Categories: ರಾಜ್ಯ

ಏಷಿಯಾ ಖಂಡದ ಬೃಹತ್ ಸೌರಶಕ್ತಿ ವಾಹನಗಳ ಸ್ಪರ್ಧೆಯಲ್ಲಿ ಪ್ರಶಸ್ತಿ ಗೆದ್ದ ನಿಟ್ಟೆ ಕಾಲೇಜು

ಯಲಹಂಕ : ಬೆಂಗಳೂರಿನ ನಿಟ್ಟೆ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಏಷಿಯಾ ಖಂಡದ ಬೃಹತ್ ಸೌರಶಕ್ತಿ ವಾಹನಗಳ ಸ್ವರ್ಥೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನ ಪಡೆದಿದ್ದಾರೆ. ಪೀಪಲ್ಸ್ ಚಾಯ್ಸ್ ಅವಾರ್ಡ್ ಪ್ರಶಸ್ತಿಯನ್ನ ಗೆದ್ದು ಎಲ್ಲರ ಮೆಚ್ಚಿಗೆ ಗಳಿಸಿದ ನಿಟ್ಟೆ ಇಂಜಿನಿಯರಿಂಗ್ ಕಾಲೇಜು.

ಗ್ರೇಟರ್ ನೋಯ್ಡಾದ ಗಲ್ಗೋತಿಯಾಸ್ ವಿಶ್ವವಿದ್ಯಾಲಯ ಹಾಗೂ ಇಂಪೀರಿಯಲ್ ಸೊಸೈಟಿ ಆಫ್ ಇನ್ನೋವೇಟಿವ್ ಇಂಜಿನಿಯರ್ಸ್ ಸಹಯೋಗದಲ್ಲಿ ವಾರ್ಷಿಕ ಎಲೆಕ್ಚ್ರಾನಿಕ್ ಸೋಲಾರ್ ವಾಹನಗಳ ರಾಷ್ಟ್ರೀಯ ಸ್ಪರ್ಧೆಯನ್ನ(ESVC-2023) ಅಯೋಜನೆ ಮಾಡಲಾಗಿತ್ತು.

ಇದು ಏಶಿಯಾ ಖಂಡದ ಅತ್ಯಂತ ಬೃಹತ್ ಆದ ಸೌರಶಕ್ತಿ ವಾಹನಗಳ ಸ್ಫರ್ಧೆಯಾಗಿದೆ. ಈ ಸ್ವರ್ಥೆಯಲ್ಲಿ ಬೆಂಗಳೂರಿನ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ನಿರ್ಮಿಸಿದ ವಾಹನ ಪ್ರದರ್ಶನ ನಡೆಯಿತು. ನಿಟ್ಟೆ ವಿದ್ಯಾರ್ಥಿಗಳ ವಾಹನಕ್ಕೆ ಪೀಪಲ್ಸ್ ಚಾಯ್ಸ್ ಅವಾರ್ಡ್ (ವೀಕ್ಷಕರ ಆಯ್ಕೆ ಪ್ರಶಸ್ತಿ) ಸಿಕ್ಕಿರುವುದು ವಿದ್ಯಾರ್ಥಿಗಳು ಶಿಕ್ಷಕರ ಸಂತಸಕ್ಕೆ ಕಾರಣವಾಗಿದೆ.

ಸೌರಶಕ್ತಿಯ ವಾಹನ ನಿರ್ಮಾಣದ ಹೊಣೆಯನ್ನ ಶಿಕ್ಷಕ-ವಿದ್ಯಾರ್ಥಿ ಒಕ್ಕೂಟ ಟೀಂ ಹೋರಸ್ ತೆಗೆದುಕೊಂಡಿತ್ತು, ಪೀಪಲ್ಸ್ ಚಾಯ್ಸ್ ಅವಾರ್ಡ್ ಪ್ರಶಸ್ತಿಯ ಜೊತೆಗೆ ಅತ್ಯುತ್ತಮ ವಿನ್ಯಾಸ ಪ್ರಶಸ್ತಿ, ಅತ್ಯುತ್ತಮ ಔದ್ಯಮಿಕ ಪ್ರಶಸ್ತಿ ಹಾಗೂ ಭವಿಷ್ಯದ ಭರವಸೆಯ ಪ್ರಶಸ್ತಿಗಳನ್ನು ಸಹ ಪಡೆದಿದೆ. ಪ್ರಶಸ್ತಿ ಪಡೆದ ತಂಡಕ್ಕೆ ಅಭಿವಂದನೆ ಸಲ್ಲಿಸಲು ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸಮಾರಂಭವನ್ನ ಆಯೋಜನೆ ಮಾಡಲಾಗಿತ್ತು.

Ramesh Babu

Journalist

Recent Posts

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

3 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

4 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

15 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

15 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

18 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

1 day ago