ಅಹ್ಮದಾಬಾದ್: ಅಹ್ಮದಾಬಾದ್ ನಲ್ಲಿಂದು ಪತನವಾದ ಏರ್ ಇಂಡಿಯಾ ವಿಮಾನ ದುರಂತ ಪ್ರಕರಣದಲ್ಲಿ ಯಾರೂ ಉಳಿದಿಲ್ಲ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿದೆ.
ದುರಂತದಲ್ಲಿ ವಿಮಾನ ಪ್ರಯಾಣಿಕರಲ್ಲದೇ 5 ಹಾಸ್ಟೆಲ್ ವಿದ್ಯಾರ್ಥಿಗಳೂ ಕೂಡ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಗುಜರಾತ್ ರಾಜಧಾನಿ ಅಹಮದಾಬಾದ್ ಏರ್ಪೋರ್ಟ್ ಬಳಿ ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೇವಲ ಐದೇ ನಿಮಿಷದಲ್ಲಿ ಪತನಗೊಂಡಿದೆ.
ಏರ್ಪೋರ್ಟ್ ಬಳಿ ಮೇಧಿನಿ ನಗರ್ನಲ್ಲಿ ಈ ಘಟನೆ ಸಂಭವಿಸಿದ್ದು, ಬೋಯಿಂಗ್ 787-8 ಡ್ರೀಮ್ಲೈನರ್ (AI-171) ವಿಮಾನವು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರೊಂದಿಗೆ ಲಂಡನ್ಗೆ ತೆರಳುತ್ತಿತ್ತು ಎನ್ನಲಾಗಿದೆ.
ವಿಮಾನವು ನಗರದ ವಿಮಾನ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿರುವ ಫೋರೆನ್ಸಿಕ್ ಕ್ರಾಸ್ ರಸ್ತೆಯ ಬಳಿ ಬಿಜೆ ಮೆಡಿಕಲ್ ಕಾಲೇಜು ಹಾಸ್ಟೆಲ್ ಮೆಸ್ ಮೇಲೆ ಬಿದ್ದಿದೆ.
ದುರಂತದಲ್ಲಿ ಒಟ್ಟು 247 ಮಂದಿ ಸಾವಿಗೀಡಾಗಿದ್ದು, ಈ ಪೈಕಿ 230 ವಿಮಾನ ಪ್ರಯಾಣಿಕರು, 10 ಮಂದಿ ವಿಮಾನ ಸಿಬ್ಬಂದಿ, ಇಬ್ಬರು ಪೈಲಟ್ ( ಮುಖ್ಯ ಪೈಲಟ ಸುಮಿತ್ ಸಭರ್ವಾಲ್ ಮತ್ತು ಕೋ ಪೈಲಟ್ ಕ್ಲೈವ್ ಕುಂದರ್) ಗಳು ಸೇರಿದ್ದರು.
ವಿಾನದಲ್ಲಿದ್ದ 242 ಜನರಲ್ಲಿ 169 ಭಾರತೀಯ ಪ್ರಜೆಗಳು, 53 ಬ್ರಿಟಿಷ್ ಪ್ರಜೆಗಳು, 1 ಕೆನಡಾ ಪ್ರಜೆ ಮತ್ತು 7 ಪೋರ್ಚುಗೀಸ್ ಪ್ರಜೆಗಳು ಇದ್ದರು ಎಂದು ತಿಳಿದುಬಂದಿದೆ.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…