ಅದು ಏಷ್ಯಾದ ಎರಡನೇ ಅತೀ ದೊಡ್ಡ ಕೈಗಾರಿಕಾ ಪ್ರದೇಶ. ಅಲ್ಲಿ ಪ್ರತಿನಿತ್ಯ ಲಕ್ಷಾಂತರ ಜನ ಕೆಲಸ ಮಾಡುತ್ತಿದ್ದಾರೆ. ಆದರೆ ಇಲ್ಲಿ ಬೀದಿ ದೀಪಗಳು ರಾತ್ರಿ ವೇಳೆ ಬೆಳಗುವುದಿಲ್ಲ. ರಾತ್ರಿ ಆದರೆ ಸಾಕು ಕಳ್ಳರಿಗೆ ಹಬ್ಬವೋ ಹಬ್ಬ. ಬೀದಿ ದೀಪ ಇಲ್ಲದೆ ಲಕ್ಷಾಂತರ ಜನ ಪರದಾಡುತ್ತಿದ್ದಾರೆ. ಅಷ್ಟಕ್ಕೂ ಆ ಪ್ರದೇಶ ಯಾವುದು, ಯಾಕೆ ಪರದಾಟ ಅಂತಿರಾ ಈ ಸ್ಟೋರಿ ಓದಿ…….
ಹೌದು… ಹೀಗೆ ಎತ್ತ ನೋಡಿದರೂ ಕತ್ತಲೂ, ಇರುವ ಒಂದು ಹೊರ ಪೊಲೀಸ್ ಠಾಣೆಗೆ ಹಾಕಿರುವ ಬೀಗ, ಭಯದಲ್ಲಿಯೇ ಗುಂಪು ಗುಂಪಾಗಿ ಹೋಗುತ್ತಿರುವ ಮಹಿಳೆಯರು, ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ.
ಯೆಸ್, ಬೆಂಗಳೂರಿಗೆ ಕೇವಲ 25 ಕಿಮೀ ದೂರದಲ್ಲಿ ವಿವಿಧ ಕಂಪನಿಗಳ ದೊಡ್ಡ ಕೈಗಾರಿಕಾ ಪ್ರದೇಶವಿದೆ. ಈ ಕೈಗಾರಿಕಾ ಪ್ರದೇಶವು ಏಷ್ಯಾದ ಎರಡನೇ ಅತೀ ದೊಡ್ಡ ಕೈಗಾರಿಕಾ ಪ್ರದೇಶ ಎಂಬ ಹೆಗ್ಗಳಿಕೆ ಪಡೆದಿದೆ. ಆದರೆ, ಇಲ್ಲಿ ಬೀದಿ ದೀಪಗಳ ಸಮಸ್ಯೆ ಇದೆ. ಹಿಂದೂಪುರದಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಪಕ್ಕದಲ್ಲೇ ಇದ್ದು, ಮಾರಸಂದ್ರ ಬಳಿ ಟೋಲ್ ಸಂಗ್ರಹ ಮಾಡುತ್ತಿದ್ದಾರೆ. ಆದರೆ, ರಸ್ತೆಯಲ್ಲಿ ಮಾತ್ರ ಬೀದಿ ದೀಪವಿಲ್ಲ. ಅಲ್ಲದೆ ಕೈಗಾರಿಕಾ ಪ್ರದೇಶದಲ್ಲಿ ಯಾವುದೇ ಬೀದಿ ದೀಪವಿಲ್ಲ. ಬೀದಿ ದೀಪಗಳೆಲ್ಲಾ ಕಿತ್ತು ಕೆಳಗೆ ಬೀಳುವ ಪರಿಸ್ಥಿತಿಯಲ್ಲಿವೆ. ಇಷ್ಟಾದರೂ ಸಹ ಅಧಿಕಾರಿಗಳು ಮಾತ್ರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಒಟ್ಟಾರೆ ಬೃಹತ್ ಕೈಗಾರಿಕಾ ಪ್ರದೇಶದಲ್ಲಿ ಬೀದಿ ದೀಪಗಳಿಲ್ಲದೇ ಇರುವುದು ವಿಪರ್ಯಾಸ. ಇನ್ನಾದರೂ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಅಧಿಕಾರಿಗಳು ಬೀದಿ ದೀಪಗಳನ್ನು ಹಾಕಿ ಜನರಿಗೆ ಅನುಕೂಲ ಆಗುವಂತೆ ಮಾಡುತ್ತಾರಾ ಕಾದುನೋಡಬೇಕಿದೆ.
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…