ಏರ್ ಇಂಡಿಯಾ ವಿಮಾನ ದುರಂತ ಪ್ರಕರಣ: 242 ಮಂದಿ ಪ್ರಯಾಣಿಕರು ಸಜೀವ ದಹನ, 5 ಹಾಸ್ಟೆಲ್ ವಿದ್ಯಾರ್ಥಿಗಳ ಬಲಿ

ಅಹ್ಮದಾಬಾದ್: ಅಹ್ಮದಾಬಾದ್ ನಲ್ಲಿಂದು ಪತನವಾದ ಏರ್ ಇಂಡಿಯಾ ವಿಮಾನ ದುರಂತ ಪ್ರಕರಣದಲ್ಲಿ ಯಾರೂ ಉಳಿದಿಲ್ಲ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿದೆ.

ದುರಂತದಲ್ಲಿ ವಿಮಾನ ಪ್ರಯಾಣಿಕರಲ್ಲದೇ 5 ಹಾಸ್ಟೆಲ್ ವಿದ್ಯಾರ್ಥಿಗಳೂ ಕೂಡ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಗುಜರಾತ್ ರಾಜಧಾನಿ ಅಹಮದಾಬಾದ್ ಏರ್​ಪೋರ್ಟ್ ಬಳಿ ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೇವಲ ಐದೇ ನಿಮಿಷದಲ್ಲಿ ಪತನಗೊಂಡಿದೆ.

ಏರ್​ಪೋರ್ಟ್ ಬಳಿ ಮೇಧಿನಿ ನಗರ್​ನಲ್ಲಿ ಈ ಘಟನೆ ಸಂಭವಿಸಿದ್ದು, ಬೋಯಿಂಗ್ 787-8 ಡ್ರೀಮ್‌ಲೈನರ್ (AI-171) ವಿಮಾನವು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರೊಂದಿಗೆ ಲಂಡನ್‌ಗೆ ತೆರಳುತ್ತಿತ್ತು ಎನ್ನಲಾಗಿದೆ.

ವಿಮಾನವು ನಗರದ ವಿಮಾನ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿರುವ ಫೋರೆನ್ಸಿಕ್ ಕ್ರಾಸ್ ರಸ್ತೆಯ ಬಳಿ ಬಿಜೆ ಮೆಡಿಕಲ್ ಕಾಲೇಜು ಹಾಸ್ಟೆಲ್ ಮೆಸ್ ಮೇಲೆ ಬಿದ್ದಿದೆ.

ದುರಂತದಲ್ಲಿ ಒಟ್ಟು 247 ಮಂದಿ ಸಾವಿಗೀಡಾಗಿದ್ದು, ಈ ಪೈಕಿ 230 ವಿಮಾನ ಪ್ರಯಾಣಿಕರು, 10 ಮಂದಿ ವಿಮಾನ ಸಿಬ್ಬಂದಿ, ಇಬ್ಬರು ಪೈಲಟ್ ( ಮುಖ್ಯ ಪೈಲಟ ಸುಮಿತ್ ಸಭರ್ವಾಲ್ ಮತ್ತು ಕೋ ಪೈಲಟ್ ಕ್ಲೈವ್‌ ಕುಂದರ್‌) ಗಳು ಸೇರಿದ್ದರು.

ವಿಾನದಲ್ಲಿದ್ದ 242 ಜನರಲ್ಲಿ 169 ಭಾರತೀಯ ಪ್ರಜೆಗಳು, 53 ಬ್ರಿಟಿಷ್ ಪ್ರಜೆಗಳು, 1 ಕೆನಡಾ ಪ್ರಜೆ ಮತ್ತು 7 ಪೋರ್ಚುಗೀಸ್ ಪ್ರಜೆಗಳು ಇದ್ದರು ಎಂದು ತಿಳಿದುಬಂದಿದೆ.

Ramesh Babu

Journalist

Recent Posts

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

13 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

15 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

15 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

17 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

1 day ago

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

1 day ago