ಅದು ಏಷ್ಯಾದ ಎರಡನೇ ಅತೀ ದೊಡ್ಡ ಕೈಗಾರಿಕಾ ಪ್ರದೇಶ. ಅಲ್ಲಿ ಪ್ರತಿನಿತ್ಯ ಲಕ್ಷಾಂತರ ಜನ ಕೆಲಸ ಮಾಡುತ್ತಿದ್ದಾರೆ. ಆದರೆ ಇಲ್ಲಿ ಬೀದಿ ದೀಪಗಳು ರಾತ್ರಿ ವೇಳೆ ಬೆಳಗುವುದಿಲ್ಲ. ರಾತ್ರಿ ಆದರೆ ಸಾಕು ಕಳ್ಳರಿಗೆ ಹಬ್ಬವೋ ಹಬ್ಬ. ಬೀದಿ ದೀಪ ಇಲ್ಲದೆ ಲಕ್ಷಾಂತರ ಜನ ಪರದಾಡುತ್ತಿದ್ದಾರೆ. ಅಷ್ಟಕ್ಕೂ ಆ ಪ್ರದೇಶ ಯಾವುದು, ಯಾಕೆ ಪರದಾಟ ಅಂತಿರಾ ಈ ಸ್ಟೋರಿ ಓದಿ…….
ಹೌದು… ಹೀಗೆ ಎತ್ತ ನೋಡಿದರೂ ಕತ್ತಲೂ, ಇರುವ ಒಂದು ಹೊರ ಪೊಲೀಸ್ ಠಾಣೆಗೆ ಹಾಕಿರುವ ಬೀಗ, ಭಯದಲ್ಲಿಯೇ ಗುಂಪು ಗುಂಪಾಗಿ ಹೋಗುತ್ತಿರುವ ಮಹಿಳೆಯರು, ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ.
ಯೆಸ್, ಬೆಂಗಳೂರಿಗೆ ಕೇವಲ 25 ಕಿಮೀ ದೂರದಲ್ಲಿ ವಿವಿಧ ಕಂಪನಿಗಳ ದೊಡ್ಡ ಕೈಗಾರಿಕಾ ಪ್ರದೇಶವಿದೆ. ಈ ಕೈಗಾರಿಕಾ ಪ್ರದೇಶವು ಏಷ್ಯಾದ ಎರಡನೇ ಅತೀ ದೊಡ್ಡ ಕೈಗಾರಿಕಾ ಪ್ರದೇಶ ಎಂಬ ಹೆಗ್ಗಳಿಕೆ ಪಡೆದಿದೆ. ಆದರೆ, ಇಲ್ಲಿ ಬೀದಿ ದೀಪಗಳ ಸಮಸ್ಯೆ ಇದೆ. ಹಿಂದೂಪುರದಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಪಕ್ಕದಲ್ಲೇ ಇದ್ದು, ಮಾರಸಂದ್ರ ಬಳಿ ಟೋಲ್ ಸಂಗ್ರಹ ಮಾಡುತ್ತಿದ್ದಾರೆ. ಆದರೆ, ರಸ್ತೆಯಲ್ಲಿ ಮಾತ್ರ ಬೀದಿ ದೀಪವಿಲ್ಲ. ಅಲ್ಲದೆ ಕೈಗಾರಿಕಾ ಪ್ರದೇಶದಲ್ಲಿ ಯಾವುದೇ ಬೀದಿ ದೀಪವಿಲ್ಲ. ಬೀದಿ ದೀಪಗಳೆಲ್ಲಾ ಕಿತ್ತು ಕೆಳಗೆ ಬೀಳುವ ಪರಿಸ್ಥಿತಿಯಲ್ಲಿವೆ. ಇಷ್ಟಾದರೂ ಸಹ ಅಧಿಕಾರಿಗಳು ಮಾತ್ರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಒಟ್ಟಾರೆ ಬೃಹತ್ ಕೈಗಾರಿಕಾ ಪ್ರದೇಶದಲ್ಲಿ ಬೀದಿ ದೀಪಗಳಿಲ್ಲದೇ ಇರುವುದು ವಿಪರ್ಯಾಸ. ಇನ್ನಾದರೂ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಅಧಿಕಾರಿಗಳು ಬೀದಿ ದೀಪಗಳನ್ನು ಹಾಕಿ ಜನರಿಗೆ ಅನುಕೂಲ ಆಗುವಂತೆ ಮಾಡುತ್ತಾರಾ ಕಾದುನೋಡಬೇಕಿದೆ.
ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…