ಏ.24ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 ಆರಂಭ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ  ದ್ವಿತೀಯ ಪಿಯುಸಿ ಪರೀಕ್ಷೆ-2 ಏಪ್ರಿಲ್ 24 ರಿಂದ ಪ್ರಾರಂಭಗೊಳ್ಳುತ್ತಿದೆ. ಜಿಲ್ಲೆಯ  4 ಪರೀಕ್ಷಾ ಕೇಂದ್ರಗಳಲ್ಲಿ  ಒಟ್ಟು 2641 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ 2ನ್ನು ತೆಗೆದುಕೊಂಡಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ   ಶಾಲಾ ಶಿಕ್ಷಣ ಇಲಾಖೆ ( ಪದವಿಪೂರ್ವ) ಉಪನಿರ್ದೇಶಕ ಎನ್. ಮೋಹನ್ ಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆ 2 ಕುರಿತು ಮಾಹಿತಿ ನೀಡಿ,   ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಸರ್ಕಾರಿ ಪದವಿಪೂರ್ವ ಕಾಲೇಜು, ದೇವನಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜು, ಹೊಸಕೋಟೆ
ಸರ್ಕಾರಿ ಪದವಿಪೂರ್ವ ಕಾಲೇಜು ಮತ್ತು ನೆಲಮಂಗಲ ಸರ್ಕಾರಿ ಪದವಿಪೂರ್ವ ಕಾಲೇಜು ಒಟ್ಟು 4 ಪರೀಕ್ಷಾ ಕೇಂದ್ರಗಳಾಗಿವೆ.‌ ದ್ವಿತೀಯ ಪಿಯುಸಿ ಪರೀಕ್ಷಾ 1 ರಲ್ಲಿ ಹೊಸ ವಿದ್ಯಾರ್ಥಿಗಳು ‌(ಅನುತ್ತೀರ್ಣರಾದ) 1659, ಖಾಸಗಿ ವಿದ್ಯಾರ್ಥಿಗಳು 03, ಪುನರಾವರ್ತಿತ (2025ಕ್ಕಿಂತ ಮೊದಲಿನವರು) 184, ಅಂಕ ಸುಧಾರಣೆ ಬಯಸಿರುವ 795 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ 2 ಬರೆಯಲಿದ್ದಾರೆ ಎಂದರು.

ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ
ಏಪ್ರಿಲ್ 24 ರಿಂದ ಪ್ರಾರಂಭಗೊಳ್ಳುತ್ತಿರುವ ದ್ವಿತೀಯ ಪಿಯುಸಿ ಪರೀಕ್ಷೆ 2 ಕುರಿತು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಪೂರ್ವ ಸಿದ್ದತಾ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಭಾಗವಹಿಸಿ ಮಾತನಾಡಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ 2 ಪಾರದರ್ಶಕವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು ಎಲ್ಲಾ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಜಿಲ್ಲೆಯ ನಾಲ್ಕು ತಾಲ್ಲೂಕಿನ ಪರೀಕ್ಷಾ ಕೇಂದ್ರಗಳ ಕೊಠಡಿಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಿ, ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.

ಸಕಲ ಸಿದ್ದತೆ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಮತ್ತು ಜಿಲ್ಲಾಡಳಿತದ  ಮಾರ್ಗದರ್ಶನದಂತೆ     ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕತೆ ಮತ್ತು ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಸಿದ್ದತೆ ನಡೆದಿದೆ.‌

ಕಾನೂನು ವ್ಯವಸ್ಥೆ :-  ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ಪರೀಕ್ಷಾ ಕೇಂದ್ರಗಳಲ್ಲೂ ಜಾಗೃತ ದಳ‌ ವ್ಯವಸ್ಥೆ  ಜೊತೆಗೆ  ಪೊಲೀಸ್‌ ಭದ್ರತಾ ವ್ಯವಸ್ಥೆ, ಪರೀಕ್ಷಾ ಕೇಂದ್ರದ  ಸುತ್ತಲೂ 200 ಮೀಟರ್ ಸುತ್ತಳತೆಯಲ್ಲಿ ನಿಷೇಧಾಜ್ಞೆ,  ಜೆರಾಕ್ಸ್ ಅಂಗಡಿಗಳು ಹಾಗೂ ಕಂಪ್ಯೂಟರ್ ಕೇಂದ್ರಗಳು ಮುಚ್ಚುವುದು ಸೇರಿದಂತೆ ಎಲ್ಲಾ ಅಗತ್ಯ ವ್ಯವಸ್ಥೆ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ( ಪದವಿಪೂರ್ವ) ಉಪನಿರ್ದೇಶಕ ಎನ್. ಮೋಹನ್ ಕುಮಾರ್‌ ತಿಳಿಸಿದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

1 hour ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

1 hour ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

4 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

5 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

9 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

13 hours ago