ಅದು ಏಷ್ಯಾದ ಎರಡನೇ ಅತೀ ದೊಡ್ಡ ಕೈಗಾರಿಕಾ ಪ್ರದೇಶ. ಅಲ್ಲಿ ಪ್ರತಿನಿತ್ಯ ಲಕ್ಷಾಂತರ ಜನ ಕೆಲಸ ಮಾಡುತ್ತಿದ್ದಾರೆ. ಆದರೆ ಇಲ್ಲಿ ಬೀದಿ ದೀಪಗಳು ರಾತ್ರಿ ವೇಳೆ ಬೆಳಗುವುದಿಲ್ಲ. ರಾತ್ರಿ ಆದರೆ ಸಾಕು ಕಳ್ಳರಿಗೆ ಹಬ್ಬವೋ ಹಬ್ಬ. ಬೀದಿ ದೀಪ ಇಲ್ಲದೆ ಲಕ್ಷಾಂತರ ಜನ ಪರದಾಡುತ್ತಿದ್ದಾರೆ. ಅಷ್ಟಕ್ಕೂ ಆ ಪ್ರದೇಶ ಯಾವುದು, ಯಾಕೆ ಪರದಾಟ ಅಂತಿರಾ ಈ ಸ್ಟೋರಿ ಓದಿ…….
ಹೌದು… ಹೀಗೆ ಎತ್ತ ನೋಡಿದರೂ ಕತ್ತಲೂ, ಇರುವ ಒಂದು ಹೊರ ಪೊಲೀಸ್ ಠಾಣೆಗೆ ಹಾಕಿರುವ ಬೀಗ, ಭಯದಲ್ಲಿಯೇ ಗುಂಪು ಗುಂಪಾಗಿ ಹೋಗುತ್ತಿರುವ ಮಹಿಳೆಯರು, ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ.
ಯೆಸ್, ಬೆಂಗಳೂರಿಗೆ ಕೇವಲ 25 ಕಿಮೀ ದೂರದಲ್ಲಿ ವಿವಿಧ ಕಂಪನಿಗಳ ದೊಡ್ಡ ಕೈಗಾರಿಕಾ ಪ್ರದೇಶವಿದೆ. ಈ ಕೈಗಾರಿಕಾ ಪ್ರದೇಶವು ಏಷ್ಯಾದ ಎರಡನೇ ಅತೀ ದೊಡ್ಡ ಕೈಗಾರಿಕಾ ಪ್ರದೇಶ ಎಂಬ ಹೆಗ್ಗಳಿಕೆ ಪಡೆದಿದೆ. ಆದರೆ, ಇಲ್ಲಿ ಬೀದಿ ದೀಪಗಳ ಸಮಸ್ಯೆ ಇದೆ. ಹಿಂದೂಪುರದಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಪಕ್ಕದಲ್ಲೇ ಇದ್ದು, ಮಾರಸಂದ್ರ ಬಳಿ ಟೋಲ್ ಸಂಗ್ರಹ ಮಾಡುತ್ತಿದ್ದಾರೆ. ಆದರೆ, ರಸ್ತೆಯಲ್ಲಿ ಮಾತ್ರ ಬೀದಿ ದೀಪವಿಲ್ಲ. ಅಲ್ಲದೆ ಕೈಗಾರಿಕಾ ಪ್ರದೇಶದಲ್ಲಿ ಯಾವುದೇ ಬೀದಿ ದೀಪವಿಲ್ಲ. ಬೀದಿ ದೀಪಗಳೆಲ್ಲಾ ಕಿತ್ತು ಕೆಳಗೆ ಬೀಳುವ ಪರಿಸ್ಥಿತಿಯಲ್ಲಿವೆ. ಇಷ್ಟಾದರೂ ಸಹ ಅಧಿಕಾರಿಗಳು ಮಾತ್ರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಒಟ್ಟಾರೆ ಬೃಹತ್ ಕೈಗಾರಿಕಾ ಪ್ರದೇಶದಲ್ಲಿ ಬೀದಿ ದೀಪಗಳಿಲ್ಲದೇ ಇರುವುದು ವಿಪರ್ಯಾಸ. ಇನ್ನಾದರೂ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಅಧಿಕಾರಿಗಳು ಬೀದಿ ದೀಪಗಳನ್ನು ಹಾಕಿ ಜನರಿಗೆ ಅನುಕೂಲ ಆಗುವಂತೆ ಮಾಡುತ್ತಾರಾ ಕಾದುನೋಡಬೇಕಿದೆ.
ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…
ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…