ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ 178-ಹೊಸಕೋಟೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಲೆಕ್ಕ ಪತ್ರ/ದಾಖಲೆಗಳ ತಪಾಸಣೆಯ ವಿವಿಧ ಹಂತದ ದಿನಾಂಕ ಏಪ್ರಿಲ್ 26 ಹಾಗೂ ಏಪ್ರಿಲ್ 27 ರಂದು ನಿಗದಿಪಡಿಸಲಾಗಿದೆ ಎಂದು 178-ಹೊಸಕೋಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಅವರು ತಿಳಿಸಿದ್ದಾರೆ.
ವಿಧಾನಸಭಾ ಚುನಾವಣಾ ಅಭ್ಯರ್ಥಿಯು, ತಾನು ನಾಮಪತ್ರ ಸಲ್ಲಿಸಿದ ದಿನಾಂಕ ಹಾಗೂ ಚುನಾವಣಾ ಫಲಿತಾಂಶ ಘೋಷಣೆಯಾದ ದಿನಾಂಕದ ನಡುವೆ (ಎರಡು ದಿನಾಂಕಗಳು ಸೇರಿದಂತೆ) ಅಭ್ಯರ್ಥಿಯಾಗಲೀ ಅಥವಾ ಅವರ ಏಜೆಂಟ್ ಯಾಗಲೀ ಸ್ಪರ್ಧಿಸಿದ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿ ಅಥವಾ ಅಭ್ಯರ್ಥಿಯ ಚುನಾವಣಾ ಏಜೆಂಟನ್ನು ಭರಿಸಿದ ಅಥವಾ ಅಧಿಕೃತಗೊಳಿಸಿದ ಎಲ್ಲಾ ವೆಚ್ಚದ ಲೆಕ್ಕವನ್ನು ಪ್ರತ್ಯೇಕವಾಗಿ ಮತ್ತು ಸರಿಯಾಗಿ ಇಟ್ಟುಕೊಳ್ಳುವುದು ಅಗತ್ಯವಾಗಿದೆ. ನಿರ್ವಹಿಸಲಾಗಿರುವ ಚುನಾವಣಾ ವೆಚ್ಚದ ಲೆಕ್ಕಪತ್ರ ಮತ್ತು ದಾಖಲೆಗಳ (ರಶೀದಿ/ ಬಿಲ್ಲುಗಳು) ತಪಾಸಣೆಯನ್ನು 3 ಭಾರಿ ಚುನಾವಣಾ ವೆಚ್ಚ ವೀಕ್ಷಕರಿಂದ ಅಧಿಕವಾಗಿ ನಿಯೋಜಿಸಿದ ಅಧಿಕಾರಿಯಿಂದ ತಪಾಸಣೆಯನ್ನು ಮಾಡಿಸಬೇಕಾಗಿರುತ್ತದೆ.
ಆದ್ದರಿಂದ 178-ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಉಮೇದುವಾರಿಕೆ ಸಲ್ಲಿಸಿರುವ ಅಭ್ಯರ್ಥಿಗಳ ವಿವಿಧ ಹಂತದ ಲೆಕ್ಕ ಪತ್ರ/ದಾಖಲೆಗಳ ತಪಾಸಣೆಗೆ ಏಪ್ರಿಲ್ 26 ಹಾಗೂ 27 ರಂದು ದಿನಾಂಕ ನಿಗದಿಪಡಿಸಲಾಗಿದೆ.
178-ಹೊಸಕೋಟೆ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸಿರುವ 23 ಅಭ್ಯರ್ಥಿಗಳಾದ
ಎನ್.ನಾಗರಾಜು, ಪ್ರಶಾಂತ್ ಸುಬ್ರಮಣಿ, ಡಿ.ಎಂ.ಲಕ್ಷ್ಮೀನಾರಾಯಣ, ಶರತ್ ಕುಮಾರ್ ಬಚ್ಚೇಗೌಡ, ರಮೇಶ್ ಚಕ್ರವರ್ತಿ, ಶರತ್ ಬಚ್ಚೇಗೌಡ, ಎಂ.ಶ್ರೀಮತಿ, ಬಿ.ಸೊಣ್ಣಪ್ಪಗೌಡ, ಅಜಯ್ ಕುಮಾರ್ ರೆಡ್ಡಿ ಅಡಾಲ, ಪಿ.ಆರ್.ಅನುಷಾ, ಜೆ.ಅಶೋಕ. ಅಂಬುಜ ಅವರು ಏಪ್ರಿಲ್ 26 ರಂದು ಹಾಗೂ ಈರೇಗೌಡ (ಎಂಟಿಬಿ), ನವೀನ್ ಕುಮಾರ್, ಎನ್.ನಾಗರಾಜ್, ಟಿ.ನಾಗರಾಜು, ಕಪಾಲಿ ನಾರಾಯಣಸ್ವಾಮಿ.ಜಿ, ನಿತೀಶ್ ಟಿ.ಡಿ ಪುರುಷೋತ್ತಮ್, ವಿ.ನಿತೇಶ್ ಕುಮಾರ್, ಎಸ್.ಆರ್ ರಘುನಾಥ್, ಶರತ್ ಕುಮಾರ್.ಕೆ, ಹೆಚ್.ಟಿ ಶಶಿಕುಮಾರ್, ಸುರೇಶ್.ಕೆ ಅವರು ಏಪ್ರಿಲ್ 27 ರಂದು ನಿಗದಿಪಡಿಸಿರುವ ಸಮಯದಂದು ಚುನಾವಣಾ ಲೆಕ್ಕಗಳಿಗೆ ಸಂಬಂಧಿಸಿದಂತೆ ಲೆಕ್ಕ ಪತ್ರ ಮತ್ತು ದಾಖಲೆಗಳ ಪರಿಶೀಲನೆಗೆ ಅಭ್ಯರ್ಥಿ ಅಥವಾ ಅಭ್ಯರ್ಥಿಯ ಚುನಾವಣಾ ಏಜೆಂಟರು ತಪ್ಪದೇ ಹಾಜರಾಗಿ ಲೆಕ್ಕ ತಪಾಸಣೆ ಮಾಡಿಸಿಕೊಳ್ಳುವುದು.
ತಪ್ಪಿದ್ದಲ್ಲಿ ಚುನಾವಣೆ ನಿಯಮಾನುಸಾರ ಹಾಗೂ ಭಾರತದ ದಂಡ ಸಂಹಿತೆ 1860 ರ ಕಲಂ,171-1ರಂತೆ ಕ್ರಮ ಕೈಗೊಳ್ಳಲಾಗುವುದೆಂದು 178-ಹೊಸಕೋಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…