Categories: ರಾಜ್ಯ

ಏಷಿಯಾ ಖಂಡದ ಬೃಹತ್ ಸೌರಶಕ್ತಿ ವಾಹನಗಳ ಸ್ಪರ್ಧೆಯಲ್ಲಿ ಪ್ರಶಸ್ತಿ ಗೆದ್ದ ನಿಟ್ಟೆ ಕಾಲೇಜು

ಯಲಹಂಕ : ಬೆಂಗಳೂರಿನ ನಿಟ್ಟೆ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಏಷಿಯಾ ಖಂಡದ ಬೃಹತ್ ಸೌರಶಕ್ತಿ ವಾಹನಗಳ ಸ್ವರ್ಥೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನ ಪಡೆದಿದ್ದಾರೆ. ಪೀಪಲ್ಸ್ ಚಾಯ್ಸ್ ಅವಾರ್ಡ್ ಪ್ರಶಸ್ತಿಯನ್ನ ಗೆದ್ದು ಎಲ್ಲರ ಮೆಚ್ಚಿಗೆ ಗಳಿಸಿದ ನಿಟ್ಟೆ ಇಂಜಿನಿಯರಿಂಗ್ ಕಾಲೇಜು.

ಗ್ರೇಟರ್ ನೋಯ್ಡಾದ ಗಲ್ಗೋತಿಯಾಸ್ ವಿಶ್ವವಿದ್ಯಾಲಯ ಹಾಗೂ ಇಂಪೀರಿಯಲ್ ಸೊಸೈಟಿ ಆಫ್ ಇನ್ನೋವೇಟಿವ್ ಇಂಜಿನಿಯರ್ಸ್ ಸಹಯೋಗದಲ್ಲಿ ವಾರ್ಷಿಕ ಎಲೆಕ್ಚ್ರಾನಿಕ್ ಸೋಲಾರ್ ವಾಹನಗಳ ರಾಷ್ಟ್ರೀಯ ಸ್ಪರ್ಧೆಯನ್ನ(ESVC-2023) ಅಯೋಜನೆ ಮಾಡಲಾಗಿತ್ತು.

ಇದು ಏಶಿಯಾ ಖಂಡದ ಅತ್ಯಂತ ಬೃಹತ್ ಆದ ಸೌರಶಕ್ತಿ ವಾಹನಗಳ ಸ್ಫರ್ಧೆಯಾಗಿದೆ. ಈ ಸ್ವರ್ಥೆಯಲ್ಲಿ ಬೆಂಗಳೂರಿನ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ನಿರ್ಮಿಸಿದ ವಾಹನ ಪ್ರದರ್ಶನ ನಡೆಯಿತು. ನಿಟ್ಟೆ ವಿದ್ಯಾರ್ಥಿಗಳ ವಾಹನಕ್ಕೆ ಪೀಪಲ್ಸ್ ಚಾಯ್ಸ್ ಅವಾರ್ಡ್ (ವೀಕ್ಷಕರ ಆಯ್ಕೆ ಪ್ರಶಸ್ತಿ) ಸಿಕ್ಕಿರುವುದು ವಿದ್ಯಾರ್ಥಿಗಳು ಶಿಕ್ಷಕರ ಸಂತಸಕ್ಕೆ ಕಾರಣವಾಗಿದೆ.

ಸೌರಶಕ್ತಿಯ ವಾಹನ ನಿರ್ಮಾಣದ ಹೊಣೆಯನ್ನ ಶಿಕ್ಷಕ-ವಿದ್ಯಾರ್ಥಿ ಒಕ್ಕೂಟ ಟೀಂ ಹೋರಸ್ ತೆಗೆದುಕೊಂಡಿತ್ತು, ಪೀಪಲ್ಸ್ ಚಾಯ್ಸ್ ಅವಾರ್ಡ್ ಪ್ರಶಸ್ತಿಯ ಜೊತೆಗೆ ಅತ್ಯುತ್ತಮ ವಿನ್ಯಾಸ ಪ್ರಶಸ್ತಿ, ಅತ್ಯುತ್ತಮ ಔದ್ಯಮಿಕ ಪ್ರಶಸ್ತಿ ಹಾಗೂ ಭವಿಷ್ಯದ ಭರವಸೆಯ ಪ್ರಶಸ್ತಿಗಳನ್ನು ಸಹ ಪಡೆದಿದೆ. ಪ್ರಶಸ್ತಿ ಪಡೆದ ತಂಡಕ್ಕೆ ಅಭಿವಂದನೆ ಸಲ್ಲಿಸಲು ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸಮಾರಂಭವನ್ನ ಆಯೋಜನೆ ಮಾಡಲಾಗಿತ್ತು.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

10 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

11 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

11 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

13 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

16 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

17 hours ago