ಏಪ್ರಿಲ್ 26, 27 ರಂದು ಹೊಸಕೋಟೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಲೆಕ್ಕಪರಿಶೀಲನೆ

ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ 178-ಹೊಸಕೋಟೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಲೆಕ್ಕ ಪತ್ರ/ದಾಖಲೆಗಳ ತಪಾಸಣೆಯ ವಿವಿಧ ಹಂತದ ದಿನಾಂಕ ಏಪ್ರಿಲ್ 26 ಹಾಗೂ ಏಪ್ರಿಲ್ 27 ರಂದು ನಿಗದಿಪಡಿಸಲಾಗಿದೆ ಎಂದು 178-ಹೊಸಕೋಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಅವರು ತಿಳಿಸಿದ್ದಾರೆ.

ವಿಧಾನಸಭಾ ಚುನಾವಣಾ ಅಭ್ಯರ್ಥಿಯು, ತಾನು ನಾಮಪತ್ರ ಸಲ್ಲಿಸಿದ ದಿನಾಂಕ ಹಾಗೂ ಚುನಾವಣಾ ಫಲಿತಾಂಶ ಘೋಷಣೆಯಾದ ದಿನಾಂಕದ ನಡುವೆ (ಎರಡು ದಿನಾಂಕಗಳು ಸೇರಿದಂತೆ) ಅಭ್ಯರ್ಥಿಯಾಗಲೀ ಅಥವಾ ಅವರ ಏಜೆಂಟ್ ಯಾಗಲೀ ಸ್ಪರ್ಧಿಸಿದ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿ ಅಥವಾ ಅಭ್ಯರ್ಥಿಯ ಚುನಾವಣಾ ಏಜೆಂಟನ್ನು ಭರಿಸಿದ ಅಥವಾ ಅಧಿಕೃತಗೊಳಿಸಿದ ಎಲ್ಲಾ ವೆಚ್ಚದ ಲೆಕ್ಕವನ್ನು ಪ್ರತ್ಯೇಕವಾಗಿ ಮತ್ತು ಸರಿಯಾಗಿ ಇಟ್ಟುಕೊಳ್ಳುವುದು ಅಗತ್ಯವಾಗಿದೆ. ನಿರ್ವಹಿಸಲಾಗಿರುವ ಚುನಾವಣಾ ವೆಚ್ಚದ ಲೆಕ್ಕಪತ್ರ ಮತ್ತು ದಾಖಲೆಗಳ (ರಶೀದಿ/ ಬಿಲ್ಲುಗಳು) ತಪಾಸಣೆಯನ್ನು 3 ಭಾರಿ ಚುನಾವಣಾ ವೆಚ್ಚ ವೀಕ್ಷಕರಿಂದ ಅಧಿಕವಾಗಿ ನಿಯೋಜಿಸಿದ ಅಧಿಕಾರಿಯಿಂದ ತಪಾಸಣೆಯನ್ನು ಮಾಡಿಸಬೇಕಾಗಿರುತ್ತದೆ.

ಆದ್ದರಿಂದ 178-ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಉಮೇದುವಾರಿಕೆ ಸಲ್ಲಿಸಿರುವ ಅಭ್ಯರ್ಥಿಗಳ ವಿವಿಧ ಹಂತದ ಲೆಕ್ಕ ಪತ್ರ/ದಾಖಲೆಗಳ ತಪಾಸಣೆಗೆ ಏಪ್ರಿಲ್ 26 ಹಾಗೂ 27 ರಂದು ದಿನಾಂಕ ನಿಗದಿಪಡಿಸಲಾಗಿದೆ.

178-ಹೊಸಕೋಟೆ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸಿರುವ 23 ಅಭ್ಯರ್ಥಿಗಳಾದ
ಎನ್.ನಾಗರಾಜು, ಪ್ರಶಾಂತ್ ಸುಬ್ರಮಣಿ, ಡಿ.ಎಂ.ಲಕ್ಷ್ಮೀನಾರಾಯಣ, ಶರತ್ ಕುಮಾರ್ ಬಚ್ಚೇಗೌಡ, ರಮೇಶ್ ಚಕ್ರವರ್ತಿ, ಶರತ್ ಬಚ್ಚೇಗೌಡ, ಎಂ.ಶ್ರೀಮತಿ, ಬಿ.ಸೊಣ್ಣಪ್ಪಗೌಡ, ಅಜಯ್ ಕುಮಾರ್ ರೆಡ್ಡಿ ಅಡಾಲ, ಪಿ.ಆರ್.ಅನುಷಾ, ಜೆ.ಅಶೋಕ. ಅಂಬುಜ ಅವರು ಏಪ್ರಿಲ್ 26 ರಂದು ಹಾಗೂ ಈರೇಗೌಡ (ಎಂಟಿಬಿ), ನವೀನ್ ಕುಮಾರ್, ಎನ್.ನಾಗರಾಜ್, ಟಿ.ನಾಗರಾಜು, ಕಪಾಲಿ ನಾರಾಯಣಸ್ವಾಮಿ.ಜಿ, ನಿತೀಶ್ ಟಿ.ಡಿ ಪುರುಷೋತ್ತಮ್, ವಿ.ನಿತೇಶ್ ಕುಮಾರ್, ಎಸ್.ಆರ್ ರಘುನಾಥ್, ಶರತ್ ಕುಮಾರ್.ಕೆ, ಹೆಚ್.ಟಿ ಶಶಿಕುಮಾರ್, ಸುರೇಶ್.ಕೆ ಅವರು ಏಪ್ರಿಲ್ 27 ರಂದು ನಿಗದಿಪಡಿಸಿರುವ ಸಮಯದಂದು ಚುನಾವಣಾ ಲೆಕ್ಕಗಳಿಗೆ ಸಂಬಂಧಿಸಿದಂತೆ ಲೆಕ್ಕ ಪತ್ರ ಮತ್ತು ದಾಖಲೆಗಳ ಪರಿಶೀಲನೆಗೆ ಅಭ್ಯರ್ಥಿ ಅಥವಾ ಅಭ್ಯರ್ಥಿಯ ಚುನಾವಣಾ ಏಜೆಂಟರು ತಪ್ಪದೇ ಹಾಜರಾಗಿ ಲೆಕ್ಕ ತಪಾಸಣೆ ಮಾಡಿಸಿಕೊಳ್ಳುವುದು.

ತಪ್ಪಿದ್ದಲ್ಲಿ ಚುನಾವಣೆ ನಿಯಮಾನುಸಾರ ಹಾಗೂ ಭಾರತದ ದಂಡ ಸಂಹಿತೆ 1860 ರ ಕಲಂ,171-1ರಂತೆ ಕ್ರಮ ಕೈಗೊಳ್ಳಲಾಗುವುದೆಂದು 178-ಹೊಸಕೋಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

1 hour ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

2 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

16 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

20 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago