ಏಳು ಜನ್ಮ ಎತ್ತಿ ಬಂದರೂ ರಾಮನಗರ ಜಿಲ್ಲೆಯನ್ನು ಛಿದ್ರ ಮಾಡಲು ಸಾಧ್ಯವಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

ಈ ಜನ್ಮವಷ್ಟೇ ಅಲ್ಲ, ಇನ್ನು ಏಳು ಜನ್ಮ ಎತ್ತಿ ಬಂದರೂ ರಾಮನಗರ ಜಿಲ್ಲೆಯನ್ನು ಛಿದ್ರ ಮಾಡಲು ಸಾಧ್ಯವಿಲ್ಲ. ಇದನ್ನು ಡಿ.ಕೆ.ಶಿವಕುಮಾರ್ ಅರಿತುಕೊಳ್ಳಬೇಕು. ಜನರ ಅನುಕೂಲ, ಅನನುಕೂಲಗಳನ್ನು ವೈಜ್ಞಾನಿಕವಾಗಿ ಪರಿಗಣಿಸಿ, ಪರಿಶೀಲಿಸಿ ರಾಮನಗರ ಜಿಲ್ಲೆ ರಚನೆ ಮಾಡಲಾಗಿದೆ. ಈಗ ಜಿಲ್ಲೆ ಒಡೆದು ಕನಕಪುರವನ್ನು ಬೆಂಗಳೂರಿಗೆ ಸೇರಿಸುತ್ತೇವೆ ಎಂದರೆ ಇಡೀ ಜಿಲ್ಲೆಯ ಜನ ತಿರುಗಿಬೀಳುತ್ತಾರೆ, ಜೋಕೆ. ಒಡೆದು ಚೂರುಚೂರು ಮಾಡುವುದಕ್ಕೆ ರಾಮನಗರವೇನು ಕಲ್ಲುಬಂಡೆಯೇ? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

“ಈ‌ ದೇಶಕ್ಕೆ ವಿದ್ಯಾವಂತರು ಅಲ್ಲದಿದ್ದರೂ, ಬುದ್ದಿವಂತರು ಅಲ್ಲದಿದ್ದರೂ ಪ್ರಜ್ಞಾವಂತರು ಬೇಕು. ನಾನು ಕುಮಾರಸ್ವಾಮಿ ಅವರನ್ನು ಪ್ರಜ್ಞಾವಂತರು ಅಂದುಕೊಂಡಿದ್ದೆ. ಅವರ ತಂದೆಯವರನ್ನು ಕೇಳಿ ತಿಳಿದುಕೊಳ್ಳಬೇಕು” ಎಂದು ದರ್ಪದ ಮಾತು ಹೇಳಿದ್ದಾರೆ ಡಿಸಿಎಂ. ವಿದ್ಯೆ, ಬುದ್ಧಿ ಇಲ್ಲದಿದ್ದರೆ ಪ್ರಜ್ಞಾವಂತರು ಹೇಗಾದಾರು? ಎನ್ನುವ ಸಾಮಾನ್ಯ ಜ್ಞಾನ ಅವರಿಗಿಲ್ಲ. ಅವರ ಪ್ರಜ್ಞಾವಂತಿಕೆ ಎಂಥಹುದು ಎಂಬುದು ಜನಜನಿತ! ಎಂದಿದ್ದಾರೆ.

ಬಡವರ ಹೊಟ್ಟೆ ಮೇಲೆ ಒಡೆಯುವ, ಕಂಡೋರ ಭೂಮಿಗೆ ಬೇಲಿ ಹಾಕುವ, ಬೆಟ್ಟಗುಡ್ಡಗಳನ್ನು ಲೂಟಿ ಮಾಡಿ ವಿದೇಶಗಳಿಗೆ ಸಾಗಿಸಿ ಹಣ ಮಾಡಿಕೊಳ್ಳುವ, ಅದಕ್ಕೆ ಅಡ್ಡ ಬಂದವರ ಜೀವ ತೆಗೆಯುವ ‘ದುಷ್ಟ’ಪ್ರಜ್ಞೆ, ‘ಅತಿ’ ಬುದ್ಧಿವಂತಿಕೆ, ‘ಅಸಾಮಾನ್ಯ’ ಜ್ಞಾನ ಖಂಡಿತವಾಗಿಯೂ ನನಗಿಲ್ಲ. ಅದು ನನಗೆ ಬೇಕಾಗಿಯೂ ಇಲ್ಲ ಎಂದು ಹೇಳಿದ್ದಾರೆ.

“ಕುಮಾರಸ್ವಾಮಿ ಏನೇನೋ ಹೇಳುತ್ತಾರೆ. ನನ್ನ ತಲೆಯಲ್ಲಿ ಏನೋ ಯೋಚನೆ ಇದೆ” ಎನ್ನುತ್ತಾರೆ ಡಿಸಿಎಂ. ಇಷ್ಟಕ್ಕೂ ಅವರ ತಲೆಯಲ್ಲಿ ಏನಿದೆ? ಚಿನ್ನದ ಬೆಲೆಯ ಕನಕಪುರದ ಭೂಮಿಗಳನ್ನು ಕೊಳ್ಳೆ ಹೊಡೆದು ಬಿಲ್ಡರುಗಳಿಗೆ ಒಪ್ಪಿಸುವುದೇ? ಅಥವಾ ತಾವು ಈಗಾಗಲೇ ಎಗ್ಗಿಲ್ಲದೆ ಬೇಲಿ ಹಾಕಿಕೊಂಡಿರುವ ಬೇನಾಮಿ ಭೂಮಿಗಳಲ್ಲಿ ಕೋಟೆ ಕಟ್ಟಿಕೊಳ್ಳುವುದೇ? ಬಿಡಿಸಿ ಹೇಳಿದರೆ ನಾವು ಕೃತಾರ್ಥರಾಗುತ್ತೇವೆ. ಇವರು ಹೇಳಲ್ಲ, ಜನರೂ ನಂಬಲ್ಲ.. ಎಲ್ಲವೂ ನಿಗೂಢ ಎಂದು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ, ಚಾಮರಾಜನಗರ, ಯಾದಗಿರಿ, ಕೊಪ್ಪಳ, ಗದಗ ಸೇರಿ ಅನೇಕ ಹೊಸ ಜಿಲ್ಲೆಗಳು ರಚನೆ ಆಗಿವೆ. ಅವೆಲ್ಲವನ್ನೂ ಸುಖಾಸುಮ್ಮನೆ ಮಾಡಲಾಯಿತೆ? ಜನಹಿತ ಪರಿಗಣಿಸಿ ಹೊಸ ಜಿಲ್ಲೆಗಳನ್ನು ರಚಿಸಲಾಯಿತು. ಅಲ್ಲಿ ಜಿಲ್ಲೆಗಳನ್ನು ರಚನೆ ಮಾಡಿದ ಮುಖ್ಯಮಂತ್ರಿಯ ಸ್ವಹಿತ ಇರಲಿಲ್ಲ. ಕನಕಪುರವನ್ನು ಬೆಂಗಳೂರಿಗೆ ಸೇರಿಸಬೇಕೆನ್ನುವುದರ ಹಿಂದೆ ಯಾರ ಹಿತ ಅಡಗಿದೆ? ಕನಕಪುರದ ಪ್ರತಿಯೊಬ್ಬರಿಗೂ ಅಸಲಿ ಸತ್ಯ ಗೊತ್ತಿದೆ. ಇರುವ ಶ್ರೀಮಂತಿಕೆ, ಸಂಪತ್ತು ಸಾಲದೆ? ಇನ್ನೆಷ್ಟನ್ನು ಕೂಡಿ ಹಾಕಬೇಕು? ಎಂದು ಪ್ರಶ್ನೆ ಮಾಡಿದ್ದಾರೆ.

 ಕನಕಪುರದ ಅಭಿವೃದ್ಧಿ ಈಗ ನೆನಪಾಗಿದೆಯಾ? 1983ಕ್ಕೆ ಮೊದಲು ಇದೇ ಕನಕಪುರ, ಸಾತನೂರು ಹೇಗಿದ್ದವು? ರಾಮಕೃಷ್ಣ ಹೆಗಡೆ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲು ಬಂದ ಮಾಜಿ ಪ್ರಧಾನಿ ದೇವೇಗೌಡ ಅವರಿಗೆ, ಅಲ್ಲಿನ ಸ್ಥಿತಿ ಕಂಡು ಕಣ್ಣೀರು ಬಂತು. ಒಂದು ವಿದ್ಯುತ್‌ ಸಂಪರ್ಕ ಇರಲಿಲ್ಲ, ರಸ್ತೆ-ಚರಂಡಿ ಇರಲಿಲ್ಲ. ಕುಡಿಯಲು ನೀರು ಇರಲಿಲ್ಲ. ಆ ಪರಿಸ್ಥಿತಿಯನ್ನು ದೇವೇಗೌಡರು ಈಗಲೂ ನೆನಪು ಮಾಡಿಕೊಳ್ಳುತ್ತಾರೆ. ಅಂದು ಲೋಕೋಪಯೋಗಿ, ಬೃಹತ್‌ ನೀರಾವರಿ ಮಂತ್ರಿಗಳಾಗಿದ್ದ ಅವರು ಕನಕಪುರ, ರಾಮನಗರಕ್ಕೆ ಕಾಯಕಲ್ಪ ನೀಡಿದರು, ಆ ದುಸ್ಥಿತಿಯನ್ನು ಬದಲಿಸಿದರು. ಅವರ ಕೆಲಸವನ್ನೇ ನಾನೂ ಮುಂದುವರಿಸಿದೆ. ನೀವೇನು ಮಾಡಿದ್ದೀರಿ ಡಿ.ಕೆ.ಶಿವಕುಮಾರ್‌ ರವರೇ..? ಬಡವರ ಜಮೀನಿಗೆ ಬೇಲಿ ಹಾಕಿದ್ದು, ಅಡ್ಡ ಬಂದವರ ಜೀವ ತೆಗೆದದ್ದು, ಕಲ್ಲುಬಂಡೆಗಳನ್ನು ಲೂಟಿ ಮಾಡಿದ್ದು, ಕನಕಪುರದಲ್ಲಿ ದಾದಾಗಿರಿ, ಗೂಂಡಾಗಿರಿ ಮಾಡಿದ್ದು. ಈಗ ಕನಕಪುರವನ್ನು ಬೆಂಗಳೂರಿಗೆ ಸೇರಿಸಿ ಇನ್ನೊಂದು ಮಾಫಿಯಾ ಕಟ್ಟುವುದಾ? ಇದಾ ನಿಮ್ಮ ತಲೆಯಲ್ಲಿ ಇರುವ ಆಲೋಚನೆ? ಎಂದಿದ್ದಾರೆ.

ನಾಡಪ್ರಭು ಶ್ರೀ ಕೆಂಪೇಗೌಡರು, ಶ್ರೀ ಕೆಂಗಲ್‌ ಹನುಮಂತಯ್ಯನವರು, ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳು, ಶ್ರೀ ಶ್ರೀ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಗಳು ರಾಮನಗರದವರು ಎಂದು ನಿಮಗೆ ಈಗ ಜ್ಞಾನೋದಯ ಆಗಿದೆ. ಇಂಥ ಮಹಾಪುರುಷರು ಜನ್ಮತಳೆದ, ಅವರು ನಡೆದಾಡಿದ ನೆಲವನ್ನು ʼರಿಯಲ್‌ ಎಸ್ಟೇಟ್‌ ಪಾಪಕುಂಡʼವನ್ನಾಗಿ ಮಾಡಿದ್ದು ಯಾರಪ್ಪ ಡಿ.ಕೆ.ಶಿವಕುಮಾರ್?‌ ಈ ಪುಣ್ಯಪರುಷರ ಹೆಸರು ಹೇಳುವ ನೈತಿಕತೆ ನಿಮಗೆ ಇದೆಯಾ? ರಾಮದೇವೇರ ಬೆಟ್ಟದಲ್ಲಿ ನೆಲೆಸಿರುವ ಶ್ರೀರಾಮಚಂದ್ರ ಪ್ರಭು ನಿಮ್ಮ ದುಷ್ಟ ಹುನ್ನಾರವನ್ನು ಮೆಚ್ಚಾನೆಯೇ? ಎಂದು ಪ್ರಶ್ನಿಸಿದ್ದಾರೆ.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

23 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago