ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ 5 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 2021 ವಿದ್ಯಾರ್ಥಿಗಳು ಏಪ್ರಿಲ್ 16 ಮತ್ತು 17 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ( ಸಿಇಟಿ) ಬರೆಯಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ಎನ್.ಮೋಹನ್ ಕುಮಾರ್ ತಿಳಿಸಿದ್ದಾರೆ.
ಅವರು ಸಿಇಟಿ ಪರೀಕ್ಷೆಯ ಪೂರ್ವ ಸಿದ್ಧತೆ ಕುರಿತು ಮಾಹಿತಿ ನೀಡಿ, ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕೊಂಗಾಡಿಯಪ್ಪ ಪದವಿಪೂರ್ವ ಕಾಲೇಜಿನಲ್ಲಿ 688, ಮಾದಗೊಂಡನಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 432, ಹೊಸ ಬಸ್ ನಿಲ್ದಾಣ ಮುಂಭಾಗದ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ 360, ವಿದ್ಯಾನಿಧಿ ಸ್ವತಂತ್ರ್ಯ ಪದವಿಪೂರ್ವ ಕಾಲೇಜಿನಲ್ಲಿ 270, ಶ್ರೀ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ 271 ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆ ನಡೆಯುತ್ತದೆ ಎಂದರು.
ಏ.16 ರಂದು ಬುಧವಾರ ಬೆಳಗ್ಗೆ 10.30 ರಿಂದ 11.50ರ ವರೆಗೆ ಭೌತವಿಜ್ಞಾನ, ಮಧ್ಯಾಹ್ನ 2.30 ರಿಂದ 3.50ರವರೆಗೆ ರಸಾಯನವಿಜ್ಞಾನ
ಏ.17 ರಂದು ಗುರುವಾರ ಬೆಳಿಗ್ಗೆ 10.30 ರಿಂದ 11.50ರ ವರೆಗೆ ಗಣಿತ, ಮಧ್ಯಾಹ್ನ 2.30 ರಿಂದ 3.50ರ ವರೆಗೆ ಜೀವವಿಜ್ಞಾನ ಪರೀಕ್ಷೆಗಳು ದೊಡ್ಡಬಳ್ಳಾಪುರ ನಗರದ 5 ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಯುತ್ತದೆ ಎಂದರು.
ವೆಬ್ ಕಾಸ್ಟಿಂಗ್
ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ಸಿಇಟಿ ಪರೀಕ್ಷೆಯ 5 ಪರೀಕ್ಷಾ ಕೇಂದ್ರಗಳಲ್ಲಿ ವೆಬ್ ಕಾಸ್ಟಿಂಗ್ ಕಡ್ಡಾಯವಾಗಿದೆ. ಯಾವುದೇ ಲೋಪಗಳು ಉಂಟಾಗದಂತೆ ಪರೀಕ್ಷೆಗಳು ಸುಗಮವಾಗಿ ನಡೆಸಲು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ.
ಸಿಇಟಿ ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ವರೆಗೆ ನಿಷೇಧಾಜ್ಞೆ ಜಾರಿ ಇರುತ್ತದೆ. ಝೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ಪೊಲೀಸ್ ಬಂದೋಬಸ್ತ್ ಸೇರಿದಂತೆ ಎಲ್ಲಾ ಪರೀಕ್ಷಾ ಕೊಠಡಿಗಳಲ್ಲಿ ಮೂಲ ಸೌಕರ್ಯಗಳ ಕಲ್ಪಿಸುವ ವ್ಯವಸ್ಥೆ ಮಾಡಲಾಗಿದೆ ಎಂದರು.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…