ಏ.19ಕ್ಕೆ ಸಾಸಲು ಚಿನ್ನಮ್ಮ ಉತ್ಸವ-2026

ಸಾಸಲು ಚಿನ್ನಮ್ಮ ಉತ್ಸವ ಸಮಿತಿ ವತಿಯಿಂದ ಸಾಸಲು ಚಿನ್ನಮ್ಮ ಉತ್ಸವ-2026 ಕಾರ್ಯಕ್ರಮವನ್ನು ಏ.19ರ ಭಾನುವಾರದಂದು ತಾಲೂಕಿನ ಸಾಸಲು ಗ್ರಾಮದ ಡಾ.ಬಿ.ಆರ್ ಅಂಬೇಡ್ಕರ್ ಪ್ರೌಢಶಾಲೆ ಆವರಣದಲ್ಲಿ ಆಯೋಜನೆ ಮಾಡಲಾಗಿದೆ ಎಂದು ತಾ.ಪಂ ಮಾಜಿ ಅಧ್ಯಕ್ಷ ಲಾವಣ್ಯ ನಾಗರಾಜ್ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.19ರ ಬೆಳಗ್ಗೆ 8 ಗಂಟೆಗೆ ಸಾದ್ವಿಮಣೆ ಸಾಸಲು ಚಿನ್ನಮ್ಮ ದೇವಾಲಯ ಮುಂಭಾಗದಿಂದ ಡಾ.ಬಿ.ಆರ್. ಅಂಬೇಡ್ಕರ್ ಪ್ರೌಢಶಾಲೆಯ ಸಾಸಲು ಚೆನ್ನಮ್ಮ ಉತ್ಸವ ವೇದಿಕೆ ತನಕ ಜಾನಪದ ಕಲಾ ತಂಡಗಳೊಂದಿಗೆ ಸಾಸಲು ಚಿನ್ನಮ್ಮ ಮೂರ್ತಿಯನ್ನು ಚಿಲಕಲ ಬಂಡಿ ಮೂಲಕ ಮೆರವಣಿಗೆ ನಡೆಸಲಾಗುವುದು ಎಂದು ತಿಳಿಸಿದರು.

ಬೆಳಗ್ಗೆ 10 ಗಂಟೆಗೆ ಸಾಹಿತಿಗಳಾದ ಡಾ.ಡಿ.ಕೆ.ಚಿತ್ತಯ್ಯ ಪೂಜಾರ್ ಅವರು ಸಮಾರಂಭವನ್ನು ಉದ್ಘಾಟನೆ ಮಾಡಲಿದ್ದಾರೆ. ಜಾನಪದ ವಿದ್ವಾಂಸರಾದ ಸಣ್ಣ ನಾಗಪ್ಪನವರಿಂದ ಸಾಸಲು ಚಿನ್ನಮ್ಮ ಪರಿಚಯದ ಕಿರುಪುಸ್ತಕ ಬಿಡುಗಡೆಯಾಗಲಿದೆ ಎಂದರು.

ಮುಖ್ಯ ಅತಿಥಿಗಳಾಗಿ ಶಾಸಕ ಧೀರಾಜ್ ಮುನಿರಾಜು, ಶಾಸಕರು, ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಕಿಮ್ಸ್ ಆಸ್ಪತ್ರೆ ಮಾಜಿ ಅಧ್ಯಕ್ಷರಾದ ಬಿ. ಮುನೇಗೌಡ ಭಾಗವಹಿಸಲಿದ್ದಾರೆ.. ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಪಿ. ಗೋವಿಂದರಾಜು ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದರು.

ಮಧ್ಯಾಹ್ನ 12 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿರುತ್ತದೆ. ಸಾಸಲು ಹೋಬಳಿ ಕುರಿತು ಚಿಂತನ-ಮಂಥನ ಕಾರ್ಯಕ್ರಮ ಆಯೋಜನೆ. ರಾತ್ರಿ 7 ಗಂಟೆಗೆ ಸಾಸಲು ಚೆನ್ನಮ್ಮ ಕುರಿತ ನಾಟಕ ಇರಲಿದೆ ಎಂದರು.

ಈ ವೇಳೆ ವಕೀಲ ನರಸಿಂಹಗೌಡ, ರಮೇಶ್, ಪಿಡಿಒ ಶ್ರೀನಿವಾಸ್, ಜಿ.ಎಂ ನಾಗರಾಜ್, ರಾಜಘಟ್ಟ ರವಿ, ಪೊಲೀಸ್ ಚಂದ್ರಶೇಖರ್(ಚಂದ್ರು) ಜಯರಾಮ್ ಸೇರಿದಂತೆ ಇತರರು ಉಪಸ್ಥಿತರಿದ್ದರು…

Ramesh Babu

Journalist

Recent Posts

ಲವ್ ಜಿಹಾದ್ ಮತ್ತೊಮ್ಮೆ ಇಡೀ ದೇಶಾದ್ಯಂತ ಮಾಧ್ಯಮಗಳಲ್ಲಿ ಚರ್ಚೆ

ಲವ್ ಜಿಹಾದ್....... ಪ್ರೀತಿ - ಪ್ರೇಮದ ಧರ್ಮ ಯುದ್ಧ..... ಒಂದು ಆತ್ಮಾವಲೋಕನ,..... ನಿಜ ಪ್ರೀತಿಯನ್ನು ಅನುಮಾನದಿಂದ ನೋಡುವ ಅತ್ಯಂತ ಕೆಟ್ಟ,…

7 hours ago

ಪ್ರಸ್ತುತ 114 ತಾಲೂಕುಗಳ 598 ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ- ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ, ಜಾನುವಾರುಗಳ…

18 hours ago

LKG, UKG ತರಗತಿಗಳಿಗೆ ಉಚಿತ ಪ್ರವೇಶ ಪಡೆಯಲು ಅರ್ಜಿ ಆಹ್ವಾನ

2026-27ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ನಿದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು (ವಿಜಯಪುರ) ದಲ್ಲಿ ಕಾರ್ಯನಿರ್ವಹಿಸುತ್ತಿರುವ…

20 hours ago

ಇಸ್ರೇಲ್ ಮತ್ತು ಬೆಂಜಮಿನ್ ನೆತನ್ಯಾಹು……

ಶೌರ್ಯ, ಕ್ರೌರ್ಯ, ಆದರ್ಶ ಮತ್ತು ಎಚ್ಚರಿಕೆ....... ಇಸ್ರೇಲ್ ದೇಶದ ದ್ವೇಷದ ಬೆಂಕಿ ತನ್ನ ತಾನು ಸುಡುವುದಲ್ಲದೆ ಇತರರನ್ನೂ ಸುಡುತ್ತಿದೆ..... ಇಸ್ರೇಲ್…

1 day ago

ಮೂರನೇ ಮಹಡಿ ಮೇಲಿಂದ ತಳ್ಳಿ ತಾಯಿಯ ಜೀವ ತೆಗೆದ ಪಾಪಿ ಮಗ

ಮಗನಿಂದಲೇ ತಾಯಿ ಕೊಲೆಯಾಗಿರುವ ಘಟನೆ‌ ಇಂದು ಮಧ್ಯಾಹ್ನ ಬೆಂಗಳೂರಿನ ಆರ್ ಆರ್ ನಗರದ ಬೆಮಲ್ ಲೇಔಟ್ ನಲ್ಲಿ ನಡೆದಿದೆ... ಮೂರನೇ…

2 days ago

ಕುಡಿಯುವ ನೀರು ಸಮಸ್ಯೆಗೆ ಸಹಾಯವಾಣಿ ಆರಂಭ: ದೂರವಾಣಿ ಸಂಖ್ಯೆ ಇಲ್ಲಿದೆ ನೋಡಿ

ಬೇಸಿಗೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಸಾರ್ವಜನಿಕರು ಸಹಾಯವಾಣಿಗೆ…

2 days ago