ಏ.24ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 ಆರಂಭ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ  ದ್ವಿತೀಯ ಪಿಯುಸಿ ಪರೀಕ್ಷೆ-2 ಏಪ್ರಿಲ್ 24 ರಿಂದ ಪ್ರಾರಂಭಗೊಳ್ಳುತ್ತಿದೆ. ಜಿಲ್ಲೆಯ  4 ಪರೀಕ್ಷಾ ಕೇಂದ್ರಗಳಲ್ಲಿ  ಒಟ್ಟು 2641 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ 2ನ್ನು ತೆಗೆದುಕೊಂಡಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ   ಶಾಲಾ ಶಿಕ್ಷಣ ಇಲಾಖೆ ( ಪದವಿಪೂರ್ವ) ಉಪನಿರ್ದೇಶಕ ಎನ್. ಮೋಹನ್ ಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆ 2 ಕುರಿತು ಮಾಹಿತಿ ನೀಡಿ,   ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಸರ್ಕಾರಿ ಪದವಿಪೂರ್ವ ಕಾಲೇಜು, ದೇವನಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜು, ಹೊಸಕೋಟೆ
ಸರ್ಕಾರಿ ಪದವಿಪೂರ್ವ ಕಾಲೇಜು ಮತ್ತು ನೆಲಮಂಗಲ ಸರ್ಕಾರಿ ಪದವಿಪೂರ್ವ ಕಾಲೇಜು ಒಟ್ಟು 4 ಪರೀಕ್ಷಾ ಕೇಂದ್ರಗಳಾಗಿವೆ.‌ ದ್ವಿತೀಯ ಪಿಯುಸಿ ಪರೀಕ್ಷಾ 1 ರಲ್ಲಿ ಹೊಸ ವಿದ್ಯಾರ್ಥಿಗಳು ‌(ಅನುತ್ತೀರ್ಣರಾದ) 1659, ಖಾಸಗಿ ವಿದ್ಯಾರ್ಥಿಗಳು 03, ಪುನರಾವರ್ತಿತ (2025ಕ್ಕಿಂತ ಮೊದಲಿನವರು) 184, ಅಂಕ ಸುಧಾರಣೆ ಬಯಸಿರುವ 795 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ 2 ಬರೆಯಲಿದ್ದಾರೆ ಎಂದರು.

ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ
ಏಪ್ರಿಲ್ 24 ರಿಂದ ಪ್ರಾರಂಭಗೊಳ್ಳುತ್ತಿರುವ ದ್ವಿತೀಯ ಪಿಯುಸಿ ಪರೀಕ್ಷೆ 2 ಕುರಿತು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಪೂರ್ವ ಸಿದ್ದತಾ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಭಾಗವಹಿಸಿ ಮಾತನಾಡಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ 2 ಪಾರದರ್ಶಕವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು ಎಲ್ಲಾ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಜಿಲ್ಲೆಯ ನಾಲ್ಕು ತಾಲ್ಲೂಕಿನ ಪರೀಕ್ಷಾ ಕೇಂದ್ರಗಳ ಕೊಠಡಿಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಿ, ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.

ಸಕಲ ಸಿದ್ದತೆ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಮತ್ತು ಜಿಲ್ಲಾಡಳಿತದ  ಮಾರ್ಗದರ್ಶನದಂತೆ     ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕತೆ ಮತ್ತು ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಸಿದ್ದತೆ ನಡೆದಿದೆ.‌

ಕಾನೂನು ವ್ಯವಸ್ಥೆ :-  ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ಪರೀಕ್ಷಾ ಕೇಂದ್ರಗಳಲ್ಲೂ ಜಾಗೃತ ದಳ‌ ವ್ಯವಸ್ಥೆ  ಜೊತೆಗೆ  ಪೊಲೀಸ್‌ ಭದ್ರತಾ ವ್ಯವಸ್ಥೆ, ಪರೀಕ್ಷಾ ಕೇಂದ್ರದ  ಸುತ್ತಲೂ 200 ಮೀಟರ್ ಸುತ್ತಳತೆಯಲ್ಲಿ ನಿಷೇಧಾಜ್ಞೆ,  ಜೆರಾಕ್ಸ್ ಅಂಗಡಿಗಳು ಹಾಗೂ ಕಂಪ್ಯೂಟರ್ ಕೇಂದ್ರಗಳು ಮುಚ್ಚುವುದು ಸೇರಿದಂತೆ ಎಲ್ಲಾ ಅಗತ್ಯ ವ್ಯವಸ್ಥೆ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ( ಪದವಿಪೂರ್ವ) ಉಪನಿರ್ದೇಶಕ ಎನ್. ಮೋಹನ್ ಕುಮಾರ್‌ ತಿಳಿಸಿದರು.

Ramesh Babu

Journalist

Recent Posts

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

9 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

11 hours ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

17 hours ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

18 hours ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

1 day ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

1 day ago