ಏಷ್ಯಾ ಕಪ್: ನೇಪಾಳ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಜಯ

ನಾಯಕ ರೋಹಿತ್ ಶರ್ಮಾ ಹಾಗೂ ಯುವ ಆಟಗಾರ ಶುಬ್ಮಾನ್ ಗಿಲ್ ರ ಅಮೋಘ ಬ್ಯಾಟಿಂಗ್ ನೆರವಿನಿಂದ ಸೋಮವಾರ ನಡೆದ ನೇಪಾಳ ವಿರುದ್ಧದ ಪಂದ್ಯವನ್ನು ಭಾರತ ತಂಡ 10 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.

ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ ತಂಡಕ್ಕೆ ನೇಪಾಳದ ಆರಂಭಿಕ ಆಟಗಾರರು ಮೊದಲ ಪವರ್ ಪ್ಲೇ ನಲ್ಲಿ ಉತ್ತಮ ಆಟ ತೋರಿಸಿದರು. ನೇಪಾಳದ ಆರಂಭಿಕ ಬ್ಯಾಟರ್ ಗಳದ ಅಶಿಫ್ ಶೇಕ್ (58) ಹಾಗೂ ಕುಶಾಲ್ ಬರ್ತೆಲ್ (38) ದಿಟ್ಟ ಹೋರಾಟದ ನೆರವಿನಿಂದ ಮೊದಲ ವಿಕೆಟ್ ಪತನಕ್ಕೆ 65 ರನ್ ಗಳಿಸಿದರು.

ಶಾರ್ಧೂಲ್ ಠಾಕೂರ್ ಇವರ ಆಟಕ್ಕೆ ಬ್ರೇಕ್ ನೀಡಿದ ನಂತರದಲ್ಲಿ ಬಂದಂತಹ ಬ್ಯಾಟರ್ ಗಳನ್ನು ಜಡೇಜಾ ತಮ್ಮ ಮಾರಕ ಸ್ಪಿನ್ ಬೌಲಿಂಗ್ ನಿಂದ ಅತಿ ಬೇಗ ಪೆವಿಲಿಯನ್ ಪೆರೇಡ್ ನಡೆಸಿದರು.

ಸೋಂಪಲ್ ಕಮಿ (48) ಬಿಟ್ಟರೆ ಉಳಿದ ಯಾವುದೇ ಬ್ಯಾಟರ್ ನಿಂದಾ ಉತ್ತಮ ರನ್ ಕಂಡುಬರಲಿಲ್ಲ. ಭಾರತದ ಪರ ರವೀಂದ್ರ ಜಡೇಜಾ ಹಾಗೂ ಸಿರಾಜ್ ತಲಾ 3 ವಿಕೆಟ್ ಹಾಗೂ ಶಮಿ, ಹಾರ್ದಿಕ, ಶಾರ್ಧುಲ್ ತಲಾ ಒಂದು ವಿಕೆಟ್ ಪಡೆದರು.

ಪಂದ್ಯದ ನಡುವೆ ಉಂಟಾದ ಮಳೆಯಿಂದ ಪಂದ್ಯವನ್ನು ಸ್ವಲ್ಪ ಕಾಲ ಸ್ಥಗಿತಗೊಳಿಸಲಾಯಿತು. ಭಾರತಕ್ಕೆ ಡಿ ಎಲ್ ಎಸ್ ನಿಯಮಾನುಸಾರ ಗೆಲ್ಲಲು 147 ರನ್ ಗಳ ಸುಲಭ ಗುರಿಯನ್ನು ನೀಡಲಾಯಿತು.

ಭಾರತದ ಸ್ಫೋಟಕ ಆರಂಭಿಕ ರೋಹಿತ್ ಶರ್ಮಾ (74*) ಹಾಗೂ ಯುವ ಆರಂಭಿಕ ಶುಬ್ಮನ್ ಗಿಲ್ (67*) ಇಬ್ಬರು ನೇಪಾಳ ತಂಡದ ಬೌಲರ್ ಗಳ ಮೇಲೆ ರನ್ ನ ಮಳೆಯೇ ಸುರಿಸಿದರು. ಯಾವುದೇ ವಿಕೆಟ್ ನಷ್ಟವಿಲ್ಲದೇ ಭಾರತ ತಂಡ ಸುಲಭ ಜಯ ಪಡೆಯುವ ಮೂಲಕ ಮುಂದಿನ ಹಂತಕ್ಕೆ ಅರ್ಹತೆ ಪಡೆಯಿತು.

Ramesh Babu

Journalist

Recent Posts

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

3 hours ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

3 hours ago

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

16 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

17 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

19 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

2 days ago