ಏಪ್ರಿಲ್ 26, 27 ರಂದು ಹೊಸಕೋಟೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಲೆಕ್ಕಪರಿಶೀಲನೆ

ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ 178-ಹೊಸಕೋಟೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಲೆಕ್ಕ ಪತ್ರ/ದಾಖಲೆಗಳ ತಪಾಸಣೆಯ ವಿವಿಧ ಹಂತದ ದಿನಾಂಕ ಏಪ್ರಿಲ್ 26 ಹಾಗೂ ಏಪ್ರಿಲ್ 27 ರಂದು ನಿಗದಿಪಡಿಸಲಾಗಿದೆ ಎಂದು 178-ಹೊಸಕೋಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಅವರು ತಿಳಿಸಿದ್ದಾರೆ.

ವಿಧಾನಸಭಾ ಚುನಾವಣಾ ಅಭ್ಯರ್ಥಿಯು, ತಾನು ನಾಮಪತ್ರ ಸಲ್ಲಿಸಿದ ದಿನಾಂಕ ಹಾಗೂ ಚುನಾವಣಾ ಫಲಿತಾಂಶ ಘೋಷಣೆಯಾದ ದಿನಾಂಕದ ನಡುವೆ (ಎರಡು ದಿನಾಂಕಗಳು ಸೇರಿದಂತೆ) ಅಭ್ಯರ್ಥಿಯಾಗಲೀ ಅಥವಾ ಅವರ ಏಜೆಂಟ್ ಯಾಗಲೀ ಸ್ಪರ್ಧಿಸಿದ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿ ಅಥವಾ ಅಭ್ಯರ್ಥಿಯ ಚುನಾವಣಾ ಏಜೆಂಟನ್ನು ಭರಿಸಿದ ಅಥವಾ ಅಧಿಕೃತಗೊಳಿಸಿದ ಎಲ್ಲಾ ವೆಚ್ಚದ ಲೆಕ್ಕವನ್ನು ಪ್ರತ್ಯೇಕವಾಗಿ ಮತ್ತು ಸರಿಯಾಗಿ ಇಟ್ಟುಕೊಳ್ಳುವುದು ಅಗತ್ಯವಾಗಿದೆ. ನಿರ್ವಹಿಸಲಾಗಿರುವ ಚುನಾವಣಾ ವೆಚ್ಚದ ಲೆಕ್ಕಪತ್ರ ಮತ್ತು ದಾಖಲೆಗಳ (ರಶೀದಿ/ ಬಿಲ್ಲುಗಳು) ತಪಾಸಣೆಯನ್ನು 3 ಭಾರಿ ಚುನಾವಣಾ ವೆಚ್ಚ ವೀಕ್ಷಕರಿಂದ ಅಧಿಕವಾಗಿ ನಿಯೋಜಿಸಿದ ಅಧಿಕಾರಿಯಿಂದ ತಪಾಸಣೆಯನ್ನು ಮಾಡಿಸಬೇಕಾಗಿರುತ್ತದೆ.

ಆದ್ದರಿಂದ 178-ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಉಮೇದುವಾರಿಕೆ ಸಲ್ಲಿಸಿರುವ ಅಭ್ಯರ್ಥಿಗಳ ವಿವಿಧ ಹಂತದ ಲೆಕ್ಕ ಪತ್ರ/ದಾಖಲೆಗಳ ತಪಾಸಣೆಗೆ ಏಪ್ರಿಲ್ 26 ಹಾಗೂ 27 ರಂದು ದಿನಾಂಕ ನಿಗದಿಪಡಿಸಲಾಗಿದೆ.

178-ಹೊಸಕೋಟೆ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸಿರುವ 23 ಅಭ್ಯರ್ಥಿಗಳಾದ
ಎನ್.ನಾಗರಾಜು, ಪ್ರಶಾಂತ್ ಸುಬ್ರಮಣಿ, ಡಿ.ಎಂ.ಲಕ್ಷ್ಮೀನಾರಾಯಣ, ಶರತ್ ಕುಮಾರ್ ಬಚ್ಚೇಗೌಡ, ರಮೇಶ್ ಚಕ್ರವರ್ತಿ, ಶರತ್ ಬಚ್ಚೇಗೌಡ, ಎಂ.ಶ್ರೀಮತಿ, ಬಿ.ಸೊಣ್ಣಪ್ಪಗೌಡ, ಅಜಯ್ ಕುಮಾರ್ ರೆಡ್ಡಿ ಅಡಾಲ, ಪಿ.ಆರ್.ಅನುಷಾ, ಜೆ.ಅಶೋಕ. ಅಂಬುಜ ಅವರು ಏಪ್ರಿಲ್ 26 ರಂದು ಹಾಗೂ ಈರೇಗೌಡ (ಎಂಟಿಬಿ), ನವೀನ್ ಕುಮಾರ್, ಎನ್.ನಾಗರಾಜ್, ಟಿ.ನಾಗರಾಜು, ಕಪಾಲಿ ನಾರಾಯಣಸ್ವಾಮಿ.ಜಿ, ನಿತೀಶ್ ಟಿ.ಡಿ ಪುರುಷೋತ್ತಮ್, ವಿ.ನಿತೇಶ್ ಕುಮಾರ್, ಎಸ್.ಆರ್ ರಘುನಾಥ್, ಶರತ್ ಕುಮಾರ್.ಕೆ, ಹೆಚ್.ಟಿ ಶಶಿಕುಮಾರ್, ಸುರೇಶ್.ಕೆ ಅವರು ಏಪ್ರಿಲ್ 27 ರಂದು ನಿಗದಿಪಡಿಸಿರುವ ಸಮಯದಂದು ಚುನಾವಣಾ ಲೆಕ್ಕಗಳಿಗೆ ಸಂಬಂಧಿಸಿದಂತೆ ಲೆಕ್ಕ ಪತ್ರ ಮತ್ತು ದಾಖಲೆಗಳ ಪರಿಶೀಲನೆಗೆ ಅಭ್ಯರ್ಥಿ ಅಥವಾ ಅಭ್ಯರ್ಥಿಯ ಚುನಾವಣಾ ಏಜೆಂಟರು ತಪ್ಪದೇ ಹಾಜರಾಗಿ ಲೆಕ್ಕ ತಪಾಸಣೆ ಮಾಡಿಸಿಕೊಳ್ಳುವುದು.

ತಪ್ಪಿದ್ದಲ್ಲಿ ಚುನಾವಣೆ ನಿಯಮಾನುಸಾರ ಹಾಗೂ ಭಾರತದ ದಂಡ ಸಂಹಿತೆ 1860 ರ ಕಲಂ,171-1ರಂತೆ ಕ್ರಮ ಕೈಗೊಳ್ಳಲಾಗುವುದೆಂದು 178-ಹೊಸಕೋಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 hour ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

6 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

15 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

21 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

22 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago