ಏಷ್ಯಾದ ಎರಡನೇ ಅತಿದೊಡ್ಡ ಕೈಗಾರಿಕಾ ಪ್ರದೇಶದಲ್ಲಿ ಬೆಳಗದ ವಿದ್ಯುತ್ ದೀಪಗಳು: ಬೆಳಕಿನ ವ್ಯವಸ್ಥೆ ಇಲ್ಲದೆ ಮಹಿಳಾ ಉದ್ಯೋಗಿಗಳ ಪರದಾಟ: ಕತ್ತಲಲ್ಲಿ ಕಳ್ಳರ ಕಾಟ

ಅದು ಏಷ್ಯಾದ ಎರಡನೇ ಅತೀ ದೊಡ್ಡ ಕೈಗಾರಿಕಾ ಪ್ರದೇಶ. ಅಲ್ಲಿ ಪ್ರತಿನಿತ್ಯ ಲಕ್ಷಾಂತರ ಜನ ಕೆಲಸ ಮಾಡುತ್ತಿದ್ದಾರೆ. ಆದರೆ ಇಲ್ಲಿ ಬೀದಿ ದೀಪಗಳು ರಾತ್ರಿ ವೇಳೆ ಬೆಳಗುವುದಿಲ್ಲ. ರಾತ್ರಿ ಆದರೆ ಸಾಕು ಕಳ್ಳರಿಗೆ ಹಬ್ಬವೋ ಹಬ್ಬ. ಬೀದಿ ದೀಪ ಇಲ್ಲದೆ ಲಕ್ಷಾಂತರ ಜನ ಪರದಾಡುತ್ತಿದ್ದಾರೆ. ಅಷ್ಟಕ್ಕೂ ಆ ಪ್ರದೇಶ ಯಾವುದು, ಯಾಕೆ ಪರದಾಟ ಅಂತಿರಾ ಈ ಸ್ಟೋರಿ ಓದಿ…….

ಹೌದು… ಹೀಗೆ ಎತ್ತ ನೋಡಿದರೂ ಕತ್ತಲೂ, ಇರುವ ಒಂದು ಹೊರ ಪೊಲೀಸ್ ಠಾಣೆಗೆ ಹಾಕಿರುವ ಬೀಗ, ಭಯದಲ್ಲಿಯೇ ಗುಂಪು ಗುಂಪಾಗಿ ಹೋಗುತ್ತಿರುವ ಮಹಿಳೆಯರು, ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ.

ಯೆಸ್, ಬೆಂಗಳೂರಿಗೆ ಕೇವಲ 25 ಕಿಮೀ ದೂರದಲ್ಲಿ ವಿವಿಧ ಕಂಪನಿಗಳ ದೊಡ್ಡ ಕೈಗಾರಿಕಾ ಪ್ರದೇಶವಿದೆ. ಈ ಕೈಗಾರಿಕಾ ಪ್ರದೇಶವು ಏಷ್ಯಾದ ಎರಡನೇ‌ ಅತೀ ದೊಡ್ಡ ಕೈಗಾರಿಕಾ ಪ್ರದೇಶ ಎಂಬ ಹೆಗ್ಗಳಿಕೆ ಪಡೆದಿದೆ. ಆದರೆ, ಇಲ್ಲಿ ಬೀದಿ ದೀಪಗಳ ಸಮಸ್ಯೆ ಇದೆ. ಹಿಂದೂಪುರದಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಪಕ್ಕದಲ್ಲೇ ಇದ್ದು, ಮಾರಸಂದ್ರ ಬಳಿ ಟೋಲ್ ಸಂಗ್ರಹ ಮಾಡುತ್ತಿದ್ದಾರೆ‌. ಆದರೆ, ರಸ್ತೆಯಲ್ಲಿ ಮಾತ್ರ ಬೀದಿ ದೀಪವಿಲ್ಲ.‌ ಅಲ್ಲದೆ ಕೈಗಾರಿಕಾ ಪ್ರದೇಶದಲ್ಲಿ  ಯಾವುದೇ ಬೀದಿ ದೀಪವಿಲ್ಲ. ಬೀದಿ ದೀಪಗಳೆಲ್ಲಾ‌ ಕಿತ್ತು ಕೆಳಗೆ ಬೀಳುವ ಪರಿಸ್ಥಿತಿಯಲ್ಲಿವೆ. ಇಷ್ಟಾದರೂ ಸಹ ಅಧಿಕಾರಿಗಳು ಮಾತ್ರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇನ್ನು, ಈ ಕೈಗಾರಿಕಾ ಪ್ರದೇಶದಲ್ಲಿ ಅತೀ ಹೆಚ್ಚು ಬೇರೆ ರಾಜ್ಯದ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ರಾತ್ರಿ ಆಗುವುದನ್ನೇ ಕಳ್ಳರು ಕಾಯುತ್ತಿರುತ್ತಾರೆ. ಒಂಟಿ ಮಹಿಳೆಯರು ಮೊಬೈಲ್‌ನಲ್ಲಿ ಮಾತನಾಡುವುದನ್ನು ಗಮನಿಸಿ ಮೊಬೈಲ್, ಬೆಲೆ ಬಾಳುವ ವಸ್ತುಗಳನ್ನು ಕದ್ದು ಪರಾರಿ ಆಗುತ್ತಿದ್ದಾರೆ. ಯಾರು ಕಿತ್ತುಕೊಂಡು ಎಲ್ಲಿಗೆ ಹೋದರು ಎಂದು ಗಮನಿಸಲೂ ಕೂಡ ಬೆಳಕಿಲ್ಲ.

ಕೈಗಾರಿಕಾ ಪ್ರದೇಶದಲ್ಲಿ ಪೊಲೀಸ್ ಹೊರ ಠಾಣೆಯಿದೆ. ಆದರೆ, ಗೇಟ್ ಗೆ ಬೀಗ ಹಾಕಿ, ಪೊಲೀಸ್ ಠಾಣೆಯನ್ನು ಸದಾ ಕಾಲ ಮುಚ್ಚೇ ಇರುತ್ತಾರೆ. ಹಾಗಾಗಿ ಕಳ್ಳ ಕಾಕರಿಗೆ ಪೊಲೀಸರು ಎಂದರೆ ಭಯವೇ ಇಲ್ಲದಂತೆ ಅಗಿದೆ. ಇನ್ನು ಕೈಗಾರಿಕಾ ಪ್ರದೇಶದಲ್ಲಿ ಸಿಸಿ ಟಿವಿಗಳ ಅವಶ್ಯಕತೆ ಇದ್ದು, ಬೀದಿ ದೀಪಗಳ ಜೊತೆಯಲ್ಲಿ ಸಿಸಿ ಟಿವಿ ಹಾಕಿದರೆ ಅನುಕೂಲ ಆಗುತ್ತದೆ. ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಆಗಿದೆ, ಆದರೆ ಜನರಿಗೆ ಯಾವುದೇ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಮಾತ್ರ ವಿಫಲವಾಗಿದೆ ಎಂಬುದು ಜನಸಾಮಾನ್ಯರ ಅಭಿಪ್ರಾಯವಾಗಿದೆ.

ಒಟ್ಟಾರೆ ಬೃಹತ್ ಕೈಗಾರಿಕಾ ಪ್ರದೇಶದಲ್ಲಿ ಬೀದಿ ದೀಪಗಳಿಲ್ಲದೇ ಇರುವುದು ವಿಪರ್ಯಾಸ. ಇನ್ನಾದರೂ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಅಧಿಕಾರಿಗಳು ಬೀದಿ ದೀಪಗಳನ್ನು ಹಾಕಿ ಜನರಿಗೆ ಅನುಕೂಲ ಆಗುವಂತೆ ಮಾಡುತ್ತಾರಾ ಕಾದುನೋಡಬೇಕಿದೆ.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

15 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

15 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

18 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

19 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

23 hours ago