ಏಷ್ಯಾ ಕಪ್: ನೇಪಾಳ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಜಯ

ನಾಯಕ ರೋಹಿತ್ ಶರ್ಮಾ ಹಾಗೂ ಯುವ ಆಟಗಾರ ಶುಬ್ಮಾನ್ ಗಿಲ್ ರ ಅಮೋಘ ಬ್ಯಾಟಿಂಗ್ ನೆರವಿನಿಂದ ಸೋಮವಾರ ನಡೆದ ನೇಪಾಳ ವಿರುದ್ಧದ ಪಂದ್ಯವನ್ನು ಭಾರತ ತಂಡ 10 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.

ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ ತಂಡಕ್ಕೆ ನೇಪಾಳದ ಆರಂಭಿಕ ಆಟಗಾರರು ಮೊದಲ ಪವರ್ ಪ್ಲೇ ನಲ್ಲಿ ಉತ್ತಮ ಆಟ ತೋರಿಸಿದರು. ನೇಪಾಳದ ಆರಂಭಿಕ ಬ್ಯಾಟರ್ ಗಳದ ಅಶಿಫ್ ಶೇಕ್ (58) ಹಾಗೂ ಕುಶಾಲ್ ಬರ್ತೆಲ್ (38) ದಿಟ್ಟ ಹೋರಾಟದ ನೆರವಿನಿಂದ ಮೊದಲ ವಿಕೆಟ್ ಪತನಕ್ಕೆ 65 ರನ್ ಗಳಿಸಿದರು.

ಶಾರ್ಧೂಲ್ ಠಾಕೂರ್ ಇವರ ಆಟಕ್ಕೆ ಬ್ರೇಕ್ ನೀಡಿದ ನಂತರದಲ್ಲಿ ಬಂದಂತಹ ಬ್ಯಾಟರ್ ಗಳನ್ನು ಜಡೇಜಾ ತಮ್ಮ ಮಾರಕ ಸ್ಪಿನ್ ಬೌಲಿಂಗ್ ನಿಂದ ಅತಿ ಬೇಗ ಪೆವಿಲಿಯನ್ ಪೆರೇಡ್ ನಡೆಸಿದರು.

ಸೋಂಪಲ್ ಕಮಿ (48) ಬಿಟ್ಟರೆ ಉಳಿದ ಯಾವುದೇ ಬ್ಯಾಟರ್ ನಿಂದಾ ಉತ್ತಮ ರನ್ ಕಂಡುಬರಲಿಲ್ಲ. ಭಾರತದ ಪರ ರವೀಂದ್ರ ಜಡೇಜಾ ಹಾಗೂ ಸಿರಾಜ್ ತಲಾ 3 ವಿಕೆಟ್ ಹಾಗೂ ಶಮಿ, ಹಾರ್ದಿಕ, ಶಾರ್ಧುಲ್ ತಲಾ ಒಂದು ವಿಕೆಟ್ ಪಡೆದರು.

ಪಂದ್ಯದ ನಡುವೆ ಉಂಟಾದ ಮಳೆಯಿಂದ ಪಂದ್ಯವನ್ನು ಸ್ವಲ್ಪ ಕಾಲ ಸ್ಥಗಿತಗೊಳಿಸಲಾಯಿತು. ಭಾರತಕ್ಕೆ ಡಿ ಎಲ್ ಎಸ್ ನಿಯಮಾನುಸಾರ ಗೆಲ್ಲಲು 147 ರನ್ ಗಳ ಸುಲಭ ಗುರಿಯನ್ನು ನೀಡಲಾಯಿತು.

ಭಾರತದ ಸ್ಫೋಟಕ ಆರಂಭಿಕ ರೋಹಿತ್ ಶರ್ಮಾ (74*) ಹಾಗೂ ಯುವ ಆರಂಭಿಕ ಶುಬ್ಮನ್ ಗಿಲ್ (67*) ಇಬ್ಬರು ನೇಪಾಳ ತಂಡದ ಬೌಲರ್ ಗಳ ಮೇಲೆ ರನ್ ನ ಮಳೆಯೇ ಸುರಿಸಿದರು. ಯಾವುದೇ ವಿಕೆಟ್ ನಷ್ಟವಿಲ್ಲದೇ ಭಾರತ ತಂಡ ಸುಲಭ ಜಯ ಪಡೆಯುವ ಮೂಲಕ ಮುಂದಿನ ಹಂತಕ್ಕೆ ಅರ್ಹತೆ ಪಡೆಯಿತು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

15 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

15 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

18 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago