಕುರಿತಾಗಿ ಮೂಡನಂಬಿಕೆಗಳಿಂದ ದೂರ ಇರಬೇಕು, ಏಡ್ಸ್ ರೋಗವು ಕೀಟಗಳಿಂದ, ಸ್ಪರ್ಶದಿಂದ, ಗಾಳಿ, ನೀರು ಸಾಮಾಜಿಕ ಸಂಪರ್ಕದ ಮೂಲಕ ಹರಡುವುದಿಲ್ಲ, ಏಡ್ಸ್ ರೋಗವು ರಕ್ತ, ವೀರ್ಯ, ಯೋನಿ ಸ್ರಾವ ಮತ್ತು ತಾಯಿಯ ಹಾಲಿನ ಮೂಲಕ ಹರಡುತ್ತದೆ, ನಿಖರವಾದ ಮಾಹಿತಿಯನ್ನು ಪಡೆಯುವುದು ಮತ್ತು ಹರಡುವಿಕೆಯನ್ನು ತಡೆಯುವುದು ಏಡ್ಸ್ ದಿನದ ಮುಖ್ಯ ಉದ್ದೇಶ ಎಂದರು.

ಪ್ರಾಂಶುಪಾಲರಾದ ಡಾ. ಗೌರಪ್ಪ ಎಂ. ಎಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ವಹಿಸಿದ್ದರು.

ಏಡ್ಸ್ ನಿಯಂತ್ರಣ ಕಾರ್ಯಕ್ರಮಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಡಾ. ಚೈತನ್ಯ ಇಂದ್ರಾಣಿ, ಡಾ. ಎಂ. ಚಿಕ್ಕಣ್ಣ, ಶ್ರೀಮತಿ ಜಮುನಾ ಎಲ್. ಕೆ, ಶ್ರೀಮತಿ ಸ್ವಪ್ನ ಎ, ಶ್ರೀ ಹರೀಶ್, ರವೀಶ್, ಬಾಬು ಎಸ್ ರವರನ್ನು
ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ. ಶಾರದಾ ನಾಗನಾಥ್, ಉಪ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ರಮೇಶ್, ಕಾಲೇಜಿನ ಉಪ ಪ್ರಾಂಶುಪಾಲರಾದ ಕೆ. ದಕ್ಷಿಣ ಮೂರ್ತಿ, ಎನ್.ಎಸ್.ಎಸ್ ಅಧಿಕಾರಿಗಳಾದ ಡಾ. ಎಂ ಚಿಕ್ಕಣ್ಣ, ವಿಭಾಗದ ಮುಖ್ಯಸ್ಥರುಗಳಾದ ಸಿ.ಪಿ ಪ್ರಕಾಶ್, ಚೈತ್ರ, ಆರ್.ಆರ್.ಸಿ ಮತ್ತು ವೈ.ಆರ್.ಸಿ ಸಂಚಾಲಕರಾದ ಕೀರ್ತನ ಪ್ರಾಧ್ಯಾಪಕರಾದ ದಿವ್ಯ, ಲಕ್ಷ್ಮೀಶ, ಆದೇಶ್, ವರುಣ್, ಸಿಬ್ಬಂದಿಗಳಾದ ರಮೇಶ್, ರವಿ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

4 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

4 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

12 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

1 day ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

1 day ago