ಅದು ಏಷ್ಯಾದ ಎರಡನೇ ಅತೀ ದೊಡ್ಡ ಕೈಗಾರಿಕಾ ಪ್ರದೇಶ. ಅಲ್ಲಿ ಪ್ರತಿನಿತ್ಯ ಲಕ್ಷಾಂತರ ಜನ ಕೆಲಸ ಮಾಡುತ್ತಿದ್ದಾರೆ. ಆದರೆ ಇಲ್ಲಿ ಬೀದಿ ದೀಪಗಳು ರಾತ್ರಿ ವೇಳೆ ಬೆಳಗುವುದಿಲ್ಲ. ರಾತ್ರಿ ಆದರೆ ಸಾಕು ಕಳ್ಳರಿಗೆ ಹಬ್ಬವೋ ಹಬ್ಬ. ಬೀದಿ ದೀಪ ಇಲ್ಲದೆ ಲಕ್ಷಾಂತರ ಜನ ಪರದಾಡುತ್ತಿದ್ದಾರೆ. ಅಷ್ಟಕ್ಕೂ ಆ ಪ್ರದೇಶ ಯಾವುದು, ಯಾಕೆ ಪರದಾಟ ಅಂತಿರಾ ಈ ಸ್ಟೋರಿ ಓದಿ…….
ಹೌದು… ಹೀಗೆ ಎತ್ತ ನೋಡಿದರೂ ಕತ್ತಲೂ, ಇರುವ ಒಂದು ಹೊರ ಪೊಲೀಸ್ ಠಾಣೆಗೆ ಹಾಕಿರುವ ಬೀಗ, ಭಯದಲ್ಲಿಯೇ ಗುಂಪು ಗುಂಪಾಗಿ ಹೋಗುತ್ತಿರುವ ಮಹಿಳೆಯರು, ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ.
ಯೆಸ್, ಬೆಂಗಳೂರಿಗೆ ಕೇವಲ 25 ಕಿಮೀ ದೂರದಲ್ಲಿ ವಿವಿಧ ಕಂಪನಿಗಳ ದೊಡ್ಡ ಕೈಗಾರಿಕಾ ಪ್ರದೇಶವಿದೆ. ಈ ಕೈಗಾರಿಕಾ ಪ್ರದೇಶವು ಏಷ್ಯಾದ ಎರಡನೇ ಅತೀ ದೊಡ್ಡ ಕೈಗಾರಿಕಾ ಪ್ರದೇಶ ಎಂಬ ಹೆಗ್ಗಳಿಕೆ ಪಡೆದಿದೆ. ಆದರೆ, ಇಲ್ಲಿ ಬೀದಿ ದೀಪಗಳ ಸಮಸ್ಯೆ ಇದೆ. ಹಿಂದೂಪುರದಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಪಕ್ಕದಲ್ಲೇ ಇದ್ದು, ಮಾರಸಂದ್ರ ಬಳಿ ಟೋಲ್ ಸಂಗ್ರಹ ಮಾಡುತ್ತಿದ್ದಾರೆ. ಆದರೆ, ರಸ್ತೆಯಲ್ಲಿ ಮಾತ್ರ ಬೀದಿ ದೀಪವಿಲ್ಲ. ಅಲ್ಲದೆ ಕೈಗಾರಿಕಾ ಪ್ರದೇಶದಲ್ಲಿ ಯಾವುದೇ ಬೀದಿ ದೀಪವಿಲ್ಲ. ಬೀದಿ ದೀಪಗಳೆಲ್ಲಾ ಕಿತ್ತು ಕೆಳಗೆ ಬೀಳುವ ಪರಿಸ್ಥಿತಿಯಲ್ಲಿವೆ. ಇಷ್ಟಾದರೂ ಸಹ ಅಧಿಕಾರಿಗಳು ಮಾತ್ರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಒಟ್ಟಾರೆ ಬೃಹತ್ ಕೈಗಾರಿಕಾ ಪ್ರದೇಶದಲ್ಲಿ ಬೀದಿ ದೀಪಗಳಿಲ್ಲದೇ ಇರುವುದು ವಿಪರ್ಯಾಸ. ಇನ್ನಾದರೂ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಅಧಿಕಾರಿಗಳು ಬೀದಿ ದೀಪಗಳನ್ನು ಹಾಕಿ ಜನರಿಗೆ ಅನುಕೂಲ ಆಗುವಂತೆ ಮಾಡುತ್ತಾರಾ ಕಾದುನೋಡಬೇಕಿದೆ.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…