ಏಷ್ಯಾದಲ್ಲೇ ಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ಬೀದಿದೀಪವನ್ನು ಬೆಳಗಿಸಿದ ಕೀರ್ತಿ ನಾಲ್ವಡಿ ಕೃಷ್ಣರಾಜರ ಒಡೆಯರಿಗೆ ಸಲ್ಲುತ್ತದೆ- ನಿವೃತ್ತ ಪ್ರಾಧ್ಯಾಪಕ ವಿ.ಎಸ್.ಹೆಗಡೆ

ಮೈಸೂರು ರಾಜ್ಯವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್, ಕನ್ನಡ ನಾಡಿನ ಅಭಿವೃದ್ಧಿಯ ಹರಿಕಾರರಾಗಿದ್ದಾರೆ ಎಂದು ನವೋದಯ ವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ವಿ.ಎಸ್.ಹೆಗಡೆ  ತಿಳಿಸಿದರು.

ನಗರದ ಎಂ.ಎ.ಬಿ.ಎಲ್  ಪ್ರೌಢಶಾಲೆಯಲ್ಲಿ  ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತ ಸಮಯದಲ್ಲಿ ನಿರ್ಮಾಣವಾದ ವಿವಿಧ ಜಲಾಶಯಗಳು, ಬೃಹತ್ ಕೈಗಾರಿಕೆಗಳು, ನೂರಾರು ಶಾಲೆಗಳು ಕನ್ನಡಿಗರ ಬದುಕನ್ನು  ಉಜ್ವಲಗೊಳಿಸಿವೆ. ಏಷ್ಯಾದಲ್ಲೇ ಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ಬೀದಿದೀಪವನ್ನು ಬೆಳಗಿಸಿದ ಕೀರ್ತಿ ನಾಲ್ವಡಿ ಕೃಷ್ಣರಾಜರ ಒಡೆಯರಿಗೆ ಸಲ್ಲುತ್ತದೆ ಎಂದರು.

ಮಹಾತ್ಮಗಾಂಧೀಜಿಯವರಿಂದ ರಾಜರ್ಷಿ ಬಿರುದು ಪಡೆದ ಹೆಗ್ಗಳಿಕೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪಾತ್ರರಾಗಿದ್ದಾರೆ. ಹಿಂದುಳಿದ ವರ್ಗಗಳಿಗೆ ಮೊದಲ ಬಾರಿಗೆ ಮೀಸಲಾತಿ ಕಲ್ಪಿಸಿ ಸಾಮಾಜಿಕ ಮತ್ತು ಆರ್ಥಿಕ ಸಮಾನತೆಗೆ ಶ್ರಮಿಸಿದ ಮಹನೀಯರನ್ನು ಕನ್ನಡಿಗರು ಎಂದಿಗೂ ಮರೆಯಲಾರರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮೈಸೂರು ಸಂಸ್ಥಾನ ವಿಶ್ವಮಾನ್ಯವಾಗಿ ಸರ್ವಾಂಗೀಣ ಪ್ರಗತಿ ಹೊಂದಲು ಕಾರಣೀಭೂತರಾದವರು. ಕೃಷ್ಣರಾಜ ಒಡೆಯರ್ ಅವರ ಆಳ್ವಿಕೆಯಲ್ಲಿ ಗ್ರಾಮ ನಿರ್ಮಲೀಕರಣ, ವೈದ್ಯಕೀಯ ಸಹಾಯ, ವಿದ್ಯಾ ಪ್ರಚಾರ, ನೀರಿನ ಸೌಕರ್ಯ ದೊರೆತವು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಸಬಾ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್, ನಾಲ್ವಡಿ ಕೃಷ್ಣರಾಜ ಒಡೆಯರ್ ದೂರದೃಷ್ಟಿಯ ಫಲವಾಗಿ ಮೈಸೂರು ರಾಜ್ಯ “ಮಾದರಿ ಮೈಸೂರು” ಎಂಬ ಕೀರ್ತಿಗೆ ಪ್ರಾಪ್ತವಾಯಿತು ಎಂದರು.

ನೀರಾವರಿ, ಕೈಗಾರಿಕೆ, ಶಿಕ್ಷಣ ಕ್ಷೇತ್ರಗಳಲ್ಲಿ ಕೃಷ್ಣರಾಜರ ಕೊಡುಗೆ ಅನನ್ಯವಾದುದು. ಅವರು ಜಾರಿಗೆ ತಂದ ಸಾಮಾಜಿಕ ಕಾನೂನುಗಳಿಂದ ಸಮಾಜದಲ್ಲಿನ ಅನಿಷ್ಠ ಪದ್ಧತಿಗಳ ನಿರ್ಮೂಲನೆ ಸಾಧ್ಯವಾಯಿತು. ಅವರು ಕನ್ನಡನಾಡಿನ ಸಮಗ್ರ ಅಭಿವೃದ್ಧಿಗೆ ಅಡಿಪಾಯ ಹಾಕಿದರು. ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಾದ ಕೃಷ್ಣರಾಜರು ಪ್ರಾತಃಸ್ಮರಣೀಯರಾಗಿದ್ದಾರೆ. ಕೃಷ್ಣರಾಜರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಇಂದಿನ ಯುವಪೀಳಿಗೆ ಶ್ರಮಿಸಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಕೃಷ್ಣರಾಜ ಒಡೆಯರ ಕುರಿತ ಗೀತೆಗಳನ್ನು ಹಾಡಿದರು.

ಈ ವೇಳೆ ಎಂ.ಎ.ಬಿ.ಎಲ್. ಸಂಸ್ಥೆಯ ಸಿ.ಇ.ಓ ಬಿ.ಪಿ. ಪ್ರಿಯಾಂಕ, ಸಮಾಜಸೇವಕ ದರ್ಗಾಜೋಗಿಹಳ್ಳಿ ಮಲ್ಲೇಶ್, ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.

Ramesh Babu

Journalist

Recent Posts

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

9 minutes ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

30 minutes ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

3 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

3 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

13 hours ago