ಏಷ್ಯಾ ಕಪ್: ನೇಪಾಳ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಜಯ

ನಾಯಕ ರೋಹಿತ್ ಶರ್ಮಾ ಹಾಗೂ ಯುವ ಆಟಗಾರ ಶುಬ್ಮಾನ್ ಗಿಲ್ ರ ಅಮೋಘ ಬ್ಯಾಟಿಂಗ್ ನೆರವಿನಿಂದ ಸೋಮವಾರ ನಡೆದ ನೇಪಾಳ ವಿರುದ್ಧದ ಪಂದ್ಯವನ್ನು ಭಾರತ ತಂಡ 10 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.

ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ ತಂಡಕ್ಕೆ ನೇಪಾಳದ ಆರಂಭಿಕ ಆಟಗಾರರು ಮೊದಲ ಪವರ್ ಪ್ಲೇ ನಲ್ಲಿ ಉತ್ತಮ ಆಟ ತೋರಿಸಿದರು. ನೇಪಾಳದ ಆರಂಭಿಕ ಬ್ಯಾಟರ್ ಗಳದ ಅಶಿಫ್ ಶೇಕ್ (58) ಹಾಗೂ ಕುಶಾಲ್ ಬರ್ತೆಲ್ (38) ದಿಟ್ಟ ಹೋರಾಟದ ನೆರವಿನಿಂದ ಮೊದಲ ವಿಕೆಟ್ ಪತನಕ್ಕೆ 65 ರನ್ ಗಳಿಸಿದರು.

ಶಾರ್ಧೂಲ್ ಠಾಕೂರ್ ಇವರ ಆಟಕ್ಕೆ ಬ್ರೇಕ್ ನೀಡಿದ ನಂತರದಲ್ಲಿ ಬಂದಂತಹ ಬ್ಯಾಟರ್ ಗಳನ್ನು ಜಡೇಜಾ ತಮ್ಮ ಮಾರಕ ಸ್ಪಿನ್ ಬೌಲಿಂಗ್ ನಿಂದ ಅತಿ ಬೇಗ ಪೆವಿಲಿಯನ್ ಪೆರೇಡ್ ನಡೆಸಿದರು.

ಸೋಂಪಲ್ ಕಮಿ (48) ಬಿಟ್ಟರೆ ಉಳಿದ ಯಾವುದೇ ಬ್ಯಾಟರ್ ನಿಂದಾ ಉತ್ತಮ ರನ್ ಕಂಡುಬರಲಿಲ್ಲ. ಭಾರತದ ಪರ ರವೀಂದ್ರ ಜಡೇಜಾ ಹಾಗೂ ಸಿರಾಜ್ ತಲಾ 3 ವಿಕೆಟ್ ಹಾಗೂ ಶಮಿ, ಹಾರ್ದಿಕ, ಶಾರ್ಧುಲ್ ತಲಾ ಒಂದು ವಿಕೆಟ್ ಪಡೆದರು.

ಪಂದ್ಯದ ನಡುವೆ ಉಂಟಾದ ಮಳೆಯಿಂದ ಪಂದ್ಯವನ್ನು ಸ್ವಲ್ಪ ಕಾಲ ಸ್ಥಗಿತಗೊಳಿಸಲಾಯಿತು. ಭಾರತಕ್ಕೆ ಡಿ ಎಲ್ ಎಸ್ ನಿಯಮಾನುಸಾರ ಗೆಲ್ಲಲು 147 ರನ್ ಗಳ ಸುಲಭ ಗುರಿಯನ್ನು ನೀಡಲಾಯಿತು.

ಭಾರತದ ಸ್ಫೋಟಕ ಆರಂಭಿಕ ರೋಹಿತ್ ಶರ್ಮಾ (74*) ಹಾಗೂ ಯುವ ಆರಂಭಿಕ ಶುಬ್ಮನ್ ಗಿಲ್ (67*) ಇಬ್ಬರು ನೇಪಾಳ ತಂಡದ ಬೌಲರ್ ಗಳ ಮೇಲೆ ರನ್ ನ ಮಳೆಯೇ ಸುರಿಸಿದರು. ಯಾವುದೇ ವಿಕೆಟ್ ನಷ್ಟವಿಲ್ಲದೇ ಭಾರತ ತಂಡ ಸುಲಭ ಜಯ ಪಡೆಯುವ ಮೂಲಕ ಮುಂದಿನ ಹಂತಕ್ಕೆ ಅರ್ಹತೆ ಪಡೆಯಿತು.

Ramesh Babu

Journalist

Recent Posts

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

3 hours ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

3 hours ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

6 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

9 hours ago

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

11 hours ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…

15 hours ago