ಏರ್ಪೋಟ್ ನಿಂದ ಹೊರ ಬರ್ತಿದ್ದ ಪ್ರಯಾಣಿಕನ ಟ್ರಾಲಿಯಲ್ಲಿ ಕೆಜಿ ಕೆಜಿ ಚಿನ್ನ ಪತ್ತೆ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಗಡೆ ಬರ್ತಿದ್ದ ಪ್ರಯಾಣಿಕನ ಟ್ರಾಲಿಯಲ್ಲಿ ಕೆಜಿ ಕೆಜಿ ಚಿನ್ನ ಪತ್ತೆಯಾಗಿದೆ.

ಕಸ್ಟಮ್ಸ್ ಅಧಿಕಾರಿಗಳ ಕೈಗೆ ತಗಲಾಕ್ಕೊಳ್ಳುವ ಭಯದಿಂದ ಖತರ್ನಾಕ್ ಪ್ರಯಾಣಿಕ ಬೇರೆಯವರ ಟ್ರಾಲಿಗೆ ಚಿನ್ನ ಹಾಕಿದ್ದಾನೆ.

ದುಬೈನಿಂದ ಬಂದಿದ್ದ ಕೋ ಪ್ಯಾಸೆಂಜರ್ ಲಗೇಜ್ ಟ್ರಾಲಿಗೆ ಚಿನ್ನದ ಬ್ಯಾಗ್ ಹಾಕಿ ಎಸ್ಕೇಪ್ ಆಗಿದ್ದಾನೆ. ಬರೋಬ್ಬರಿ 3.5 ಕೆಜಿ ಚಿನ್ನ ಬಿಸ್ಕೆಟ್ ಗಳಿದ್ದ ಬ್ಯಾಗ್ ಇಟ್ಟು ಹೋಗಿದ್ದಾನೆ. ಟ್ರಾಲಿ ತಳ್ಳಿಕೊಂಡು ಚೆಕಿಂಗ್ ಕಡೆ ಬರುವಾಗ ಟ್ರಾಲಿ ಬ್ಯಾಗ್ ನಿಂದ ಚಿನ್ನ ಹೊರಗಡೆ ಬಿದ್ದಿದೆ. ಪ್ರಯಾಣಿಕ ತನ್ನ ಟ್ರಾಲಿಯಲ್ಲಿ ಚಿನ್ನದ ಬ್ಯಾಗ್ ಕಂಡು ಕಂಗಾಲಾಗಿದ್ದಾನೆ. ಕೂಡಲೆ ಚಿನ್ನದ ಬ್ಯಾಗ್ ಸಮೇತ ಏರ್ಪೋಟ್ ಭದ್ರತಾ ಪಡೆಗೆ ಮಾಹಿತಿ ನೀಡಿದ್ದಾನೆ. ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಕೋಟಿ ಕೋಟಿ ಬೆಲೆ ಬಾಳುವ 3.5 ಕೆಜಿ ಚಿನ್ನ ಪತ್ತೆಯಾಗಿದೆ.

Ramesh Babu

Journalist

Recent Posts

ಬೆಲೆ ಏರಿಕೆ, ನೀಟ್ ಅಕ್ರಮ ಖಂಡಿಸಿ ದೊಡ್ಡಬಳ್ಳಾಪುರದಲ್ಲಿ ಕಾಂಗ್ರೆಸ್ ಪ್ರತಿಭಟನೆ

ದೊಡ್ಡಬಳ್ಳಾಪುರ: ಬೆಲೆ ಏರಿಕೆ ಹಾಗೂ ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆ ನಡೆಸಿದರು. ನಗರದ…

51 minutes ago

ಮಂತ್ರಾಲಯದಿಂದ ಬರ್ತಿದ್ದ ಕಾರಿಂದ ಅಪಘಾತ: ರಾಷ್ಟ್ರೀಯ ಹೆದ್ದಾರಿ 648ರಲ್ಲಿ ಸರಣಿ ಆಕ್ಸಿಡೆಂಟ್ .. ಬೈಕ್ ಸವಾರನಿಗೆ ಕಾಲು ಕಟ್.! ಸರಣಿ ಡಿಕ್ಕಿ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಗುರು ರಾಯರ ದರ್ಶನ ಮುಗಿಸಿಕೊಂಡು ಬೆಂಗಳೂರಿನತ್ತ ಮರಳುತ್ತಿದ್ದ ಪ್ರಯಾಣಿಕರಿದ್ದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದು, ಬಳಿಕ ಮತ್ತೊಂದು ಕಾರಿಗೆ…

1 hour ago

ಖಾಸಗಿ ಸಂಭಾಷಣೆಗಳ‌ ಧ್ವನಿಮುದ್ರಣ ಸರಿಯೇ ? ತಪ್ಪೇ ?…..

ಮಿತ್ರತ್ವ ಅಥವಾ ಸಹಜತೆಗೆ ದ್ರೋಹ....... ಒಂದು ಸಲಹೆ ಮತ್ತು ಮನವಿ..... ಇಂದಿನ ಸಂದರ್ಭದ ಅತಿ ಅಗತ್ಯ ವಿಷಯ ಮತ್ತು ನಂಬಿಕೆಗಳ…

7 hours ago

ಲೀಸ್ ಜಮೀನು ವಿವಾದ: ಲೀಸ್ ಪಡೆದ ರೈತನ ಮೇಲೆ ಪಿಸ್ತೂಲ್‌ನಿಂದ ಹಲ್ಲೆ; ಗಾಳಿಯಲ್ಲಿ 7–8 ಸುತ್ತು ಗುಂಡು ಹಾರಿಸಿ ಬೆದರಿಕೆ ಆರೋಪ: ದೂರು ದಾಖಲು

ದೊಡ್ಡಬಳ್ಳಾಪುರ: ಲೀಸ್‌ಗೆ ಪಡೆದಿದ್ದ ಜಮೀನಿನ ವಿಚಾರವಾಗಿ ರೈತನೊಬ್ಬರ ಮೇಲೆ ಪಿಸ್ತೂಲ್‌ನಿಂದ ಹಲ್ಲೆ ನಡೆಸಿ, ಗಾಳಿಯಲ್ಲಿ ಹಲವು ಸುತ್ತು ಗುಂಡು ಹಾರಿಸಿ…

1 day ago

ಬಸ್-ನೀರಿನ ಟ್ಯಾಂಕರ್ ಟ್ರ್ಯಾಕ್ಟರ್ ನಡುವೆ ಅಪಘಾತ: ಫುಲ್ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಹಳ್ಳಿ ಸಮೀಪ ಹಿಂದೂಪುರ–ಯಲಹಂಕ ರಾಜ್ಯ ಹೆದ್ದಾರಿಯಲ್ಲಿ ಬಸ್ ಹಾಗೂ ನೀರಿನ ಟ್ಯಾಂಕರ್ ಹೊತ್ತ ಟ್ರ್ಯಾಕ್ಟರ್ ನಡುವೆ ಸಂಭವಿಸಿದ…

2 days ago

ಶಾಸಕ ಪ್ರದೀಪ್ ಈಶ್ವರ್ ಕಾರಿಗೆ ಮುತ್ತಿಗೆ; ಚಪ್ಪಲಿ ಎಸೆತ, ಉದ್ವಿಗ್ನ ವಾತಾವರಣ

ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲಿಗರು ಮುತ್ತಿಗೆ ಹಾಕಿದ ಘಟನೆ ಶನಿವಾರ…

2 days ago