ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ವಿವಿಧ ವಸತಿ ಶಾಲೆಗಳಲ್ಲಿ 2026-27ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ನಡೆಸಲಾಗುವ ರಾಜ್ಯಮಟ್ಟದ ಸಾಮಾನ್ಯ ಪ್ರವೇಶ ಪರೀಕ್ಷೆಯು ಏಪ್ರಿಲ್ 12 ರಂದು ನಡೆಯಲಿದೆ.
ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಹಾಗೂ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ (CBSE) ಪ್ರವೇಶ ಪಡೆಯಲು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಬೇಕಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಭ್ಯರ್ಥಿಗಳಿಗೆ ಮೌಲಾನಾ ಆಜಾದ್ ಮಾದರಿ ಶಾಲೆ, ಉರ್ದು ಶಾಲಾ ಆವರಣ ಮತ್ತು ಸರ್ಕಾರಿ ಹೆಣ್ಣು ಮಕ್ಕಳ ಪ್ರೌಢಶಾಲೆ (ಜೂನಿಯರ್ ಕಾಲೇಜು ಹತ್ತಿರ), ವಿಜಯಪುರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಈ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ.
ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಕುಂದುಕೊರತೆಗಳಿದ್ದಲ್ಲಿ ಅಥವಾ ಹೆಚ್ಚಿನ ಮಾಹಿತಿ ಅಗತ್ಯವಿದ್ದಲ್ಲಿ ಪೋಷಕರು ಮತ್ತು ವಿದ್ಯಾರ್ಥಿಗಳು https://dom.karnataka.gov.in/en ವೆಬ್ಸೈಟ್ ಹಾಗೂ ಹತ್ತಿರದ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿ, MDRS/Dr APJKRS ಶಾಲೆಗಳು ಅಥವಾ ತಾಲ್ಲೂಕು ಮಾಹಿತಿ ಕೇಂದ್ರಗಳು. ವಾಟ್ಸಾಪ್ ಸಂಖ್ಯೆ: 8277799990, ದೂರವಾಣಿ ಸಂಖ್ಯೆಗಳು (ಬೆಳಿಗ್ಗೆ 9.30 ರಿಂದ ಸಂಜೆ 6.00 ರವರೆಗೆ): 9742298287, 9731017483, 9066296080, 8861926851, 9845622337, 9986874875, 9916578413, 8904491033, 7676905779, 8310103980, 8660971267, 9632249214 ಗೆ ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…