ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ 178-ಹೊಸಕೋಟೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಲೆಕ್ಕ ಪತ್ರ/ದಾಖಲೆಗಳ ತಪಾಸಣೆಯ ವಿವಿಧ ಹಂತದ ದಿನಾಂಕ ಏಪ್ರಿಲ್ 26 ಹಾಗೂ ಏಪ್ರಿಲ್ 27 ರಂದು ನಿಗದಿಪಡಿಸಲಾಗಿದೆ ಎಂದು 178-ಹೊಸಕೋಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಅವರು ತಿಳಿಸಿದ್ದಾರೆ.
ವಿಧಾನಸಭಾ ಚುನಾವಣಾ ಅಭ್ಯರ್ಥಿಯು, ತಾನು ನಾಮಪತ್ರ ಸಲ್ಲಿಸಿದ ದಿನಾಂಕ ಹಾಗೂ ಚುನಾವಣಾ ಫಲಿತಾಂಶ ಘೋಷಣೆಯಾದ ದಿನಾಂಕದ ನಡುವೆ (ಎರಡು ದಿನಾಂಕಗಳು ಸೇರಿದಂತೆ) ಅಭ್ಯರ್ಥಿಯಾಗಲೀ ಅಥವಾ ಅವರ ಏಜೆಂಟ್ ಯಾಗಲೀ ಸ್ಪರ್ಧಿಸಿದ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿ ಅಥವಾ ಅಭ್ಯರ್ಥಿಯ ಚುನಾವಣಾ ಏಜೆಂಟನ್ನು ಭರಿಸಿದ ಅಥವಾ ಅಧಿಕೃತಗೊಳಿಸಿದ ಎಲ್ಲಾ ವೆಚ್ಚದ ಲೆಕ್ಕವನ್ನು ಪ್ರತ್ಯೇಕವಾಗಿ ಮತ್ತು ಸರಿಯಾಗಿ ಇಟ್ಟುಕೊಳ್ಳುವುದು ಅಗತ್ಯವಾಗಿದೆ. ನಿರ್ವಹಿಸಲಾಗಿರುವ ಚುನಾವಣಾ ವೆಚ್ಚದ ಲೆಕ್ಕಪತ್ರ ಮತ್ತು ದಾಖಲೆಗಳ (ರಶೀದಿ/ ಬಿಲ್ಲುಗಳು) ತಪಾಸಣೆಯನ್ನು 3 ಭಾರಿ ಚುನಾವಣಾ ವೆಚ್ಚ ವೀಕ್ಷಕರಿಂದ ಅಧಿಕವಾಗಿ ನಿಯೋಜಿಸಿದ ಅಧಿಕಾರಿಯಿಂದ ತಪಾಸಣೆಯನ್ನು ಮಾಡಿಸಬೇಕಾಗಿರುತ್ತದೆ.
ಆದ್ದರಿಂದ 178-ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಉಮೇದುವಾರಿಕೆ ಸಲ್ಲಿಸಿರುವ ಅಭ್ಯರ್ಥಿಗಳ ವಿವಿಧ ಹಂತದ ಲೆಕ್ಕ ಪತ್ರ/ದಾಖಲೆಗಳ ತಪಾಸಣೆಗೆ ಏಪ್ರಿಲ್ 26 ಹಾಗೂ 27 ರಂದು ದಿನಾಂಕ ನಿಗದಿಪಡಿಸಲಾಗಿದೆ.
178-ಹೊಸಕೋಟೆ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸಿರುವ 23 ಅಭ್ಯರ್ಥಿಗಳಾದ
ಎನ್.ನಾಗರಾಜು, ಪ್ರಶಾಂತ್ ಸುಬ್ರಮಣಿ, ಡಿ.ಎಂ.ಲಕ್ಷ್ಮೀನಾರಾಯಣ, ಶರತ್ ಕುಮಾರ್ ಬಚ್ಚೇಗೌಡ, ರಮೇಶ್ ಚಕ್ರವರ್ತಿ, ಶರತ್ ಬಚ್ಚೇಗೌಡ, ಎಂ.ಶ್ರೀಮತಿ, ಬಿ.ಸೊಣ್ಣಪ್ಪಗೌಡ, ಅಜಯ್ ಕುಮಾರ್ ರೆಡ್ಡಿ ಅಡಾಲ, ಪಿ.ಆರ್.ಅನುಷಾ, ಜೆ.ಅಶೋಕ. ಅಂಬುಜ ಅವರು ಏಪ್ರಿಲ್ 26 ರಂದು ಹಾಗೂ ಈರೇಗೌಡ (ಎಂಟಿಬಿ), ನವೀನ್ ಕುಮಾರ್, ಎನ್.ನಾಗರಾಜ್, ಟಿ.ನಾಗರಾಜು, ಕಪಾಲಿ ನಾರಾಯಣಸ್ವಾಮಿ.ಜಿ, ನಿತೀಶ್ ಟಿ.ಡಿ ಪುರುಷೋತ್ತಮ್, ವಿ.ನಿತೇಶ್ ಕುಮಾರ್, ಎಸ್.ಆರ್ ರಘುನಾಥ್, ಶರತ್ ಕುಮಾರ್.ಕೆ, ಹೆಚ್.ಟಿ ಶಶಿಕುಮಾರ್, ಸುರೇಶ್.ಕೆ ಅವರು ಏಪ್ರಿಲ್ 27 ರಂದು ನಿಗದಿಪಡಿಸಿರುವ ಸಮಯದಂದು ಚುನಾವಣಾ ಲೆಕ್ಕಗಳಿಗೆ ಸಂಬಂಧಿಸಿದಂತೆ ಲೆಕ್ಕ ಪತ್ರ ಮತ್ತು ದಾಖಲೆಗಳ ಪರಿಶೀಲನೆಗೆ ಅಭ್ಯರ್ಥಿ ಅಥವಾ ಅಭ್ಯರ್ಥಿಯ ಚುನಾವಣಾ ಏಜೆಂಟರು ತಪ್ಪದೇ ಹಾಜರಾಗಿ ಲೆಕ್ಕ ತಪಾಸಣೆ ಮಾಡಿಸಿಕೊಳ್ಳುವುದು.
ತಪ್ಪಿದ್ದಲ್ಲಿ ಚುನಾವಣೆ ನಿಯಮಾನುಸಾರ ಹಾಗೂ ಭಾರತದ ದಂಡ ಸಂಹಿತೆ 1860 ರ ಕಲಂ,171-1ರಂತೆ ಕ್ರಮ ಕೈಗೊಳ್ಳಲಾಗುವುದೆಂದು 178-ಹೊಸಕೋಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…