ಏ.19ಕ್ಕೆ ಸಾಸಲು ಚಿನ್ನಮ್ಮ ಉತ್ಸವ-2026

ಸಾಸಲು ಚಿನ್ನಮ್ಮ ಉತ್ಸವ ಸಮಿತಿ ವತಿಯಿಂದ ಸಾಸಲು ಚಿನ್ನಮ್ಮ ಉತ್ಸವ-2026 ಕಾರ್ಯಕ್ರಮವನ್ನು ಏ.19ರ ಭಾನುವಾರದಂದು ತಾಲೂಕಿನ ಸಾಸಲು ಗ್ರಾಮದ ಡಾ.ಬಿ.ಆರ್ ಅಂಬೇಡ್ಕರ್ ಪ್ರೌಢಶಾಲೆ ಆವರಣದಲ್ಲಿ ಆಯೋಜನೆ ಮಾಡಲಾಗಿದೆ ಎಂದು ತಾ.ಪಂ ಮಾಜಿ ಅಧ್ಯಕ್ಷ ಲಾವಣ್ಯ ನಾಗರಾಜ್ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.19ರ ಬೆಳಗ್ಗೆ 8 ಗಂಟೆಗೆ ಸಾದ್ವಿಮಣೆ ಸಾಸಲು ಚಿನ್ನಮ್ಮ ದೇವಾಲಯ ಮುಂಭಾಗದಿಂದ ಡಾ.ಬಿ.ಆರ್. ಅಂಬೇಡ್ಕರ್ ಪ್ರೌಢಶಾಲೆಯ ಸಾಸಲು ಚೆನ್ನಮ್ಮ ಉತ್ಸವ ವೇದಿಕೆ ತನಕ ಜಾನಪದ ಕಲಾ ತಂಡಗಳೊಂದಿಗೆ ಸಾಸಲು ಚಿನ್ನಮ್ಮ ಮೂರ್ತಿಯನ್ನು ಚಿಲಕಲ ಬಂಡಿ ಮೂಲಕ ಮೆರವಣಿಗೆ ನಡೆಸಲಾಗುವುದು ಎಂದು ತಿಳಿಸಿದರು.

ಬೆಳಗ್ಗೆ 10 ಗಂಟೆಗೆ ಸಾಹಿತಿಗಳಾದ ಡಾ.ಡಿ.ಕೆ.ಚಿತ್ತಯ್ಯ ಪೂಜಾರ್ ಅವರು ಸಮಾರಂಭವನ್ನು ಉದ್ಘಾಟನೆ ಮಾಡಲಿದ್ದಾರೆ. ಜಾನಪದ ವಿದ್ವಾಂಸರಾದ ಸಣ್ಣ ನಾಗಪ್ಪನವರಿಂದ ಸಾಸಲು ಚಿನ್ನಮ್ಮ ಪರಿಚಯದ ಕಿರುಪುಸ್ತಕ ಬಿಡುಗಡೆಯಾಗಲಿದೆ ಎಂದರು.

ಮುಖ್ಯ ಅತಿಥಿಗಳಾಗಿ ಶಾಸಕ ಧೀರಾಜ್ ಮುನಿರಾಜು, ಶಾಸಕರು, ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಕಿಮ್ಸ್ ಆಸ್ಪತ್ರೆ ಮಾಜಿ ಅಧ್ಯಕ್ಷರಾದ ಬಿ. ಮುನೇಗೌಡ ಭಾಗವಹಿಸಲಿದ್ದಾರೆ.. ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಪಿ. ಗೋವಿಂದರಾಜು ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದರು.

ಮಧ್ಯಾಹ್ನ 12 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿರುತ್ತದೆ. ಸಾಸಲು ಹೋಬಳಿ ಕುರಿತು ಚಿಂತನ-ಮಂಥನ ಕಾರ್ಯಕ್ರಮ ಆಯೋಜನೆ. ರಾತ್ರಿ 7 ಗಂಟೆಗೆ ಸಾಸಲು ಚೆನ್ನಮ್ಮ ಕುರಿತ ನಾಟಕ ಇರಲಿದೆ ಎಂದರು.

ಈ ವೇಳೆ ವಕೀಲ ನರಸಿಂಹಗೌಡ, ರಮೇಶ್, ಪಿಡಿಒ ಶ್ರೀನಿವಾಸ್, ಜಿ.ಎಂ ನಾಗರಾಜ್, ರಾಜಘಟ್ಟ ರವಿ, ಪೊಲೀಸ್ ಚಂದ್ರಶೇಖರ್(ಚಂದ್ರು) ಜಯರಾಮ್ ಸೇರಿದಂತೆ ಇತರರು ಉಪಸ್ಥಿತರಿದ್ದರು…

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

11 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

1 day ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago