ಏಷ್ಯಾದಲ್ಲೇ ಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ಬೀದಿದೀಪವನ್ನು ಬೆಳಗಿಸಿದ ಕೀರ್ತಿ ನಾಲ್ವಡಿ ಕೃಷ್ಣರಾಜರ ಒಡೆಯರಿಗೆ ಸಲ್ಲುತ್ತದೆ- ನಿವೃತ್ತ ಪ್ರಾಧ್ಯಾಪಕ ವಿ.ಎಸ್.ಹೆಗಡೆ

ಮೈಸೂರು ರಾಜ್ಯವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್, ಕನ್ನಡ ನಾಡಿನ ಅಭಿವೃದ್ಧಿಯ ಹರಿಕಾರರಾಗಿದ್ದಾರೆ ಎಂದು ನವೋದಯ ವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ವಿ.ಎಸ್.ಹೆಗಡೆ  ತಿಳಿಸಿದರು.

ನಗರದ ಎಂ.ಎ.ಬಿ.ಎಲ್  ಪ್ರೌಢಶಾಲೆಯಲ್ಲಿ  ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತ ಸಮಯದಲ್ಲಿ ನಿರ್ಮಾಣವಾದ ವಿವಿಧ ಜಲಾಶಯಗಳು, ಬೃಹತ್ ಕೈಗಾರಿಕೆಗಳು, ನೂರಾರು ಶಾಲೆಗಳು ಕನ್ನಡಿಗರ ಬದುಕನ್ನು  ಉಜ್ವಲಗೊಳಿಸಿವೆ. ಏಷ್ಯಾದಲ್ಲೇ ಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ಬೀದಿದೀಪವನ್ನು ಬೆಳಗಿಸಿದ ಕೀರ್ತಿ ನಾಲ್ವಡಿ ಕೃಷ್ಣರಾಜರ ಒಡೆಯರಿಗೆ ಸಲ್ಲುತ್ತದೆ ಎಂದರು.

ಮಹಾತ್ಮಗಾಂಧೀಜಿಯವರಿಂದ ರಾಜರ್ಷಿ ಬಿರುದು ಪಡೆದ ಹೆಗ್ಗಳಿಕೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪಾತ್ರರಾಗಿದ್ದಾರೆ. ಹಿಂದುಳಿದ ವರ್ಗಗಳಿಗೆ ಮೊದಲ ಬಾರಿಗೆ ಮೀಸಲಾತಿ ಕಲ್ಪಿಸಿ ಸಾಮಾಜಿಕ ಮತ್ತು ಆರ್ಥಿಕ ಸಮಾನತೆಗೆ ಶ್ರಮಿಸಿದ ಮಹನೀಯರನ್ನು ಕನ್ನಡಿಗರು ಎಂದಿಗೂ ಮರೆಯಲಾರರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮೈಸೂರು ಸಂಸ್ಥಾನ ವಿಶ್ವಮಾನ್ಯವಾಗಿ ಸರ್ವಾಂಗೀಣ ಪ್ರಗತಿ ಹೊಂದಲು ಕಾರಣೀಭೂತರಾದವರು. ಕೃಷ್ಣರಾಜ ಒಡೆಯರ್ ಅವರ ಆಳ್ವಿಕೆಯಲ್ಲಿ ಗ್ರಾಮ ನಿರ್ಮಲೀಕರಣ, ವೈದ್ಯಕೀಯ ಸಹಾಯ, ವಿದ್ಯಾ ಪ್ರಚಾರ, ನೀರಿನ ಸೌಕರ್ಯ ದೊರೆತವು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಸಬಾ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್, ನಾಲ್ವಡಿ ಕೃಷ್ಣರಾಜ ಒಡೆಯರ್ ದೂರದೃಷ್ಟಿಯ ಫಲವಾಗಿ ಮೈಸೂರು ರಾಜ್ಯ “ಮಾದರಿ ಮೈಸೂರು” ಎಂಬ ಕೀರ್ತಿಗೆ ಪ್ರಾಪ್ತವಾಯಿತು ಎಂದರು.

ನೀರಾವರಿ, ಕೈಗಾರಿಕೆ, ಶಿಕ್ಷಣ ಕ್ಷೇತ್ರಗಳಲ್ಲಿ ಕೃಷ್ಣರಾಜರ ಕೊಡುಗೆ ಅನನ್ಯವಾದುದು. ಅವರು ಜಾರಿಗೆ ತಂದ ಸಾಮಾಜಿಕ ಕಾನೂನುಗಳಿಂದ ಸಮಾಜದಲ್ಲಿನ ಅನಿಷ್ಠ ಪದ್ಧತಿಗಳ ನಿರ್ಮೂಲನೆ ಸಾಧ್ಯವಾಯಿತು. ಅವರು ಕನ್ನಡನಾಡಿನ ಸಮಗ್ರ ಅಭಿವೃದ್ಧಿಗೆ ಅಡಿಪಾಯ ಹಾಕಿದರು. ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಾದ ಕೃಷ್ಣರಾಜರು ಪ್ರಾತಃಸ್ಮರಣೀಯರಾಗಿದ್ದಾರೆ. ಕೃಷ್ಣರಾಜರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಇಂದಿನ ಯುವಪೀಳಿಗೆ ಶ್ರಮಿಸಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಕೃಷ್ಣರಾಜ ಒಡೆಯರ ಕುರಿತ ಗೀತೆಗಳನ್ನು ಹಾಡಿದರು.

ಈ ವೇಳೆ ಎಂ.ಎ.ಬಿ.ಎಲ್. ಸಂಸ್ಥೆಯ ಸಿ.ಇ.ಓ ಬಿ.ಪಿ. ಪ್ರಿಯಾಂಕ, ಸಮಾಜಸೇವಕ ದರ್ಗಾಜೋಗಿಹಳ್ಳಿ ಮಲ್ಲೇಶ್, ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.

Ramesh Babu

Journalist

Recent Posts

ಮುಗಿಯದ ಕೆ.ಎಚ್. ಮುನಿಯಪ್ಪ ಖಾತೆ ‘ಮುನಿಸು’: ಪ.ಜಾ ಎಡಗೈ ಸಮುದಾಯಕ್ಕೆ ಸಿಗುವುದೇ ಉನ್ನತ ಸ್ಥಾನ?: ಪ್ರಬಲ ಖಾತೆಗೆ ಹಿರಿಯ ನಾಯಕನ ಪಟ್ಟು

ಬೆಂಗಳೂರು ಗ್ರಾಮಾಂತರ: ರಾಜ್ಯ ಕಾಂಗ್ರೆಸ್ ನಲ್ಲಿ ಟ್ರಬಲ್ ಶೂಟರ್ ಎಂದೇ ಖ್ಯಾತಿ ಪಡೆದಿರುವ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಹೊಸ ಸರ್ಕಾರ ರಚನೆಯಾದ…

10 minutes ago

ಪ್ರೊ. ಬಿ ಕೃಷ್ಣಪ್ಪ ಕರ್ನಾಟಕದ ಪ್ರಮುಖ ದಲಿತ ಚಳವಳಿಯ ಧೀಮಂತ ನಾಯಕ- ದಸಂಸ ಜಿಲ್ಲಾ ಸಂಚಾಲಕ ರಾಮಮೂರ್ತಿ(ರಾಮು)

ಸಮಾಜದಲ್ಲಿ ದಲಿತ ಸಮುದಾಯಗಳು ಎದುರಿಸುತ್ತಿದ್ದ ಸಮಸ್ಯೆಗಳ ವಿರುದ್ಧ ಹೋರಾಟ ನಡೆಸಿದ ಪ್ರೊ. ಬಿ ಕೃಷ್ಣಪ್ಪ ಅವರು ಎಲ್ಲರಿಗೂ ಮಾದರಿ. ಅವರ…

13 hours ago

ಜೆಡಿಎಸ್ ಬಣ ಗುದ್ದಾಟದಲ್ಲಿ ಕಾರ್ಯಕರ್ತರಿಗೆ ಸಿಕ್ಕ ‘ಸ್ಮೈಲ್ ಕ್ಯಾಪ್ಟನ್ ಆನಂದ್’

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 40 ವರ್ಷಗಳಿಂದ ರಾಜಕಾರಣ ಮಾಡುತ್ತಾ, ಮನೆ ಮಾತಾಗಿರುವ ಹುಸ್ಕೂರು ಟಿ. ಆನಂದ್ ಜೆಡಿಎಸ್ ಪಕ್ಷದಲ್ಲಿ ರಾಜ್ಯ ಪ್ರಧಾನ…

22 hours ago

ವೇಶ್ಯಾವಾಟಿಕೆ ಜಗತ್ತಿನ ಹಳೆಯದಾದ ಒಂದು ಕ್ರಿಯೆ…?

ವೇಶ್ಯಾವಾಟಿಕೆ...... ಒಂದು ವೃತ್ತಿಯೇ, ಜೀವನ ನಿರ್ವಹಣೆಯ ಒಂದು ಮಾರ್ಗವೇ, ಒಂದು ಉದ್ಯೋಗವೇ, ಸಹಜ ಪ್ರಾಕೃತಿಕ ವಿಧಾನವೇ, ಹೆಣ್ಣಿನ ಶೋಷಣೆಯೇ, ಗಂಡಿನ…

22 hours ago

ಮಳೆಗಾಲ ಆರಂಭ: ರಸ್ತೆಗುಂಡಿಗಳ ದರ್ಬಾರ್: ಟೋಲ್ ತಪ್ಪಿಸಲು ಹಳ್ಳಿ ರಸ್ತೆಗಳ ಬಳಕೆ: ಜನರ ಜೀವದ ಜೊತೆ ಚೆಲ್ಲಾಟ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ

ದೊಡ್ಡಬಳ್ಳಾಪುರ: ಮಳೆಗಾಲ ಆರಂಭವಾಗುತ್ತಿದ್ದಂತೆ ದೊಡ್ಡಬಳ್ಳಾಪುರ ನಗರ ಹಾಗೂ ಗ್ರಾಮೀಣ ಭಾಗಗಳ ರಸ್ತೆಗುಂಡಿಗಳ ಸಮಸ್ಯೆ ಮತ್ತೆ ತಲೆದೋರಿದ್ದು, ವಾಹನ ಸವಾರರು ಜೀವ…

23 hours ago

ಬೈಕ್ – ಕಾರಿನ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ರಾತ್ರಿ ದೊಡ್ಡಬಳ್ಳಾಪುರ…

1 day ago