Categories: ರಾಜ್ಯ

ಏಷಿಯಾ ಖಂಡದ ಬೃಹತ್ ಸೌರಶಕ್ತಿ ವಾಹನಗಳ ಸ್ಪರ್ಧೆಯಲ್ಲಿ ಪ್ರಶಸ್ತಿ ಗೆದ್ದ ನಿಟ್ಟೆ ಕಾಲೇಜು

ಯಲಹಂಕ : ಬೆಂಗಳೂರಿನ ನಿಟ್ಟೆ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಏಷಿಯಾ ಖಂಡದ ಬೃಹತ್ ಸೌರಶಕ್ತಿ ವಾಹನಗಳ ಸ್ವರ್ಥೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನ ಪಡೆದಿದ್ದಾರೆ. ಪೀಪಲ್ಸ್ ಚಾಯ್ಸ್ ಅವಾರ್ಡ್ ಪ್ರಶಸ್ತಿಯನ್ನ ಗೆದ್ದು ಎಲ್ಲರ ಮೆಚ್ಚಿಗೆ ಗಳಿಸಿದ ನಿಟ್ಟೆ ಇಂಜಿನಿಯರಿಂಗ್ ಕಾಲೇಜು.

ಗ್ರೇಟರ್ ನೋಯ್ಡಾದ ಗಲ್ಗೋತಿಯಾಸ್ ವಿಶ್ವವಿದ್ಯಾಲಯ ಹಾಗೂ ಇಂಪೀರಿಯಲ್ ಸೊಸೈಟಿ ಆಫ್ ಇನ್ನೋವೇಟಿವ್ ಇಂಜಿನಿಯರ್ಸ್ ಸಹಯೋಗದಲ್ಲಿ ವಾರ್ಷಿಕ ಎಲೆಕ್ಚ್ರಾನಿಕ್ ಸೋಲಾರ್ ವಾಹನಗಳ ರಾಷ್ಟ್ರೀಯ ಸ್ಪರ್ಧೆಯನ್ನ(ESVC-2023) ಅಯೋಜನೆ ಮಾಡಲಾಗಿತ್ತು.

ಇದು ಏಶಿಯಾ ಖಂಡದ ಅತ್ಯಂತ ಬೃಹತ್ ಆದ ಸೌರಶಕ್ತಿ ವಾಹನಗಳ ಸ್ಫರ್ಧೆಯಾಗಿದೆ. ಈ ಸ್ವರ್ಥೆಯಲ್ಲಿ ಬೆಂಗಳೂರಿನ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ನಿರ್ಮಿಸಿದ ವಾಹನ ಪ್ರದರ್ಶನ ನಡೆಯಿತು. ನಿಟ್ಟೆ ವಿದ್ಯಾರ್ಥಿಗಳ ವಾಹನಕ್ಕೆ ಪೀಪಲ್ಸ್ ಚಾಯ್ಸ್ ಅವಾರ್ಡ್ (ವೀಕ್ಷಕರ ಆಯ್ಕೆ ಪ್ರಶಸ್ತಿ) ಸಿಕ್ಕಿರುವುದು ವಿದ್ಯಾರ್ಥಿಗಳು ಶಿಕ್ಷಕರ ಸಂತಸಕ್ಕೆ ಕಾರಣವಾಗಿದೆ.

ಸೌರಶಕ್ತಿಯ ವಾಹನ ನಿರ್ಮಾಣದ ಹೊಣೆಯನ್ನ ಶಿಕ್ಷಕ-ವಿದ್ಯಾರ್ಥಿ ಒಕ್ಕೂಟ ಟೀಂ ಹೋರಸ್ ತೆಗೆದುಕೊಂಡಿತ್ತು, ಪೀಪಲ್ಸ್ ಚಾಯ್ಸ್ ಅವಾರ್ಡ್ ಪ್ರಶಸ್ತಿಯ ಜೊತೆಗೆ ಅತ್ಯುತ್ತಮ ವಿನ್ಯಾಸ ಪ್ರಶಸ್ತಿ, ಅತ್ಯುತ್ತಮ ಔದ್ಯಮಿಕ ಪ್ರಶಸ್ತಿ ಹಾಗೂ ಭವಿಷ್ಯದ ಭರವಸೆಯ ಪ್ರಶಸ್ತಿಗಳನ್ನು ಸಹ ಪಡೆದಿದೆ. ಪ್ರಶಸ್ತಿ ಪಡೆದ ತಂಡಕ್ಕೆ ಅಭಿವಂದನೆ ಸಲ್ಲಿಸಲು ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸಮಾರಂಭವನ್ನ ಆಯೋಜನೆ ಮಾಡಲಾಗಿತ್ತು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

6 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

10 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

10 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

13 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago