ಮೈಸೂರು ರಾಜ್ಯವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್, ಕನ್ನಡ ನಾಡಿನ ಅಭಿವೃದ್ಧಿಯ ಹರಿಕಾರರಾಗಿದ್ದಾರೆ ಎಂದು ನವೋದಯ ವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ವಿ.ಎಸ್.ಹೆಗಡೆ ತಿಳಿಸಿದರು.
ನಗರದ ಎಂ.ಎ.ಬಿ.ಎಲ್ ಪ್ರೌಢಶಾಲೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತ ಸಮಯದಲ್ಲಿ ನಿರ್ಮಾಣವಾದ ವಿವಿಧ ಜಲಾಶಯಗಳು, ಬೃಹತ್ ಕೈಗಾರಿಕೆಗಳು, ನೂರಾರು ಶಾಲೆಗಳು ಕನ್ನಡಿಗರ ಬದುಕನ್ನು ಉಜ್ವಲಗೊಳಿಸಿವೆ. ಏಷ್ಯಾದಲ್ಲೇ ಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ಬೀದಿದೀಪವನ್ನು ಬೆಳಗಿಸಿದ ಕೀರ್ತಿ ನಾಲ್ವಡಿ ಕೃಷ್ಣರಾಜರ ಒಡೆಯರಿಗೆ ಸಲ್ಲುತ್ತದೆ ಎಂದರು.
ಮಹಾತ್ಮಗಾಂಧೀಜಿಯವರಿಂದ ರಾಜರ್ಷಿ ಬಿರುದು ಪಡೆದ ಹೆಗ್ಗಳಿಕೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪಾತ್ರರಾಗಿದ್ದಾರೆ. ಹಿಂದುಳಿದ ವರ್ಗಗಳಿಗೆ ಮೊದಲ ಬಾರಿಗೆ ಮೀಸಲಾತಿ ಕಲ್ಪಿಸಿ ಸಾಮಾಜಿಕ ಮತ್ತು ಆರ್ಥಿಕ ಸಮಾನತೆಗೆ ಶ್ರಮಿಸಿದ ಮಹನೀಯರನ್ನು ಕನ್ನಡಿಗರು ಎಂದಿಗೂ ಮರೆಯಲಾರರು.
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮೈಸೂರು ಸಂಸ್ಥಾನ ವಿಶ್ವಮಾನ್ಯವಾಗಿ ಸರ್ವಾಂಗೀಣ ಪ್ರಗತಿ ಹೊಂದಲು ಕಾರಣೀಭೂತರಾದವರು. ಕೃಷ್ಣರಾಜ ಒಡೆಯರ್ ಅವರ ಆಳ್ವಿಕೆಯಲ್ಲಿ ಗ್ರಾಮ ನಿರ್ಮಲೀಕರಣ, ವೈದ್ಯಕೀಯ ಸಹಾಯ, ವಿದ್ಯಾ ಪ್ರಚಾರ, ನೀರಿನ ಸೌಕರ್ಯ ದೊರೆತವು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಸಬಾ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್, ನಾಲ್ವಡಿ ಕೃಷ್ಣರಾಜ ಒಡೆಯರ್ ದೂರದೃಷ್ಟಿಯ ಫಲವಾಗಿ ಮೈಸೂರು ರಾಜ್ಯ “ಮಾದರಿ ಮೈಸೂರು” ಎಂಬ ಕೀರ್ತಿಗೆ ಪ್ರಾಪ್ತವಾಯಿತು ಎಂದರು.
ನೀರಾವರಿ, ಕೈಗಾರಿಕೆ, ಶಿಕ್ಷಣ ಕ್ಷೇತ್ರಗಳಲ್ಲಿ ಕೃಷ್ಣರಾಜರ ಕೊಡುಗೆ ಅನನ್ಯವಾದುದು. ಅವರು ಜಾರಿಗೆ ತಂದ ಸಾಮಾಜಿಕ ಕಾನೂನುಗಳಿಂದ ಸಮಾಜದಲ್ಲಿನ ಅನಿಷ್ಠ ಪದ್ಧತಿಗಳ ನಿರ್ಮೂಲನೆ ಸಾಧ್ಯವಾಯಿತು. ಅವರು ಕನ್ನಡನಾಡಿನ ಸಮಗ್ರ ಅಭಿವೃದ್ಧಿಗೆ ಅಡಿಪಾಯ ಹಾಕಿದರು. ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಾದ ಕೃಷ್ಣರಾಜರು ಪ್ರಾತಃಸ್ಮರಣೀಯರಾಗಿದ್ದಾರೆ. ಕೃಷ್ಣರಾಜರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಇಂದಿನ ಯುವಪೀಳಿಗೆ ಶ್ರಮಿಸಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಕೃಷ್ಣರಾಜ ಒಡೆಯರ ಕುರಿತ ಗೀತೆಗಳನ್ನು ಹಾಡಿದರು.
ಈ ವೇಳೆ ಎಂ.ಎ.ಬಿ.ಎಲ್. ಸಂಸ್ಥೆಯ ಸಿ.ಇ.ಓ ಬಿ.ಪಿ. ಪ್ರಿಯಾಂಕ, ಸಮಾಜಸೇವಕ ದರ್ಗಾಜೋಗಿಹಳ್ಳಿ ಮಲ್ಲೇಶ್, ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…