ಏಷ್ಯಾ ಕಪ್: ನೇಪಾಳ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಜಯ

ನಾಯಕ ರೋಹಿತ್ ಶರ್ಮಾ ಹಾಗೂ ಯುವ ಆಟಗಾರ ಶುಬ್ಮಾನ್ ಗಿಲ್ ರ ಅಮೋಘ ಬ್ಯಾಟಿಂಗ್ ನೆರವಿನಿಂದ ಸೋಮವಾರ ನಡೆದ ನೇಪಾಳ ವಿರುದ್ಧದ ಪಂದ್ಯವನ್ನು ಭಾರತ ತಂಡ 10 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.

ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ ತಂಡಕ್ಕೆ ನೇಪಾಳದ ಆರಂಭಿಕ ಆಟಗಾರರು ಮೊದಲ ಪವರ್ ಪ್ಲೇ ನಲ್ಲಿ ಉತ್ತಮ ಆಟ ತೋರಿಸಿದರು. ನೇಪಾಳದ ಆರಂಭಿಕ ಬ್ಯಾಟರ್ ಗಳದ ಅಶಿಫ್ ಶೇಕ್ (58) ಹಾಗೂ ಕುಶಾಲ್ ಬರ್ತೆಲ್ (38) ದಿಟ್ಟ ಹೋರಾಟದ ನೆರವಿನಿಂದ ಮೊದಲ ವಿಕೆಟ್ ಪತನಕ್ಕೆ 65 ರನ್ ಗಳಿಸಿದರು.

ಶಾರ್ಧೂಲ್ ಠಾಕೂರ್ ಇವರ ಆಟಕ್ಕೆ ಬ್ರೇಕ್ ನೀಡಿದ ನಂತರದಲ್ಲಿ ಬಂದಂತಹ ಬ್ಯಾಟರ್ ಗಳನ್ನು ಜಡೇಜಾ ತಮ್ಮ ಮಾರಕ ಸ್ಪಿನ್ ಬೌಲಿಂಗ್ ನಿಂದ ಅತಿ ಬೇಗ ಪೆವಿಲಿಯನ್ ಪೆರೇಡ್ ನಡೆಸಿದರು.

ಸೋಂಪಲ್ ಕಮಿ (48) ಬಿಟ್ಟರೆ ಉಳಿದ ಯಾವುದೇ ಬ್ಯಾಟರ್ ನಿಂದಾ ಉತ್ತಮ ರನ್ ಕಂಡುಬರಲಿಲ್ಲ. ಭಾರತದ ಪರ ರವೀಂದ್ರ ಜಡೇಜಾ ಹಾಗೂ ಸಿರಾಜ್ ತಲಾ 3 ವಿಕೆಟ್ ಹಾಗೂ ಶಮಿ, ಹಾರ್ದಿಕ, ಶಾರ್ಧುಲ್ ತಲಾ ಒಂದು ವಿಕೆಟ್ ಪಡೆದರು.

ಪಂದ್ಯದ ನಡುವೆ ಉಂಟಾದ ಮಳೆಯಿಂದ ಪಂದ್ಯವನ್ನು ಸ್ವಲ್ಪ ಕಾಲ ಸ್ಥಗಿತಗೊಳಿಸಲಾಯಿತು. ಭಾರತಕ್ಕೆ ಡಿ ಎಲ್ ಎಸ್ ನಿಯಮಾನುಸಾರ ಗೆಲ್ಲಲು 147 ರನ್ ಗಳ ಸುಲಭ ಗುರಿಯನ್ನು ನೀಡಲಾಯಿತು.

ಭಾರತದ ಸ್ಫೋಟಕ ಆರಂಭಿಕ ರೋಹಿತ್ ಶರ್ಮಾ (74*) ಹಾಗೂ ಯುವ ಆರಂಭಿಕ ಶುಬ್ಮನ್ ಗಿಲ್ (67*) ಇಬ್ಬರು ನೇಪಾಳ ತಂಡದ ಬೌಲರ್ ಗಳ ಮೇಲೆ ರನ್ ನ ಮಳೆಯೇ ಸುರಿಸಿದರು. ಯಾವುದೇ ವಿಕೆಟ್ ನಷ್ಟವಿಲ್ಲದೇ ಭಾರತ ತಂಡ ಸುಲಭ ಜಯ ಪಡೆಯುವ ಮೂಲಕ ಮುಂದಿನ ಹಂತಕ್ಕೆ ಅರ್ಹತೆ ಪಡೆಯಿತು.

Ramesh Babu

Journalist

Recent Posts

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

6 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

7 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

12 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

24 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

1 day ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

1 day ago