ಏಷ್ಯಾದಲ್ಲೇ ಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ಬೀದಿದೀಪವನ್ನು ಬೆಳಗಿಸಿದ ಕೀರ್ತಿ ನಾಲ್ವಡಿ ಕೃಷ್ಣರಾಜರ ಒಡೆಯರಿಗೆ ಸಲ್ಲುತ್ತದೆ- ನಿವೃತ್ತ ಪ್ರಾಧ್ಯಾಪಕ ವಿ.ಎಸ್.ಹೆಗಡೆ

ಮೈಸೂರು ರಾಜ್ಯವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್, ಕನ್ನಡ ನಾಡಿನ ಅಭಿವೃದ್ಧಿಯ ಹರಿಕಾರರಾಗಿದ್ದಾರೆ ಎಂದು ನವೋದಯ ವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ವಿ.ಎಸ್.ಹೆಗಡೆ  ತಿಳಿಸಿದರು.

ನಗರದ ಎಂ.ಎ.ಬಿ.ಎಲ್  ಪ್ರೌಢಶಾಲೆಯಲ್ಲಿ  ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತ ಸಮಯದಲ್ಲಿ ನಿರ್ಮಾಣವಾದ ವಿವಿಧ ಜಲಾಶಯಗಳು, ಬೃಹತ್ ಕೈಗಾರಿಕೆಗಳು, ನೂರಾರು ಶಾಲೆಗಳು ಕನ್ನಡಿಗರ ಬದುಕನ್ನು  ಉಜ್ವಲಗೊಳಿಸಿವೆ. ಏಷ್ಯಾದಲ್ಲೇ ಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ಬೀದಿದೀಪವನ್ನು ಬೆಳಗಿಸಿದ ಕೀರ್ತಿ ನಾಲ್ವಡಿ ಕೃಷ್ಣರಾಜರ ಒಡೆಯರಿಗೆ ಸಲ್ಲುತ್ತದೆ ಎಂದರು.

ಮಹಾತ್ಮಗಾಂಧೀಜಿಯವರಿಂದ ರಾಜರ್ಷಿ ಬಿರುದು ಪಡೆದ ಹೆಗ್ಗಳಿಕೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪಾತ್ರರಾಗಿದ್ದಾರೆ. ಹಿಂದುಳಿದ ವರ್ಗಗಳಿಗೆ ಮೊದಲ ಬಾರಿಗೆ ಮೀಸಲಾತಿ ಕಲ್ಪಿಸಿ ಸಾಮಾಜಿಕ ಮತ್ತು ಆರ್ಥಿಕ ಸಮಾನತೆಗೆ ಶ್ರಮಿಸಿದ ಮಹನೀಯರನ್ನು ಕನ್ನಡಿಗರು ಎಂದಿಗೂ ಮರೆಯಲಾರರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮೈಸೂರು ಸಂಸ್ಥಾನ ವಿಶ್ವಮಾನ್ಯವಾಗಿ ಸರ್ವಾಂಗೀಣ ಪ್ರಗತಿ ಹೊಂದಲು ಕಾರಣೀಭೂತರಾದವರು. ಕೃಷ್ಣರಾಜ ಒಡೆಯರ್ ಅವರ ಆಳ್ವಿಕೆಯಲ್ಲಿ ಗ್ರಾಮ ನಿರ್ಮಲೀಕರಣ, ವೈದ್ಯಕೀಯ ಸಹಾಯ, ವಿದ್ಯಾ ಪ್ರಚಾರ, ನೀರಿನ ಸೌಕರ್ಯ ದೊರೆತವು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಸಬಾ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್, ನಾಲ್ವಡಿ ಕೃಷ್ಣರಾಜ ಒಡೆಯರ್ ದೂರದೃಷ್ಟಿಯ ಫಲವಾಗಿ ಮೈಸೂರು ರಾಜ್ಯ “ಮಾದರಿ ಮೈಸೂರು” ಎಂಬ ಕೀರ್ತಿಗೆ ಪ್ರಾಪ್ತವಾಯಿತು ಎಂದರು.

ನೀರಾವರಿ, ಕೈಗಾರಿಕೆ, ಶಿಕ್ಷಣ ಕ್ಷೇತ್ರಗಳಲ್ಲಿ ಕೃಷ್ಣರಾಜರ ಕೊಡುಗೆ ಅನನ್ಯವಾದುದು. ಅವರು ಜಾರಿಗೆ ತಂದ ಸಾಮಾಜಿಕ ಕಾನೂನುಗಳಿಂದ ಸಮಾಜದಲ್ಲಿನ ಅನಿಷ್ಠ ಪದ್ಧತಿಗಳ ನಿರ್ಮೂಲನೆ ಸಾಧ್ಯವಾಯಿತು. ಅವರು ಕನ್ನಡನಾಡಿನ ಸಮಗ್ರ ಅಭಿವೃದ್ಧಿಗೆ ಅಡಿಪಾಯ ಹಾಕಿದರು. ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಾದ ಕೃಷ್ಣರಾಜರು ಪ್ರಾತಃಸ್ಮರಣೀಯರಾಗಿದ್ದಾರೆ. ಕೃಷ್ಣರಾಜರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಇಂದಿನ ಯುವಪೀಳಿಗೆ ಶ್ರಮಿಸಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಕೃಷ್ಣರಾಜ ಒಡೆಯರ ಕುರಿತ ಗೀತೆಗಳನ್ನು ಹಾಡಿದರು.

ಈ ವೇಳೆ ಎಂ.ಎ.ಬಿ.ಎಲ್. ಸಂಸ್ಥೆಯ ಸಿ.ಇ.ಓ ಬಿ.ಪಿ. ಪ್ರಿಯಾಂಕ, ಸಮಾಜಸೇವಕ ದರ್ಗಾಜೋಗಿಹಳ್ಳಿ ಮಲ್ಲೇಶ್, ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

3 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

3 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

18 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago