ಅದು ಏಷ್ಯಾದ ಎರಡನೇ ಅತೀ ದೊಡ್ಡ ಕೈಗಾರಿಕಾ ಪ್ರದೇಶ. ಅಲ್ಲಿ ಪ್ರತಿನಿತ್ಯ ಲಕ್ಷಾಂತರ ಜನ ಕೆಲಸ ಮಾಡುತ್ತಿದ್ದಾರೆ. ಆದರೆ ಇಲ್ಲಿ ಬೀದಿ ದೀಪಗಳು ರಾತ್ರಿ ವೇಳೆ ಬೆಳಗುವುದಿಲ್ಲ. ರಾತ್ರಿ ಆದರೆ ಸಾಕು ಕಳ್ಳರಿಗೆ ಹಬ್ಬವೋ ಹಬ್ಬ. ಬೀದಿ ದೀಪ ಇಲ್ಲದೆ ಲಕ್ಷಾಂತರ ಜನ ಪರದಾಡುತ್ತಿದ್ದಾರೆ. ಅಷ್ಟಕ್ಕೂ ಆ ಪ್ರದೇಶ ಯಾವುದು, ಯಾಕೆ ಪರದಾಟ ಅಂತಿರಾ ಈ ಸ್ಟೋರಿ ಓದಿ…….
ಹೌದು… ಹೀಗೆ ಎತ್ತ ನೋಡಿದರೂ ಕತ್ತಲೂ, ಇರುವ ಒಂದು ಹೊರ ಪೊಲೀಸ್ ಠಾಣೆಗೆ ಹಾಕಿರುವ ಬೀಗ, ಭಯದಲ್ಲಿಯೇ ಗುಂಪು ಗುಂಪಾಗಿ ಹೋಗುತ್ತಿರುವ ಮಹಿಳೆಯರು, ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ.
ಯೆಸ್, ಬೆಂಗಳೂರಿಗೆ ಕೇವಲ 25 ಕಿಮೀ ದೂರದಲ್ಲಿ ವಿವಿಧ ಕಂಪನಿಗಳ ದೊಡ್ಡ ಕೈಗಾರಿಕಾ ಪ್ರದೇಶವಿದೆ. ಈ ಕೈಗಾರಿಕಾ ಪ್ರದೇಶವು ಏಷ್ಯಾದ ಎರಡನೇ ಅತೀ ದೊಡ್ಡ ಕೈಗಾರಿಕಾ ಪ್ರದೇಶ ಎಂಬ ಹೆಗ್ಗಳಿಕೆ ಪಡೆದಿದೆ. ಆದರೆ, ಇಲ್ಲಿ ಬೀದಿ ದೀಪಗಳ ಸಮಸ್ಯೆ ಇದೆ. ಹಿಂದೂಪುರದಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಪಕ್ಕದಲ್ಲೇ ಇದ್ದು, ಮಾರಸಂದ್ರ ಬಳಿ ಟೋಲ್ ಸಂಗ್ರಹ ಮಾಡುತ್ತಿದ್ದಾರೆ. ಆದರೆ, ರಸ್ತೆಯಲ್ಲಿ ಮಾತ್ರ ಬೀದಿ ದೀಪವಿಲ್ಲ. ಅಲ್ಲದೆ ಕೈಗಾರಿಕಾ ಪ್ರದೇಶದಲ್ಲಿ ಯಾವುದೇ ಬೀದಿ ದೀಪವಿಲ್ಲ. ಬೀದಿ ದೀಪಗಳೆಲ್ಲಾ ಕಿತ್ತು ಕೆಳಗೆ ಬೀಳುವ ಪರಿಸ್ಥಿತಿಯಲ್ಲಿವೆ. ಇಷ್ಟಾದರೂ ಸಹ ಅಧಿಕಾರಿಗಳು ಮಾತ್ರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಒಟ್ಟಾರೆ ಬೃಹತ್ ಕೈಗಾರಿಕಾ ಪ್ರದೇಶದಲ್ಲಿ ಬೀದಿ ದೀಪಗಳಿಲ್ಲದೇ ಇರುವುದು ವಿಪರ್ಯಾಸ. ಇನ್ನಾದರೂ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಅಧಿಕಾರಿಗಳು ಬೀದಿ ದೀಪಗಳನ್ನು ಹಾಕಿ ಜನರಿಗೆ ಅನುಕೂಲ ಆಗುವಂತೆ ಮಾಡುತ್ತಾರಾ ಕಾದುನೋಡಬೇಕಿದೆ.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…