ಏಡ್ಸ್ ರೋಗವು ಸ್ಪರ್ಶ, ಗಾಳಿ, ನೀರಿನಿಂದ ಬರುವುದಿಲ್ಲ- ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಕೃಷ್ಣ ಲಕ್ಕಾರೆಡ್ಡಿ

ಏಡ್ಸ್ ಸಾಂಕ್ರಾಮಿಕವನ್ನು ಕೊನೆಗೊಳಿಸಲು ನಾಯಕತ್ವ, ಅಂತಾರಾಷ್ಟ್ರೀಯ ಸಹಕಾರ ಮತ್ತು ಮಾನವ ಹಕ್ಕುಗಳ ಆಧಾರಿತ ವಿಧಾನಗಳನ್ನು ಉತ್ತೇಜಿಸುವುದು ಎಂದು ಪ್ರಭಾರ ಜಿಲ್ಲಾ ಆರೋಗ್ಯ ಅಧಿಕಾರಿಗಳಾದ ಡಾ. ಕೃಷ್ಣ ಲಕ್ಕಾರೆಡ್ಡಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶ್ರೀ ದೇವರಾಜ್ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಸಹಯೋಗದಲ್ಲಿ ವಿಶ್ವ ಏಡ್ಸ್ ದಿನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,
2025ರ ವಿಶ್ವ ಏಡ್ಸ್ ದಿನಾಚರಣೆಯ ಮುಖ್ಯ ಘೋಷ ವಾಕ್ಯವೆಂದರೆ ಅಡೆತಡೆಗಳನ್ನು ನಿವಾರಿಸುವುದು ಏಡ್ಸ್ ಪ್ರತಿಕ್ರಿಯೆಯನ್ನು ಪರಿವರ್ತಿಸುವುದು ಎಂದರು.

ಎ.ಆರ್‌.ಟಿ ಅಧಿಕಾರಿಗಳಾದ ಡಾ. ನಿರಂಜನ್ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ಏಡ್ಸ್ ಆರಂಭಿಕ ಹಂತದಲ್ಲಿ ಜ್ವರ, ಗಂಟಲು ನೋವು ಸ್ನಾಯು ನೋವು, ಊದಿಕೊಂಡ ದುಗ್ದ್ ರಸ, ಗ್ರಂಥಿಗಳು ಕಂಡು ಬರಬಹುದು, ಏಡ್ಸ್ ಪ್ರಾರಂಭದ ಹಂತದಲ್ಲಿ ತೂಕ ನಷ್ಟ ದೀರ್ಘಕಾಲದ ಅತಿಸಾರ, ತೀವ್ರ ಆಯಾಸ, ರಾತ್ರಿ ಬೆವರುವಿಕೆ ಮತ್ತು ಸಣ್ಣ ಸೋಂಕುಗಳು ಕೂಡ ಗಂಭೀರ ಆಗಬಹುದು ಎಂದರು.

ಡ್ಯಾಪ್ಕೋ ಮತ್ತು ಕ್ಷಯ ವಿಭಾಗದ ಡಾ. ನಾಗೇಶ್ ಎಸ್ ಮಾತನಾಡಿ, ಏಡ್ಸ್ ಕುರಿತಾಗಿ ಮೂಡನಂಬಿಕೆಗಳಿಂದ ದೂರ ಇರಬೇಕು, ಏಡ್ಸ್ ರೋಗವು ಕೀಟಗಳಿಂದ, ಸ್ಪರ್ಶದಿಂದ, ಗಾಳಿ, ನೀರು ಸಾಮಾಜಿಕ ಸಂಪರ್ಕದ ಮೂಲಕ ಹರಡುವುದಿಲ್ಲ, ಏಡ್ಸ್ ರೋಗವು ರಕ್ತ, ವೀರ್ಯ, ಯೋನಿ ಸ್ರಾವ ಮತ್ತು ತಾಯಿಯ ಹಾಲಿನ ಮೂಲಕ ಹರಡುತ್ತದೆ, ನಿಖರವಾದ ಮಾಹಿತಿಯನ್ನು ಪಡೆಯುವುದು ಮತ್ತು ಹರಡುವಿಕೆಯನ್ನು ತಡೆಯುವುದು ಏಡ್ಸ್ ದಿನದ ಮುಖ್ಯ ಉದ್ದೇಶ ಎಂದರು.

ಪ್ರಾಂಶುಪಾಲರಾದ ಡಾ. ಗೌರಪ್ಪ ಎಂ. ಎಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ವಹಿಸಿದ್ದರು.

ಏಡ್ಸ್ ನಿಯಂತ್ರಣ ಕಾರ್ಯಕ್ರಮಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಡಾ. ಚೈತನ್ಯ ಇಂದ್ರಾಣಿ, ಡಾ. ಎಂ. ಚಿಕ್ಕಣ್ಣ, ಶ್ರೀಮತಿ ಜಮುನಾ ಎಲ್. ಕೆ, ಶ್ರೀಮತಿ ಸ್ವಪ್ನ ಎ, ಶ್ರೀ ಹರೀಶ್, ರವೀಶ್, ಬಾಬು ಎಸ್ ರವರನ್ನು
ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ. ಶಾರದಾ ನಾಗನಾಥ್, ಉಪ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ರಮೇಶ್, ಕಾಲೇಜಿನ ಉಪ ಪ್ರಾಂಶುಪಾಲರಾದ ಕೆ. ದಕ್ಷಿಣ ಮೂರ್ತಿ, ಎನ್.ಎಸ್.ಎಸ್ ಅಧಿಕಾರಿಗಳಾದ ಡಾ. ಎಂ ಚಿಕ್ಕಣ್ಣ, ವಿಭಾಗದ ಮುಖ್ಯಸ್ಥರುಗಳಾದ ಸಿ.ಪಿ ಪ್ರಕಾಶ್, ಚೈತ್ರ, ಆರ್.ಆರ್.ಸಿ ಮತ್ತು ವೈ.ಆರ್.ಸಿ ಸಂಚಾಲಕರಾದ ಕೀರ್ತನ ಪ್ರಾಧ್ಯಾಪಕರಾದ ದಿವ್ಯ, ಲಕ್ಷ್ಮೀಶ, ಆದೇಶ್, ವರುಣ್, ಸಿಬ್ಬಂದಿಗಳಾದ ರಮೇಶ್, ರವಿ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

7 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

8 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

16 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

3 days ago