Categories: ಕ್ರೀಡೆ

ಏಷ್ಯನ್ ಗೇಮ್ಸ್‌: ಪದಕ ಬೇಟೆಯಲ್ಲಿ ಶತಕ‌ ಸಾಧಿಸಿದ ಭಾರತ: ಬರೋಬ್ಬರಿ 72ವರ್ಷಗಳ ಬಳಿಕ ಮಹತ್ತರ ಸಾಧನೆ

ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ನಲ್ಲಿ ವಿವಿಧ ಕ್ರೀಡಾಕೂಟಗಳಲ್ಲಿ ಭಾರತದ ಕ್ರೀಡಾಪಟುಗಳಿಂದ ಪದಕ ಬೇಟೆ ಮುಂದುವರಿದಿದೆ.

ಮಹಿಳೆಯರ ಕಬಡ್ಡಿಯಲ್ಲಿ ಭಾರತ ತಂಡ ಗೆದ್ದು ಚಿನ್ನಕ್ಕೆ ಮುತ್ತಿಡುವ ಮೂಲಕ ಶತಕದ ಸಾಧನೆಯನ್ನು ಪೂರ್ಣಗೊಳಿಸಿ ಏಷ್ಯನ್ ಗೇಮ್ಸ್‌ನಲ್ಲಿ ದೊಡ್ಡ ಇತಿಹಾಸವನ್ನ ನಿರ್ಮಿಸಲಾಗಿದೆ.

ಇಲ್ಲಿಯವರೆಗೂ ಭಾರತ 25 ಚಿನ್ನ, 35 ಬೆಳ್ಳಿ ಮತ್ತು 40 ಕಂಚಿನ ಪದಕದೊಂದಿಗೆ ಒಟ್ಟಾರೆ 100 ಪದಕಗಳನ್ನು ಗೆದ್ದು ಶತಕದ ಸಾಧನೆ ಮಾಡಲಾಗಿದೆ.

ಏಷ್ಯನ್ ಗೇಮ್ಸ್ ನಲ್ಲಿ ಭಾರತ ಪಡೆದ ಪದಕಗಳ ವಿವರ

2002-36 ಪದಕ

2006-53 ಪದಕ

2010-65 ಪದಕ

2014-57 ಪದಕ

2018-70 ಪದಕ

2023-100 ಪದಕಗಳಿಗೆ ಮುತ್ತಿಕ್ಕುವ ಮೂಲಕ ಭಾರತ ಇತಿಹಾಸ ನಿರ್ಮಿಸಿದೆ.

ನಾವು 100 ಪದಕಗಳ ಗಮನಾರ್ಹ ಮೈಲಿಗಲ್ಲನ್ನು ತಲುಪಿದ್ದೇವೆ ಎಂದು ಭಾರತದ ಜನರು ರೋಮಾಂಚನಗೊಂಡಿದ್ದಾರೆ. ಭಾರತಕ್ಕೆ ಈ ಐತಿಹಾಸಿಕ ಮೈಲಿಗಲ್ಲಿಗೆ ಕಾರಣವಾದ ನಮ್ಮ ಅದ್ಭುತ ಕ್ರೀಡಾಪಟುಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಬರೆದುಕೊಂಡಿದ್ದಾರೆ.

 ಪ್ರತಿ ವಿಸ್ಮಯಕಾರಿ ಪ್ರದರ್ಶನವು ಇತಿಹಾಸವನ್ನು ನಿರ್ಮಿಸಿದೆ ಮತ್ತು ನಮ್ಮ ಹೃದಯವನ್ನು ಹೆಮ್ಮೆಯಿಂದ ತುಂಬಿದೆ. ಅ.10ರಂದು ನಮ್ಮ ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಲು ನಾನು ಎದುರು ನೋಡುತ್ತಿದ್ದೇನೆ ಎಂದಿದ್ದಾರೆ.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

7 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

8 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

23 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago