ಏಷ್ಯಾ ಕಪ್: ನೇಪಾಳ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಜಯ

ನಾಯಕ ರೋಹಿತ್ ಶರ್ಮಾ ಹಾಗೂ ಯುವ ಆಟಗಾರ ಶುಬ್ಮಾನ್ ಗಿಲ್ ರ ಅಮೋಘ ಬ್ಯಾಟಿಂಗ್ ನೆರವಿನಿಂದ ಸೋಮವಾರ ನಡೆದ ನೇಪಾಳ ವಿರುದ್ಧದ ಪಂದ್ಯವನ್ನು ಭಾರತ ತಂಡ 10 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.

ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ ತಂಡಕ್ಕೆ ನೇಪಾಳದ ಆರಂಭಿಕ ಆಟಗಾರರು ಮೊದಲ ಪವರ್ ಪ್ಲೇ ನಲ್ಲಿ ಉತ್ತಮ ಆಟ ತೋರಿಸಿದರು. ನೇಪಾಳದ ಆರಂಭಿಕ ಬ್ಯಾಟರ್ ಗಳದ ಅಶಿಫ್ ಶೇಕ್ (58) ಹಾಗೂ ಕುಶಾಲ್ ಬರ್ತೆಲ್ (38) ದಿಟ್ಟ ಹೋರಾಟದ ನೆರವಿನಿಂದ ಮೊದಲ ವಿಕೆಟ್ ಪತನಕ್ಕೆ 65 ರನ್ ಗಳಿಸಿದರು.

ಶಾರ್ಧೂಲ್ ಠಾಕೂರ್ ಇವರ ಆಟಕ್ಕೆ ಬ್ರೇಕ್ ನೀಡಿದ ನಂತರದಲ್ಲಿ ಬಂದಂತಹ ಬ್ಯಾಟರ್ ಗಳನ್ನು ಜಡೇಜಾ ತಮ್ಮ ಮಾರಕ ಸ್ಪಿನ್ ಬೌಲಿಂಗ್ ನಿಂದ ಅತಿ ಬೇಗ ಪೆವಿಲಿಯನ್ ಪೆರೇಡ್ ನಡೆಸಿದರು.

ಸೋಂಪಲ್ ಕಮಿ (48) ಬಿಟ್ಟರೆ ಉಳಿದ ಯಾವುದೇ ಬ್ಯಾಟರ್ ನಿಂದಾ ಉತ್ತಮ ರನ್ ಕಂಡುಬರಲಿಲ್ಲ. ಭಾರತದ ಪರ ರವೀಂದ್ರ ಜಡೇಜಾ ಹಾಗೂ ಸಿರಾಜ್ ತಲಾ 3 ವಿಕೆಟ್ ಹಾಗೂ ಶಮಿ, ಹಾರ್ದಿಕ, ಶಾರ್ಧುಲ್ ತಲಾ ಒಂದು ವಿಕೆಟ್ ಪಡೆದರು.

ಪಂದ್ಯದ ನಡುವೆ ಉಂಟಾದ ಮಳೆಯಿಂದ ಪಂದ್ಯವನ್ನು ಸ್ವಲ್ಪ ಕಾಲ ಸ್ಥಗಿತಗೊಳಿಸಲಾಯಿತು. ಭಾರತಕ್ಕೆ ಡಿ ಎಲ್ ಎಸ್ ನಿಯಮಾನುಸಾರ ಗೆಲ್ಲಲು 147 ರನ್ ಗಳ ಸುಲಭ ಗುರಿಯನ್ನು ನೀಡಲಾಯಿತು.

ಭಾರತದ ಸ್ಫೋಟಕ ಆರಂಭಿಕ ರೋಹಿತ್ ಶರ್ಮಾ (74*) ಹಾಗೂ ಯುವ ಆರಂಭಿಕ ಶುಬ್ಮನ್ ಗಿಲ್ (67*) ಇಬ್ಬರು ನೇಪಾಳ ತಂಡದ ಬೌಲರ್ ಗಳ ಮೇಲೆ ರನ್ ನ ಮಳೆಯೇ ಸುರಿಸಿದರು. ಯಾವುದೇ ವಿಕೆಟ್ ನಷ್ಟವಿಲ್ಲದೇ ಭಾರತ ತಂಡ ಸುಲಭ ಜಯ ಪಡೆಯುವ ಮೂಲಕ ಮುಂದಿನ ಹಂತಕ್ಕೆ ಅರ್ಹತೆ ಪಡೆಯಿತು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

6 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

13 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

16 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

17 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago