Categories: ಕ್ರೀಡೆ

ಏಷ್ಯನ್ ಗೇಮ್ಸ್‌: ಪದಕ ಬೇಟೆಯಲ್ಲಿ ಶತಕ‌ ಸಾಧಿಸಿದ ಭಾರತ: ಬರೋಬ್ಬರಿ 72ವರ್ಷಗಳ ಬಳಿಕ ಮಹತ್ತರ ಸಾಧನೆ

ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ನಲ್ಲಿ ವಿವಿಧ ಕ್ರೀಡಾಕೂಟಗಳಲ್ಲಿ ಭಾರತದ ಕ್ರೀಡಾಪಟುಗಳಿಂದ ಪದಕ ಬೇಟೆ ಮುಂದುವರಿದಿದೆ.

ಮಹಿಳೆಯರ ಕಬಡ್ಡಿಯಲ್ಲಿ ಭಾರತ ತಂಡ ಗೆದ್ದು ಚಿನ್ನಕ್ಕೆ ಮುತ್ತಿಡುವ ಮೂಲಕ ಶತಕದ ಸಾಧನೆಯನ್ನು ಪೂರ್ಣಗೊಳಿಸಿ ಏಷ್ಯನ್ ಗೇಮ್ಸ್‌ನಲ್ಲಿ ದೊಡ್ಡ ಇತಿಹಾಸವನ್ನ ನಿರ್ಮಿಸಲಾಗಿದೆ.

ಇಲ್ಲಿಯವರೆಗೂ ಭಾರತ 25 ಚಿನ್ನ, 35 ಬೆಳ್ಳಿ ಮತ್ತು 40 ಕಂಚಿನ ಪದಕದೊಂದಿಗೆ ಒಟ್ಟಾರೆ 100 ಪದಕಗಳನ್ನು ಗೆದ್ದು ಶತಕದ ಸಾಧನೆ ಮಾಡಲಾಗಿದೆ.

ಏಷ್ಯನ್ ಗೇಮ್ಸ್ ನಲ್ಲಿ ಭಾರತ ಪಡೆದ ಪದಕಗಳ ವಿವರ

2002-36 ಪದಕ

2006-53 ಪದಕ

2010-65 ಪದಕ

2014-57 ಪದಕ

2018-70 ಪದಕ

2023-100 ಪದಕಗಳಿಗೆ ಮುತ್ತಿಕ್ಕುವ ಮೂಲಕ ಭಾರತ ಇತಿಹಾಸ ನಿರ್ಮಿಸಿದೆ.

ನಾವು 100 ಪದಕಗಳ ಗಮನಾರ್ಹ ಮೈಲಿಗಲ್ಲನ್ನು ತಲುಪಿದ್ದೇವೆ ಎಂದು ಭಾರತದ ಜನರು ರೋಮಾಂಚನಗೊಂಡಿದ್ದಾರೆ. ಭಾರತಕ್ಕೆ ಈ ಐತಿಹಾಸಿಕ ಮೈಲಿಗಲ್ಲಿಗೆ ಕಾರಣವಾದ ನಮ್ಮ ಅದ್ಭುತ ಕ್ರೀಡಾಪಟುಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಬರೆದುಕೊಂಡಿದ್ದಾರೆ.

 ಪ್ರತಿ ವಿಸ್ಮಯಕಾರಿ ಪ್ರದರ್ಶನವು ಇತಿಹಾಸವನ್ನು ನಿರ್ಮಿಸಿದೆ ಮತ್ತು ನಮ್ಮ ಹೃದಯವನ್ನು ಹೆಮ್ಮೆಯಿಂದ ತುಂಬಿದೆ. ಅ.10ರಂದು ನಮ್ಮ ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಲು ನಾನು ಎದುರು ನೋಡುತ್ತಿದ್ದೇನೆ ಎಂದಿದ್ದಾರೆ.

Ramesh Babu

Journalist

Recent Posts

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

10 minutes ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

5 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

6 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

6 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

8 hours ago

ಸಮಾಜ ಕಲ್ಯಾಣ ಇಲಾಖೆ: ಸಚಿವ ಸಂಪುಟದ ಪ್ರಬಲ ಖಾತೆ, ಕೆ.ಎಚ್. ಮುನಿಯಪ್ಪ ಆಸಕ್ತಿ ಏಕೆ?

ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…

9 hours ago