ಏಷ್ಯಾದಲ್ಲೇ ಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ಬೀದಿದೀಪವನ್ನು ಬೆಳಗಿಸಿದ ಕೀರ್ತಿ ನಾಲ್ವಡಿ ಕೃಷ್ಣರಾಜರ ಒಡೆಯರಿಗೆ ಸಲ್ಲುತ್ತದೆ- ನಿವೃತ್ತ ಪ್ರಾಧ್ಯಾಪಕ ವಿ.ಎಸ್.ಹೆಗಡೆ

ಮೈಸೂರು ರಾಜ್ಯವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್, ಕನ್ನಡ ನಾಡಿನ ಅಭಿವೃದ್ಧಿಯ ಹರಿಕಾರರಾಗಿದ್ದಾರೆ ಎಂದು ನವೋದಯ ವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ವಿ.ಎಸ್.ಹೆಗಡೆ  ತಿಳಿಸಿದರು.

ನಗರದ ಎಂ.ಎ.ಬಿ.ಎಲ್  ಪ್ರೌಢಶಾಲೆಯಲ್ಲಿ  ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತ ಸಮಯದಲ್ಲಿ ನಿರ್ಮಾಣವಾದ ವಿವಿಧ ಜಲಾಶಯಗಳು, ಬೃಹತ್ ಕೈಗಾರಿಕೆಗಳು, ನೂರಾರು ಶಾಲೆಗಳು ಕನ್ನಡಿಗರ ಬದುಕನ್ನು  ಉಜ್ವಲಗೊಳಿಸಿವೆ. ಏಷ್ಯಾದಲ್ಲೇ ಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ಬೀದಿದೀಪವನ್ನು ಬೆಳಗಿಸಿದ ಕೀರ್ತಿ ನಾಲ್ವಡಿ ಕೃಷ್ಣರಾಜರ ಒಡೆಯರಿಗೆ ಸಲ್ಲುತ್ತದೆ ಎಂದರು.

ಮಹಾತ್ಮಗಾಂಧೀಜಿಯವರಿಂದ ರಾಜರ್ಷಿ ಬಿರುದು ಪಡೆದ ಹೆಗ್ಗಳಿಕೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪಾತ್ರರಾಗಿದ್ದಾರೆ. ಹಿಂದುಳಿದ ವರ್ಗಗಳಿಗೆ ಮೊದಲ ಬಾರಿಗೆ ಮೀಸಲಾತಿ ಕಲ್ಪಿಸಿ ಸಾಮಾಜಿಕ ಮತ್ತು ಆರ್ಥಿಕ ಸಮಾನತೆಗೆ ಶ್ರಮಿಸಿದ ಮಹನೀಯರನ್ನು ಕನ್ನಡಿಗರು ಎಂದಿಗೂ ಮರೆಯಲಾರರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮೈಸೂರು ಸಂಸ್ಥಾನ ವಿಶ್ವಮಾನ್ಯವಾಗಿ ಸರ್ವಾಂಗೀಣ ಪ್ರಗತಿ ಹೊಂದಲು ಕಾರಣೀಭೂತರಾದವರು. ಕೃಷ್ಣರಾಜ ಒಡೆಯರ್ ಅವರ ಆಳ್ವಿಕೆಯಲ್ಲಿ ಗ್ರಾಮ ನಿರ್ಮಲೀಕರಣ, ವೈದ್ಯಕೀಯ ಸಹಾಯ, ವಿದ್ಯಾ ಪ್ರಚಾರ, ನೀರಿನ ಸೌಕರ್ಯ ದೊರೆತವು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಸಬಾ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್, ನಾಲ್ವಡಿ ಕೃಷ್ಣರಾಜ ಒಡೆಯರ್ ದೂರದೃಷ್ಟಿಯ ಫಲವಾಗಿ ಮೈಸೂರು ರಾಜ್ಯ “ಮಾದರಿ ಮೈಸೂರು” ಎಂಬ ಕೀರ್ತಿಗೆ ಪ್ರಾಪ್ತವಾಯಿತು ಎಂದರು.

ನೀರಾವರಿ, ಕೈಗಾರಿಕೆ, ಶಿಕ್ಷಣ ಕ್ಷೇತ್ರಗಳಲ್ಲಿ ಕೃಷ್ಣರಾಜರ ಕೊಡುಗೆ ಅನನ್ಯವಾದುದು. ಅವರು ಜಾರಿಗೆ ತಂದ ಸಾಮಾಜಿಕ ಕಾನೂನುಗಳಿಂದ ಸಮಾಜದಲ್ಲಿನ ಅನಿಷ್ಠ ಪದ್ಧತಿಗಳ ನಿರ್ಮೂಲನೆ ಸಾಧ್ಯವಾಯಿತು. ಅವರು ಕನ್ನಡನಾಡಿನ ಸಮಗ್ರ ಅಭಿವೃದ್ಧಿಗೆ ಅಡಿಪಾಯ ಹಾಕಿದರು. ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಾದ ಕೃಷ್ಣರಾಜರು ಪ್ರಾತಃಸ್ಮರಣೀಯರಾಗಿದ್ದಾರೆ. ಕೃಷ್ಣರಾಜರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಇಂದಿನ ಯುವಪೀಳಿಗೆ ಶ್ರಮಿಸಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಕೃಷ್ಣರಾಜ ಒಡೆಯರ ಕುರಿತ ಗೀತೆಗಳನ್ನು ಹಾಡಿದರು.

ಈ ವೇಳೆ ಎಂ.ಎ.ಬಿ.ಎಲ್. ಸಂಸ್ಥೆಯ ಸಿ.ಇ.ಓ ಬಿ.ಪಿ. ಪ್ರಿಯಾಂಕ, ಸಮಾಜಸೇವಕ ದರ್ಗಾಜೋಗಿಹಳ್ಳಿ ಮಲ್ಲೇಶ್, ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.

Ramesh Babu

Journalist

Recent Posts

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

9 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

13 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

15 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

17 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

20 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

1 day ago