ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಗಡೆ ಬರ್ತಿದ್ದ ಪ್ರಯಾಣಿಕನ ಟ್ರಾಲಿಯಲ್ಲಿ ಕೆಜಿ ಕೆಜಿ ಚಿನ್ನ ಪತ್ತೆಯಾಗಿದೆ.
ಕಸ್ಟಮ್ಸ್ ಅಧಿಕಾರಿಗಳ ಕೈಗೆ ತಗಲಾಕ್ಕೊಳ್ಳುವ ಭಯದಿಂದ ಖತರ್ನಾಕ್ ಪ್ರಯಾಣಿಕ ಬೇರೆಯವರ ಟ್ರಾಲಿಗೆ ಚಿನ್ನ ಹಾಕಿದ್ದಾನೆ.
ದುಬೈನಿಂದ ಬಂದಿದ್ದ ಕೋ ಪ್ಯಾಸೆಂಜರ್ ಲಗೇಜ್ ಟ್ರಾಲಿಗೆ ಚಿನ್ನದ ಬ್ಯಾಗ್ ಹಾಕಿ ಎಸ್ಕೇಪ್ ಆಗಿದ್ದಾನೆ. ಬರೋಬ್ಬರಿ 3.5 ಕೆಜಿ ಚಿನ್ನ ಬಿಸ್ಕೆಟ್ ಗಳಿದ್ದ ಬ್ಯಾಗ್ ಇಟ್ಟು ಹೋಗಿದ್ದಾನೆ. ಟ್ರಾಲಿ ತಳ್ಳಿಕೊಂಡು ಚೆಕಿಂಗ್ ಕಡೆ ಬರುವಾಗ ಟ್ರಾಲಿ ಬ್ಯಾಗ್ ನಿಂದ ಚಿನ್ನ ಹೊರಗಡೆ ಬಿದ್ದಿದೆ. ಪ್ರಯಾಣಿಕ ತನ್ನ ಟ್ರಾಲಿಯಲ್ಲಿ ಚಿನ್ನದ ಬ್ಯಾಗ್ ಕಂಡು ಕಂಗಾಲಾಗಿದ್ದಾನೆ. ಕೂಡಲೆ ಚಿನ್ನದ ಬ್ಯಾಗ್ ಸಮೇತ ಏರ್ಪೋಟ್ ಭದ್ರತಾ ಪಡೆಗೆ ಮಾಹಿತಿ ನೀಡಿದ್ದಾನೆ. ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಕೋಟಿ ಕೋಟಿ ಬೆಲೆ ಬಾಳುವ 3.5 ಕೆಜಿ ಚಿನ್ನ ಪತ್ತೆಯಾಗಿದೆ.
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…
ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…
" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…
ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…
ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…
ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…