2023-ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 13 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಐದನೇಯ ದಿನವಾದ ಏ.17ರಂದು ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 16 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಮಾಹಿತಿ ನೀಡಿದರು.
ಜಿಲ್ಲೆಯ 178-ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿ.ಜೆ.ಪಿ. ಪಕ್ಷದ ಅಭ್ಯರ್ಥಿಯಾಗಿ ಎನ್.ನಾಗರಾಜ್ , ಐ.ಎನ್.ಸಿ ಪಕ್ಷದ ಅಭ್ಯರ್ಥಿಯಾಗಿ ಶರತ್ ಕುಮಾರ್ ಬಚ್ಚೇಗೌಡ , ಪಕ್ಷೇತರ ಅಭ್ಯರ್ಥಿಗಳಾಗಿ ಅಜಯ್ ಕುಮಾರ್ ರೆಡ್ಡಿ ಆಡಲಾ, ಎಚ್.ಟಿ ಶಶಿ ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ.
179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿ.ಜೆ.ಪಿ ಪಕ್ಷದ ಅಭ್ಯರ್ಥಿಯಾಗಿ ಪಿಳ್ಳಮುನಿಶಾಮಪ್ಪ , ಐ.ಎನ್.ಸಿ ಪಕ್ಷದ ಅಭ್ಯರ್ಥಿಯಾಗಿ ಕೆ.ಎಚ್ ಮುನಿಯಪ್ಪ , ಜೆ.ಡಿ.ಎಸ್ ಪಕ್ಷದ ಅಭ್ಯರ್ಥಿಯಾಗಿ ನಿಸರ್ಗ ನಾರಾಯಣಸ್ವಾಮಿ, ಪಕ್ಷೇತರ ಅಭ್ಯರ್ಥಿಯಾಗಿ ನಾರಾಯಣಸ್ವಾಮಿ.ಎಂ ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿ.ಜೆ.ಪಿ ಪಕ್ಷದ ಅಭ್ಯರ್ಥಿಯಾಗಿ ಧೀರಜ್ ಮುನಿರಾಜು , ಐ.ಎನ್.ಸಿ ಪಕ್ಷದ ಅಭ್ಯರ್ಥಿಯಾಗಿ ಟಿ.ವೆಂಕಟರಮಣಯ್ಯ , ಎ.ಎ.ಪಿ ಪಕ್ಷದ ಅಭ್ಯರ್ಥಿಯಾಗಿ ಪುರುಷೋತ್ತಮ , ಪಕ್ಷೇತರ ಅಭ್ಯರ್ಥಿಯಾಗಿ ಆನಂದಮೂರ್ತಿ , ಇತರೆ ಪಕ್ಷದಡಿ ರವಿಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ.
181- ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಐ.ಎನ್. ಸಿ ಪಕ್ಷದ ಅಭ್ಯರ್ಥಿಯಾಗಿ ಶ್ರೀನಿವಾಸಯ್ಯ.ಎನ್ , ಜೆ.ಡಿ.ಎಸ್ ಪಕ್ಷದ ಅಭ್ಯರ್ಥಿಯಾಗಿ ಡಾ.ಕೆ.ಶ್ರೀನಿವಾಸಮೂರ್ತಿ , ಇತರೆ ಪಕ್ಷದಡಿ ಅರುಣ್ ಕುಮಾರ್ಬಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮಾಹಿತಿ ನೀಡಿದ್ದಾರೆ.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…