ಏಪ್ರಿಲ್ ಮಾಹೆಯಲ್ಲಿ 2500 ನಿವೇಶನ ಹಂಚಿಕೆ ಗುರಿ- ಸಚಿವ ಕೆ.ಎಚ್. ಮುನಿಯಪ್ಪ

ದೇವನಹಳ್ಳಿ ತಾಲ್ಲೂಕಿನ ನಿವೇಶನ ರಹಿತ ಅರ್ಹ ಫಲಾನುಭವಿಗಳನ್ನು ಈಗಾಗಲೇ ಗುರ್ತಿಸಿಲಾಗಿದ್ದು, ಏಪ್ರಿಲ್ ಮಾಹೆಯಲ್ಲಿ 2500 ನಿವೇಶನ ಹಂಚಿಕೆ ಮಾಡುವ ಗುರಿ ಇದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಅವರು ಹೇಳಿದರು.

ಕನ್ನಮಂಗಲ ಗ್ರಾಮ ಪಂಚಾಯತಿ ಆವರಣದಲ್ಲಿ ನಡೆದ 2024-25ನೇ ಸಾಲಿನ ಗ್ರಾಮಸಭೆಯಲ್ಲಿ ಮಾತನಾಡಿದ ಸಚಿವರು ಮಾರ್ಚ್ ಅಂತ್ಯದಲ್ಲಿ ನಿವೇಶನ ನೀಡುವ ಗುರಿ ಹೊಂದಲಾಗಿತ್ತು ಕಾರಣಾಂತರಗಳಿಂದ ಮುಂದಿಡಲಾಗಿದ್ದು ಏಪ್ರಿಲ್ ಮಾಹೆಯಲ್ಲಿ ದೊಡ್ಡಮಟ್ಟದಲ್ಲಿ ಕಾರ್ಯಕ್ರಮ ಏರ್ಪಡಿಸಿ ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಲಾಗುವುದು ಎಂದರು.

ಪ್ರತಿ ಗ್ರಾಮಪಂಚಾಯತಿಯಲ್ಲಿ ಹೊಸ ಮಾದರಿ ಶಾಲೆಗಳ ನಿರ್ಮಾಣದ ಗುರಿಯನ್ನು ಹೊಂದಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಲಭ್ಯವಾದಲ್ಲಿ ಭವಿಷ್ಯದಲ್ಲಿ ಮಕ್ಕಳು ಉನ್ನತ ಹುದ್ದೆಗಳನ್ನು ಪಡೆಯಲು ಸಹಕಾರಿಯಾಗುತ್ತೆ ಎಂದು ಹೇಳಿದರು.

ಮಕ್ಕಳ ಪೋಷಣೆ, ಪಾಲನೆಯಲ್ಲಿ ತಾಯಂದಿರ ಪಾತ್ರ ಬಹಳ ಮುಖ್ಯ. ಗರ್ಭಿಣಿ, ಬಾಣಂತಿಯರಿಗೆ ಪೌಷ್ಟಿಕ ಅಹಾರವನ್ನು ಅಂಗನವಾಡಿ ಮುಖಾಂತರ ಕ್ರಮಬದ್ದವಾಗಿ ವಿತರಿಸಬೇಕು. ಇಲ್ಲವಾದಲ್ಲಿ ಅಪೌಷ್ಟಿಕ ಮಕ್ಕಳ ಜನನವಾಗಿ ಸಮಾಜಕ್ಕೆ, ಕುಟಂಬಕ್ಕೂ ಹೊರೆಯಾಗಲಿದ್ದಾರೆ. ಹಾಗಾಗಿ ಪೌಷ್ಟಿಕ ಆಹಾರ ವಿತರಣೆಯಲ್ಲಿ ಯಾವುದೇ ಲೋಪಗಳು ಉಂಟಾಗದೇ ಅಹಾರ ವಿತರಿಸುವ ಮೂಲಕ ಅರಿವು ಮೂಡಿಸಿ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಗ್ರಾಮ ಸಭೆಯಲ್ಲಿ ವಿಶೇಷಚೇತನರಿಗೆ ಸೋಲಾರ್ ಕಿಟ್ ವಿತರಣೆ , ತಾಂತ್ರಿಕ ಮತ್ತು ವೈದ್ಯಕೀಯ ಪದವಿಯ ವಿದ್ಯಾರ್ಥಿಗಳಿಗೆ ಸಾಧನ ಸಲಕರಣೆಗಳ ವಿತರಣೆ, ತರಬೇತಿ ಪಡೆದ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ, ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಯಿತು. ಕನ್ನಮಂಗಲ ಪಂಚಾಯತಿ ಅಭಿವೃದ್ಧಿ ಕಾರ್ಯಗಳಲ್ಲಿ ಇತರ ಪಂಚಾಯತಿಗಳಿಗೆ ಮಾದರಿ ಪಂಚಾಯತಿ ಯಾಗಲಿ ಎಂದು ಸಚಿವರು ಆಶಿಸಿದರು.

ಪಿಡಿಒ ಶ್ರೀನಿವಾಸ್ ಅವರು ಪರಿಸರದ ಕಾಳಜಿ, ನೀರಿನ ಮೌಲ್ಯ, ಸ್ವಚ್ಛತೆ ನೈರ್ಮಲ್ಯದ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ಸಭೆಯಲ್ಲಿ ಬಯಪ ಅಧ್ಯಕ್ಷರಾದ ಶಾಂತಕುಮಾರ್, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಜಗನ್ನಾಥ, ಕನ್ನಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಾಲಿನಿ, ಉಪಾಧ್ಯಕ್ಷರಾದ ವನಜಾಕ್ಷಿಮ್ಮ, ಗ್ರಾಮ ಪಂಚಾಯಿತಿ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು, ಪಿ.ಡಿ.ಒ ಶ್ರೀನಿವಾಸ್, ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

4 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago