ಅಹ್ಮದಾಬಾದ್: ಅಹ್ಮದಾಬಾದ್ ನಲ್ಲಿಂದು ಪತನವಾದ ಏರ್ ಇಂಡಿಯಾ ವಿಮಾನ ದುರಂತ ಪ್ರಕರಣದಲ್ಲಿ ಯಾರೂ ಉಳಿದಿಲ್ಲ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿದೆ.
ದುರಂತದಲ್ಲಿ ವಿಮಾನ ಪ್ರಯಾಣಿಕರಲ್ಲದೇ 5 ಹಾಸ್ಟೆಲ್ ವಿದ್ಯಾರ್ಥಿಗಳೂ ಕೂಡ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಗುಜರಾತ್ ರಾಜಧಾನಿ ಅಹಮದಾಬಾದ್ ಏರ್ಪೋರ್ಟ್ ಬಳಿ ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೇವಲ ಐದೇ ನಿಮಿಷದಲ್ಲಿ ಪತನಗೊಂಡಿದೆ.
ಏರ್ಪೋರ್ಟ್ ಬಳಿ ಮೇಧಿನಿ ನಗರ್ನಲ್ಲಿ ಈ ಘಟನೆ ಸಂಭವಿಸಿದ್ದು, ಬೋಯಿಂಗ್ 787-8 ಡ್ರೀಮ್ಲೈನರ್ (AI-171) ವಿಮಾನವು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರೊಂದಿಗೆ ಲಂಡನ್ಗೆ ತೆರಳುತ್ತಿತ್ತು ಎನ್ನಲಾಗಿದೆ.
ವಿಮಾನವು ನಗರದ ವಿಮಾನ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿರುವ ಫೋರೆನ್ಸಿಕ್ ಕ್ರಾಸ್ ರಸ್ತೆಯ ಬಳಿ ಬಿಜೆ ಮೆಡಿಕಲ್ ಕಾಲೇಜು ಹಾಸ್ಟೆಲ್ ಮೆಸ್ ಮೇಲೆ ಬಿದ್ದಿದೆ.
ದುರಂತದಲ್ಲಿ ಒಟ್ಟು 247 ಮಂದಿ ಸಾವಿಗೀಡಾಗಿದ್ದು, ಈ ಪೈಕಿ 230 ವಿಮಾನ ಪ್ರಯಾಣಿಕರು, 10 ಮಂದಿ ವಿಮಾನ ಸಿಬ್ಬಂದಿ, ಇಬ್ಬರು ಪೈಲಟ್ ( ಮುಖ್ಯ ಪೈಲಟ ಸುಮಿತ್ ಸಭರ್ವಾಲ್ ಮತ್ತು ಕೋ ಪೈಲಟ್ ಕ್ಲೈವ್ ಕುಂದರ್) ಗಳು ಸೇರಿದ್ದರು.
ವಿಾನದಲ್ಲಿದ್ದ 242 ಜನರಲ್ಲಿ 169 ಭಾರತೀಯ ಪ್ರಜೆಗಳು, 53 ಬ್ರಿಟಿಷ್ ಪ್ರಜೆಗಳು, 1 ಕೆನಡಾ ಪ್ರಜೆ ಮತ್ತು 7 ಪೋರ್ಚುಗೀಸ್ ಪ್ರಜೆಗಳು ಇದ್ದರು ಎಂದು ತಿಳಿದುಬಂದಿದೆ.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…