Categories: ರಾಜ್ಯ

ಏಷಿಯಾ ಖಂಡದ ಬೃಹತ್ ಸೌರಶಕ್ತಿ ವಾಹನಗಳ ಸ್ಪರ್ಧೆಯಲ್ಲಿ ಪ್ರಶಸ್ತಿ ಗೆದ್ದ ನಿಟ್ಟೆ ಕಾಲೇಜು

ಯಲಹಂಕ : ಬೆಂಗಳೂರಿನ ನಿಟ್ಟೆ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಏಷಿಯಾ ಖಂಡದ ಬೃಹತ್ ಸೌರಶಕ್ತಿ ವಾಹನಗಳ ಸ್ವರ್ಥೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನ ಪಡೆದಿದ್ದಾರೆ. ಪೀಪಲ್ಸ್ ಚಾಯ್ಸ್ ಅವಾರ್ಡ್ ಪ್ರಶಸ್ತಿಯನ್ನ ಗೆದ್ದು ಎಲ್ಲರ ಮೆಚ್ಚಿಗೆ ಗಳಿಸಿದ ನಿಟ್ಟೆ ಇಂಜಿನಿಯರಿಂಗ್ ಕಾಲೇಜು.

ಗ್ರೇಟರ್ ನೋಯ್ಡಾದ ಗಲ್ಗೋತಿಯಾಸ್ ವಿಶ್ವವಿದ್ಯಾಲಯ ಹಾಗೂ ಇಂಪೀರಿಯಲ್ ಸೊಸೈಟಿ ಆಫ್ ಇನ್ನೋವೇಟಿವ್ ಇಂಜಿನಿಯರ್ಸ್ ಸಹಯೋಗದಲ್ಲಿ ವಾರ್ಷಿಕ ಎಲೆಕ್ಚ್ರಾನಿಕ್ ಸೋಲಾರ್ ವಾಹನಗಳ ರಾಷ್ಟ್ರೀಯ ಸ್ಪರ್ಧೆಯನ್ನ(ESVC-2023) ಅಯೋಜನೆ ಮಾಡಲಾಗಿತ್ತು.

ಇದು ಏಶಿಯಾ ಖಂಡದ ಅತ್ಯಂತ ಬೃಹತ್ ಆದ ಸೌರಶಕ್ತಿ ವಾಹನಗಳ ಸ್ಫರ್ಧೆಯಾಗಿದೆ. ಈ ಸ್ವರ್ಥೆಯಲ್ಲಿ ಬೆಂಗಳೂರಿನ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ನಿರ್ಮಿಸಿದ ವಾಹನ ಪ್ರದರ್ಶನ ನಡೆಯಿತು. ನಿಟ್ಟೆ ವಿದ್ಯಾರ್ಥಿಗಳ ವಾಹನಕ್ಕೆ ಪೀಪಲ್ಸ್ ಚಾಯ್ಸ್ ಅವಾರ್ಡ್ (ವೀಕ್ಷಕರ ಆಯ್ಕೆ ಪ್ರಶಸ್ತಿ) ಸಿಕ್ಕಿರುವುದು ವಿದ್ಯಾರ್ಥಿಗಳು ಶಿಕ್ಷಕರ ಸಂತಸಕ್ಕೆ ಕಾರಣವಾಗಿದೆ.

ಸೌರಶಕ್ತಿಯ ವಾಹನ ನಿರ್ಮಾಣದ ಹೊಣೆಯನ್ನ ಶಿಕ್ಷಕ-ವಿದ್ಯಾರ್ಥಿ ಒಕ್ಕೂಟ ಟೀಂ ಹೋರಸ್ ತೆಗೆದುಕೊಂಡಿತ್ತು, ಪೀಪಲ್ಸ್ ಚಾಯ್ಸ್ ಅವಾರ್ಡ್ ಪ್ರಶಸ್ತಿಯ ಜೊತೆಗೆ ಅತ್ಯುತ್ತಮ ವಿನ್ಯಾಸ ಪ್ರಶಸ್ತಿ, ಅತ್ಯುತ್ತಮ ಔದ್ಯಮಿಕ ಪ್ರಶಸ್ತಿ ಹಾಗೂ ಭವಿಷ್ಯದ ಭರವಸೆಯ ಪ್ರಶಸ್ತಿಗಳನ್ನು ಸಹ ಪಡೆದಿದೆ. ಪ್ರಶಸ್ತಿ ಪಡೆದ ತಂಡಕ್ಕೆ ಅಭಿವಂದನೆ ಸಲ್ಲಿಸಲು ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸಮಾರಂಭವನ್ನ ಆಯೋಜನೆ ಮಾಡಲಾಗಿತ್ತು.

Ramesh Babu

Journalist

Recent Posts

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

6 minutes ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

16 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

16 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

1 day ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

1 day ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

1 day ago